ಕುಂದಾಪುರ( ನ,21): ಮಹಾರಾಷ್ಟ್ರ ಲಾತೂರು ಜಿಲ್ಲೆಯ ತುಳ್ಜಾಪುರ್ ನಲ್ಲಿ ನೆಡೆದ ಅಂತರ್ ಜಿಲ್ಲೆ ಲಾಠಿ ತಿರುಗಿಸುವ ಸ್ಪರ್ಧೆಯಲ್ಲಿ 22 ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು,ಅದರಲ್ಲಿ ಉಡುಪಿಯ ಬೈಂದೂರು ಮೂಲದ ಯಶ್ ರಾಜ್ ಚಂದನ್ ಪ್ರಥಮ ಬಹುಮಾನ ಪಡೆಯುವುದರೊಂದಿಗೆ ಚಿನ್ನದ ಪದಕ ಪಡೆದಿರುತ್ತಾರೆ. ಬೈಂದೂರು ಮೂಲದ ನಟರಾಜ್ ಚಂದನ್ ಮತ್ತು ಶಾರದಾ ಚಂದನ್ ಅವರ ಸುಪುತ್ರರಾಗಿರುವ ಯಶ್ ರಾಜ್ ಚಂದನ್ ಮಹಾರಾಷ್ಟ್ರದ ನೀಲಾಂಗದ ವಿ ಡಿ ಡಿ ನೊಬೆಲ್ ಪಬ್ಲಿಕ್ ಸ್ಕೂಲ್ ನಲ್ಲಿ […]
Tag: eshwara navunda
ಯಕ್ಷ ಕಲಾವಿದ ,ಅಬ್ಬರದ ಮಹಿಷಾಸುರ ಖ್ಯಾತಿಯ ನಂದೀಶ್ ಜನ್ನಾಡಿ
ನವರಸಗಳಿಂದ ಕೂಡಿದ ಒಂದು ಕಲಾ ಪ್ರಕಾರ ಇದೆ ಎಂದಾದರೆ ಅದು ಯಕ್ಷಗಾನ ಮಾತ್ರ. ಹಾಡುಗಾರಿಕೆ, ವೇಷ ಭೂಷಣಗಳ ಒಳಗೊಂಡ ಒಂದು ಸ್ವತಂತ್ರ ಕಲೆಯಾದ ಯಕ್ಷಗಾನ ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಚಿಕ್ಕಮಗಳೂರು, ಕೇರಳದ ಕಾಸರಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯಕ್ಷಗಾನವನ್ನು ಭಕ್ತಿಯಿಂದ ಆರಾಧನಾ ಕಲೆಯಾಗಿ ನಂಬಿದವರು ಇದ್ದಾರೆ. ಯಕ್ಷಗಾನವು ಮೂರು ತಿಟ್ಟುಗಳು ಬಡಗು ತಿಟ್ಟು, ತೆಂಕುತಿಟ್ಟು , ನಡುತಿಟ್ಟು ಎಂದು ವಿಂಗಡಿಸಲ್ಪಟ್ಟಿದ್ದರೂ ಆದರ ಮೂಲ ತತ್ವಗಳು ಮತ್ತು […]
ಅನಾರೋಗ್ಯದಿಂದ ಮೃತಪಟ್ಟ ವ್ಯಕ್ತಿಯ ಮೃತ ದೇಹವನ್ನು ತವರೂರಿಗೆ ತಲುಪಿಸಿದ ಈಶ್ವರ್ ಮಲ್ಪೆ
ಕುಂದಾಪುರ(ಅ,20): ಅನಾರೋಗ್ಯಕ್ಕೆ ಪೀಡಿತರಾದ ತೀರ್ಥಹಳ್ಳಿ ತಾಲ್ಲೂಕಿನ ಬಸಾವಣಿ ಮನೆಯ ವಿಜಯ್ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತ ಪಟ್ಟಿರುತ್ತಾರೆ. ಈ ಹಿಂದೆ ಶಿರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಕರ್ತವ್ಯ ನಿರ್ವಹಿಸುತ್ತಿದ್ದು ಇವರು 6 ತಿಂಗಳ ಹಿಂದೆ ಅನಾರೋಗ್ಯ ಸಮಸ್ಯೆಯಿಂದ ವೃತ್ತಿಯಿಂದ ದೂರವಿದ್ದು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ವಿಷಯ ತಿಳಿದ ತಕ್ಷಣ ಸಮಾಜ ಸೇವಕ ಈಶ್ವರ್ ಮಲ್ಪೆ ಉಡುಪಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಮೃತಪಟ್ಟಿರುವ ವಿಜಯ್ ಅವರ ಮೃತದೇಹವನ್ನು ತೀರ್ಥಹಳ್ಳಿ ತಾಲ್ಲೂಕಿನ ಬಸಾವಣಿ […]
ಆಲೂರು: ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ
ಕುಂದಾಪುರ(ಅ,10): ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೋಳೂರಿನ ಮಾಸ್ತಿ ಎಂಬುವವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯವರು ರಕ್ಷಿಸಿದ್ದಾರೆ. ಚಿರತೆಯು ಮಾಸ್ತಿಯವರ ಮನೆಯ ಆವರಣವಿಲ್ಲದ ಬಾವಿಗೆ ಬಿದ್ದಿದ್ದು ಸೋಮವಾರ ಬೆಳಿಗ್ಗೆ ಮನೆಯವರು ನೋಡಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆಯವರು ಬೋನನ್ನು ಬಾವಿಗೆ ಇಳಿಬಿಟ್ಟು ನಾಜೂಕಾಗಿ ಕಾರ್ಯಾಚರಣೆ ನಡೆಸಿ ಅಂದಾಜು 4-5 ವರ್ಷ ಪ್ರಾಯದ ಹೆಣ್ಣು ಚಿರತೆಯನ್ನು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಕುಂದಾಪುರ ವಲಯ ಅರಣ್ಯಾಧಿಕಾರಿ […]
ಡ್ರಾಮ ಜ್ಯುನಿಯರ್ ಖ್ಯಾತಿಯ ಬಾಲನಟಿ ಕುಂದಾಪುರದ ಕುವರಿ ಸಮೃದ್ಧಿ ಎಸ್ ಮೊಗವೀರ
ನಿಮ್ಮ ಮಕ್ಕಳನ್ನು ಪಠ್ಯದ ಕಲಿಕೆಯ ಪರಿದಿಗೆ ಮಾತ್ರ ಸೀಮಿತಗೊಳಿಸಬೇಡಿ ಎನ್ನುವ ರಾಷ್ಟ್ರಕವಿ ರವೀಂದ್ರನಾಥ ಟಾಗೋರ್ ರವರು ಹೇಳಿದ ಮಾತು ಈಗಿನ ಮಕ್ಕಳ ಪ್ರತಿಭೆ, ಕಲೆ, ಕೌಶಲ್ಯ, ಬುದ್ಧಿವಂತಿಕೆಯನ್ನು ಕಂಡಾಗ ನೂರಕ್ಕೆ ನೂರು ಪ್ರಸ್ತುತ ಅನ್ನಿಸುತ್ತದೆ. ಪ್ರೋತ್ಸಾಹ ಮತ್ತು ಸಹಕಾರ ದೊರೆತರೆ ಉತ್ತಮ ಕಲಾವಿದರಾಗಿ ಹೊರಹೊಮ್ಮುವ ಎಲ್ಲಾ ಲಕ್ಷಣವನ್ನು ನಮ್ಮ ಯುವ ಸಮುದಾಯ ಹೊಂದಿದೆ .ಆ ನಿಟ್ಟಿನಲ್ಲಿ ಬೆಳೆವ ಸಿರಿ ಮೊಳಕೆಯಲ್ಲಿ ಎಂಬಂತೆ ಡ್ರಾಮ ಜುನಿಯರ್ ಸೀಜನ್ -4 ಖ್ಯಾತಿಯ ಬಾಲಪ್ರತಿಭೆ ಕುಂದಾಪುರದ ಸಮೃದ್ಧಿ […]
