ಕಾರ್ಕಳ (ಮೇ,5): ಕೇಂದ್ರ ಲೋಕಸೇವಾ ಆಯೋಗ (UPSC) ಎಪ್ರಿಲ್ 16, 2023 ರಲ್ಲಿ ನಡೆಸಿದ ಅತ್ಯಂತ ರಾಷ್ಟ್ರಮಟ್ಟದ ಎನ್.ಡಿ.ಎ/ಎನ್.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ.ಪೂ ಕಾಲೇಜಿನ 03 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪುಣೆಯ ಖಡಕ್ವಾಸ್ಲದಲ್ಲಿರುವ NDA ತರಬೇತಿ ಸಂಸ್ಥೆಯಲ್ಲಿ ಬಿ.ಟೆಕ್ ಅಥವಾ ಬಿ.ಎಸ್.ಸಿ ಪದವಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗಾಗಿ ನಡೆಯುವ ಪರೀಕ್ಷೆಗೆ ದೇಶದಾದ್ಯಂತ ಸುಮಾರು 2.24 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ 7,964 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಪರೀಕ್ಷೆಯಲ್ಲಿ ಆಯ್ಕೆಯಾದ […]
Tag: creative pu karkala
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಜೆ.ಇ.ಇ ಮೈನ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ
ಕಾರ್ಕಳ(ಎ,29): ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ (NATIONAL TEST AGENCY) ಎಪ್ರಿಲ್ ತಿಂಗಳಿನಲ್ಲಿ ನಡೆಸಿದ ಎರಡನೇ ಹಂತದ JEE Main ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ರಾಷ್ಟ್ರ ಮಟ್ಟದಲ್ಲಿ ನಡೆದ ಈ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳಾದ ಉದ್ಭವ್ ಎಂ. ಆರ್. ಆಲ್ ಇಂಡಿಯಾ ರ್ಯಾಂಕಿಂಗ್ ಕ್ಯಾಟಗರಿ ವಿಭಾಗದಲ್ಲಿ 152 ನೇ ರ್ಯಾಂಕ್, ಜಾಗೃತಿ ಕೆ ಪಿ 158 ನೇ ರ್ಯಾಂಕ್ ಗಳಿಸಿದ್ದಾರೆ. ಕಾರ್ತಿಕ್ ಕೃಷ್ಣಮೂರ್ತಿ ಹೆಗಡೆ ಭೌತಶಾಸ್ತ್ರದಲ್ಲಿ 100 ಪರ್ಸಂಟೈಲ್ನೊಂದಿಗೆ […]
ಪ್ರತಿಭೆ, ಸಮಯ, ಸ್ಪೂರ್ತಿ ಇದ್ದರೆ ಸಾಹಿತ್ಯದ ಬೆಳವಣಿಗೆ”- ಶ್ರೀ ನೀಲಾವರ ಸುರೇಂದ್ರ ಅಡಿಗ
ಉಡುಪಿ (ಎ,27): ಕ್ರಿಯೇಟಿವ್ ಪದವಿಪೂರ್ವ ಕಾಲೇಜ್ ಉಡುಪಿಯಲ್ಲಿ ಸಾಹಿತ್ಯಸಾಂಗತ್ಯ-6 ಕಾರ್ಯಕ್ರಮದಡಿ ಹಮ್ಮಿಕೊಂಡಿರುವ ಸಾಹಿತ್ಯದೆಡೆಗೆ ಯುವಜನತೆ ಎಂಬ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ನೀಲಾವರ ಸುರೇಂದ್ರ ಅಡಿಗರ ಕಾಲೇಜಿನ ವಿದ್ಯಾರ್ಥಿಗಳನ್ನು ಕುರಿತು ಮಾತುಗಳನ್ನಾಡಿದರು. ಪ್ರತಿಭೆ, ಸಮಯ, ಸ್ಪೂರ್ತಿ ಇದ್ದರೆ ಸಾಹಿತ್ಯ ಬೆಳವಣಿಗೆಯಾಗುತ್ತದೆ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಾಹಿತ್ಯವನ್ನು ಮೈಗೂಡಿಸಿಕೊಳ್ಳುವುದರಿಂದ ಅವರ ಸಂಪೂರ್ಣ ವ್ಯಕ್ತಿತ್ವ ವಿಕಾಸಗೊಳ್ಳುತ್ತದೆ.ಮತ್ತು ಧನಾತ್ಮಕವಾಗಿ ಚಿಂತಿಸುವುದರಿಂದ ವ್ಯಕ್ತಿ ಯಶಸ್ಸನ್ನು ಗಳಿಸಲು ಸಾಧ್ಯವಾಗುತ್ತದೆ […]
ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಶೇ. 100 ಫಲಿತಾಂಶ- ಏಳು ರ್ಯಾಂಕ್