ಕುಂದಾಪುರ ತಾಲ್ಲೂಕು ಪತ್ರಕರ್ತರ ಸಂಘ(ರಿ): ನೂತನ ಪದಾಧಿಕಾರಿಗಳ ಆಯ್ಕೆ
ಕುಂದಾಪುರ(ಏ.7): ಕುಂದಾಪುರ ತಾಲ್ಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಂಘದ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು. ಅಧ್ಯಕ್ಷರಾಗಿ ಕಿರಣ್ ಪೂಜಾರಿ,ಕಾರ್ಯದರ್ಶಿಯಾಗಿ ಸಂತೋಷ ಪಟೇಲ್, ಗೌರವಾಧ್ಯಕ್ಷರಾಗಿ ಎಸ್ ಸತೀಶ್ ಕುಮಾರ್ ಕೋಟೇಶ್ವರ ರವರನ್ನು ಆಯ್ಕೆ ಮಾಡಲಾಯಿತು. ಕಾನೂನು ಸಲಹೆಗಾರರಾಗಿ ಶ್ರೀ ರವಿಕಿರಣ್ ಮುರ್ಡೇಶ್ವರ ಮತ್ತು ಶ್ರೀ ಸೋಮನಾಥ ಹೆಗ್ಡೆ ಮತ್ತು ಸಂಘದ ಗೌರವ ಸಲಹೆಗಾರರಾಗಿ ಕುಂದಾಪುರ ಮಿತ್ರ ಪತ್ರಿಕೆಯ ಸಂಪಾದಕರಾದ ಟಿ. ಪಿ. ಮಂಜುನಾಥ್, ಉಪಾಧ್ಯಕ್ಷರಾಗಿ ಪ್ರದೀಪ್ ಪಟೇಲ್, ದಯಾನಂದ್ ನಾಯಕ್ ಮತ್ತು […]
ಕಟ್ ಬೆಲ್ತೂರು: ರಾಷ್ಟ್ರೀಯ ಮತದಾರರ ದಿನಾಚರಣೆ
ಕಟ್ಟ್ ಬೆಲ್ತೂರು(ಜ.29): ಇಲ್ಲಿನ ಸುಳ್ಸೆ ಗ್ರಾಮದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಣೆ, ಹೊಸ ಮತದಾರರಿಗೆ ಗುರುತಿನ ಚೀಟಿ ನೀಡಿ ಮತದಾರರ ಆದ್ಯ ಕರ್ತವ್ಯ ಮತ್ತು ರೀತಿ ನೀತಿ ನಿಯಮಗಳನ್ನು ಪ್ರತಿಜ್ಞಾ ವಿಧಿಯನ್ನು ಭೋಧಿಸುವ ಮೂಲಕ ತಿಳಿಸಲಾಯಿತು. ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ […]
ಕಂಬದಕೋಣೆ: ಲಿವರ್ ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿರುವ ಜಯಶ್ರೀ ಮೊಗವೀರಗೆ ಬೇಕಿದೆ ಸಹಾಯ ಹಸ್ತ
ಕಂಬದಕೋಣೆ(ಜ.18): ಕಂಬದಕೋಣೆ ನಿವಾಸಿಯಾದ ನಾಗರಾಜರವರ ಪತ್ನಿ ಜಯಶ್ರೀ ಮೊಗವೀರ ರವರು ದೀರ್ಘಕಾಲದಿಂದ ಲಿವರ್ ಕ್ಯಾನ್ಸರ್” ಸಮಸ್ಯೆಯಿಂದ ಬಳಲುತ್ತಿದ್ದು , ಪ್ರಸ್ತುತ ಇವರು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ ಚಿಕಿತ್ಸೆಗೆ ಸುಮಾರು 10 ಲಕ್ಷದವರಿಗೆ ಖರ್ಚಾಗಿದ್ದು, ಮುಂದಿನ ಚಿಕಿತ್ಸೆಗೆ 8ಲಕ್ಷ ಖರ್ಚಾಗಬಹುದು ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ . ಇಷ್ಟು ಖರ್ಚನ್ನು ಬರಿಸಲು ಈ ಬಡ ಕುಟುಂಬಕ್ಕೆ ಸಾಧ್ಯವಾಗುತ್ತಿಲ್ಲ ಹಾಗಾಗಿ ಸಹ್ರದಯಿ ದಾನಿಗಳು ಚಿಕಿತ್ಸೆಗೆ ನೆರವು ನೀಡಬೇಕೆಂದು ವಿನಂತಿಸಿಕೊಂಡಿದ್ದಾರೆ.ಧನ ಸಹಾಯ ಮಾಡುವವರು ಈ […]