ಕಾರ್ಕಳ( ಎ ,21): 2022-23 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸತತ ಎರಡನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತ ಎಲ್ಲಾ 380 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಪ್ರಸ್ತುತ್ ಪಟೇಲ್ 592 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರ್ಯಾಂಕ್ , ಸುಮಂತ್ ಶೆಟ್ಟಿ 591 […]
ಜಗತ್ತು ವಿಶೇಷ ಪ್ರತಿಭೆಗಳನ್ನು ಗುರುತಿಸುತ್ತದೆ-ಜೆಸಿಐ ರಾಷ್ಟ್ರೀಯ ತರಬೇತುದಾರ ಕೆ. ರಾಜೇಂದ್ರ ಭಟ್
ಕಾರ್ಕಳ (ಎ,19): ವಿಶೇಷ ಪರಿಶ್ರಮದಿಂದ ಕೂಡಿದ ಪ್ರಯತ್ನ ಯಶಸ್ಸನ್ನು ದೊರಕಿಸಿಕೊಡುತ್ತದೆ. ತನ್ಮೂಲಕ ವಿಶ್ವವ್ಯಾಪಿಯನ್ನಾಗಿಸಿ ಪ್ರಪಂಚವನ್ನು ಆಳಲು ತೊಡಗುತ್ತದೆ. ಆದ್ದರಿಂದ ಕ್ರಿಯಾಶೀಲತೆಯೇ ಇಂದಿನ ವಿದ್ಯಾರ್ಥಿಗಳಿಗೆಪ್ರೇರಣೆಯಾಗಲಿ ಎಂದು ಜೆಸಿಐ ರಾಷ್ಟ್ರೀಯ ತರಬೇತುದಾರ,ಖ್ಯಾತ ವಾಗ್ಮಿ ಕೆ. ರಾಜೇಂದ್ರ ಭಟ್ ನುಡಿದರು. ಅವರು ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಸಾಂಗತ್ಯ ಸರಣಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಸಾಧನೆಯ ಕಡೆಗೆ ತುಡಿತ, ಅವಕಾಶವನ್ನು ಸೃಷ್ಟಿಸುವುದು ನಮ್ಮ ಗುರಿಯಾಗಬೇಕೆಂದು ಕರೆ ನೀಡಿದರು. […]
ಕ್ರಿಯೇಟಿವ್ ಕಾಲೇಜ್ ಉಡುಪಿ :ಸಂವಿಧಾನ ಶಿಲ್ಪಿ ಡಾ. ಬಿ . ಆರ್ ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ
ಉಡುಪಿ(ಎ,14): ಮಹಾನ್ ಮಾನವತವಾದಿ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 132 ನೇ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಜಗತ್ತಿನಾದ್ಯಂತ ಅನೇಕ ವಿಶ್ವವಿದ್ಯಾನಿಲಯಗಳಲ್ಲಿ ಅತ್ಯುನ್ನತ ವಿದ್ಯಾಭ್ಯಾಸವನ್ನು ಮಾಡಿ, ಶೋಷಿತ ಸಮುದಾಯದ ಬಾಳಿನ ಬೆಳಕಾಗಿ, ಇಡೀ ವಿಶ್ವವೇ ಮೆಚ್ಚುವಂತಹ ಜಗತ್ತಿನ ಅತಿ ದೊಡ್ಡ , ಶ್ರೇಷ್ಠ ಸಂವಿಧಾನವನ್ನು ರಚಿಸಿದ ಕೀರ್ತಿ ಅಂಬೇಡ್ಕರ್ ರವರದ್ದು. ಅವರ ಕಠಿಣ ಪರಿಶ್ರಮ, ನಡೆದು ಬಂದ ದಾರಿ, ಅವರ ಜ್ಞಾನ, ಇಡೀ ವಿಶ್ವಕ್ಕೆ ಮಾದರಿ ಎಂದು […]
ಕ್ರಿಯೇಟಿವ್ ಕಾಲೇಜಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ
ಕಾರ್ಕಳ(ಎ,14): ಸಂವಿಧಾನ ಶಿಲ್ಪಿ ಡಾ| ಬಿ ಆರ್ ಅಂಬೇಡ್ಕರ್ ರವರ 132 ನೇ ಜಯಂತಿಯನ್ನು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು. ಡಾ| ಬಿ ಆರ್ ಅಂಬೇಡ್ಕರ್ ರವರು ವಿದೇಶದಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಡಾಕ್ಟರೇಟ್ (ಪಿಹೆಚ್ಡಿ) ಪದವಿ ಪಡೆದ ಮೊದಲ ಭಾರತೀಯ. ಸುಮಾರು 64 ವಿಷಯಗಳಲ್ಲಿ ಸ್ನಾತಕೊತ್ತರ ಪದವಿಗಳನ್ನು ಹಾಗೂ ಒಂಬತ್ತು ಭಾಷೆಗಳನ್ನು ಬಲ್ಲವರಾಗಿದ್ದರು. ವಿಶ್ವದರ್ಜೆಯ ವಕೀಲರು, ಸಾಮಾಜ ಸುಧಾರಕರೂ ಆಗಿದ್ದವರು. ಭಾರತದ ದಲಿತ ಚಳವಳಿಗಳ ಹಿಂದಿನ ಶಕ್ತಿ ಎಂಬ […]