ಮುಂಬೈ: ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿಯ ಅಧ್ಯಕ್ಷರಾಗಿ ರಾಜು ಮೆಂಡನ್ ಆಯ್ಕೆ
ಕುಂದಾಪುರ (ಜ.17 ): ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ ಮುಂಬೈಇದರ ನೂತನ ಅಧ್ಯಕ್ಷರಾಗಿ ಉದ್ಯಮಿ ರಾಜು ಮೆಂಡನ್ ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ನಡೆದ ಸಂಘದ ಕಾರ್ಯಕ್ರಮದಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಸಂದರ್ಭದಲ್ಲಿಶ್ರೀ ರಾಜು ಮೆಂಡನ್ ರವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಉದ್ಯಮಿ ರಮೇಶ್ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಮಂಜುನಾಥ್ ಎನ್ ನಾಯ್ಕ್, ಮೊಗವೀರ ಮುಖಂಡರುಗಳಾದ ಸುರೇಶ್ ಆರ್ ಕಾಂಚನ್, ಮಹಾಬಲ ಕುಂದರ್, ಎನ್ ಎಚ್ ಬಗ್ವಾಡಿ, ಸಂತೋಷ್ […]
ಮಲ್ಪೆ: ಈಜುಪಟು ಸುರೇಶ್ ಖಾರ್ವಿಯಿಂದ ಮೀನುಗಾರ ಮಹಿಳೆಯ ರಕ್ಷಣೆ
ಮಲ್ಪೆ(ಜ,17): ಇತ್ತೀಚೆಗೆ ಮಲ್ಪೆ ಬಂದರಿನಲ್ಲಿ ಮೀನು ಹೊರುವ ಮಹಿಳೆ ರಾತ್ರಿ ಸಂದರ್ಭದಲ್ಲಿ ಕೆಲಸ ನಿರ್ವಹಿಸುತಿರುವಾಗ ಆಯತಪ್ಪಿ ನೀರಿಗೆ ಬಿದ್ದ ಅಪಾಯದ ಸಂದರ್ಭದಲ್ಲಿ ಸ್ವಲ್ಪವೂ ತಡಮಾಡದೆ ಅಮೃತೇಶ್ವರಿ ಬೋಟಿನಲ್ಲಿ ದುಡಿಯುತ್ತಿದ್ದ ಜೀವರಕ್ಷಕ ಸುರೇಶ್ ಖಾರ್ವಿ ಭಟ್ಕಳ (ಬಂದರ್ ರೋಡ್ ) ತನ್ನ ಜೀವದ ಹಂಗು ತೊರೆದು ನೀರಿಗೆ ಹಾರಿ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಇವರ ಸಮಯ ಪ್ರಜ್ಞೆಯಿಂದಾಗಿ ಮಹಿಳೆ ಪ್ರಾಣಪಾಯದಿಂದ ಪಾರಾಗಿದ್ದಾರೆ. ಶ್ರೀ ಸುರೇಶ್ ಖಾರ್ವಿಯವರು ನುರಿತ ಈಜುಪಟು ಆಗಿದ್ದು, ತುರ್ತು ಸಮಯದಲ್ಲಿ ಹಲವಾರು […]