ಸಾಹಿತ್ಯಕ್ಕೆ ಭಾವನೆಗಳನ್ನು ಉದ್ದೀಪಿಸುವ ಶಕ್ತಿಯಿದೆ: ಶ್ರೀ ಮುನಿರಾಜ ರೆಂಜಾಳ
ಕಾರ್ಕಳ( ಮಾ.17): ಸಾಹಿತ್ಯ ಸರ್ವವ್ಯಾಪಿಯಾದುದು. ಸಾಹಿತ್ಯದ ರಸಭಾವಗಳನ್ನು ಅರಿತರೆ ಬದುಕಿನ ದಾರಿ ದೀಪವಾಗಬಲ್ಲದು. ಜೀವನದಲ್ಲಿ ನಾವು ಸಾಹಿತ್ಯ ಮತ್ತು ನೈತಿಕ ಮೌಲ್ಯಗಳಿಗೆ ತೆರೆದುಕೊಂಡಾಗ ಹೊಸ ದೃಷ್ಟಿ ಗೋಚರಿಸುತ್ತದೆ. ಮನಸ್ಸಿನ ತೃಪ್ತಿಗಾಗಿ ನಾವೆಲ್ಲ ಪುಸ್ತಕ ಪ್ರೀತಿಯನ್ನು, ಓದುವಿಕೆಯನ್ನು ಅಳವಡಿಸಿಕೊಳ್ಳಬೇಕಾಗಿದೆ. ಎಂದು ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳರು ನುಡಿದರು. ಅವರು ಹಿರ್ಗಾನದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಾಹಿತ್ಯ ಸಾಂಗತ್ಯ ಸರಣಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. […]
ವಿದ್ಯಾರ್ಥಿಗಳು ಸಾಂಸ್ಕೃತಿಕ ಕ್ಷೇತ್ರ ಮತ್ತು ಸಾಹಿತ್ಯದ ಒಲವುಳ್ಳವರಾಗಬೇಕು: ಶ್ರೀ ವಿ.ಸುನೀಲ್ ಕುಮಾರ್
ಕಾರ್ಕಳ ( ಫೆ.11): ವಿದ್ಯಾರ್ಥಿಗಳು ಕೇವಲ ಅಂಕ ಗಳಿಕೆಗೆ ಮಾತ್ರ ಸೀಮಿತರಾಗದೇ ಶ್ರೀಮಂತವಾಗಿರುವ ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರಕ್ಕೂ ತಮನ್ನು ತೆರೆದುಕೊಳ್ಳಬೇಕು ಎಂದು ಸಚಿವ ಶ್ರೀ ವಿ.ಸುನೀಲ್ ಕುಮಾರ್ ಹೇಳಿದರು. ಅವರು ಕಾರ್ಕಳದ ಉಮಿಕ್ಕಳ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಡೆದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ನಡೆದ “ಪರಶುರಾಮ”ನಾಟಕ ಪ್ರದರ್ಶನ ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಎಸ್.ವಿ.ಟಿ. ವಿದ್ಯಾಸಂಸ್ಥೆಗಳ […]
ಕ್ರಿಯೇಟಿವ್ ಪಿ ಯು ಕಾಲೇಜು ಕಾರ್ಕಳ :ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ದೀಕ್ಷಾ ಆಚಾರ್ಯ ಹಾಗೂ ಶ್ರಾವ್ಯಾ ಸಿ.ಎಸ್ ಉತ್ತೀರ್ಣ
ಕಾರ್ಕಳ (ಫೆ.06): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ(ICAI) 2022 ರ ಡಿಸೆಂಬರ್ ನಲ್ಲಿ ನಡೆಸಿದ ಸಿ ಎ ಫೌಂಡೇಶನ್ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು ಕಾಲೇಜಿನ ಹಳೆವಿದ್ಯಾರ್ಥಿಗಳಾದ ದೀಕ್ಷಾ ಆಚಾರ್ಯ ಮತ್ತು ಶ್ರಾವ್ಯಾ ಸಿ.ಎಸ್ ಉತ್ತಮ ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿದ್ದಾರೆ. ಕ್ರಿಯೇಟಿವ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಥಮ ಪಿ.ಯು.ಸಿ ಯಿಂದಲೇ ಸಿ.ಎ ಮತ್ತು ಸಿ.ಎಸ್.ಇ.ಇ.ಟಿ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ. ಈ ಹಿಂದೆ […]










