ಕರಾವಳಿಯ ಸಾಂಸ್ಕ್ರತಿಕ ಹಿರಿಮೆಯ ಕಲೆಯಾದ ಯಕ್ಷಗಾನದ ಪ್ರಮುಖ ಕಲಾವಿದರುಗಳ ಪಟ್ಟಿ ಮಾಡುತ್ತ ಹೋದರೆ ಅಭಿಮಾನ್ಯು -ಅಭಿಮಾನ್ಯು -ಅಭಿಮಾನ್ಯು ಈ ಪ್ರಸಂಗದ ಅಭಿಮಾನಿಗಳ ಅಭಿಮನ್ಯು ಪಾತ್ರಕ್ಕೆ ಹೇಳಿ ಮಾಡಿಸಿದಂತಹ ಕಲಾವಿದರೆಂದರೆ ಅದು ಕೊಳಲಿ ಕೃಷ್ಣ ಶೆಟ್ಟಿಎಂದರೆ ಯಾರೂ ಅಲ್ಲಗಳೆಯುವಂತಿಲ್ಲ.ಹಿರಿಯ ಕಲಾವಿದ ಕೊಳಲಿ ಕೃಷ್ಣ ಶೆಟ್ಟಿಯವರಪರಿಚಯವನ್ನು ಸಂಗ್ರಹಿಸುವಾಗ ಮಾರಣಕಟ್ಟೆ ಮೇಳದ ಮೇರು ಭಾಗವತರಾದ ತಿಮ್ಮಪ್ಪ ದೇವಾಡಿಗ ಹೇರಂಜಾಲು ಈ ಪರಿಚಯ ಲೇಖನಕ್ಕೆ ಸಹಕರಿಸಿದ ಇವರನ್ನು ಸಹಕಾರವನ್ನು ಸ್ಮರಿಸಿಕೊಳ್ಳುತ್ತಾ ಕುಂದ ವಾಹಿನಿ ಮೂಲಕ ಕೊಳಲಿ ಕೃಷ್ಣ […]
Tag: eshwara navunda
ಯಕ್ಷಗಾನ ಕಲಾವಿದ ಕೋಡಿ ವಿಶ್ವನಾಥ ಗಾಣಿಗರಿಗೆ 2022 ರ ಕಾರ್ಕಡ ಶ್ರೀನಿವಾಸ ಉಡುಪ ಪ್ರಶಸ್ತಿ
ಕೋಟ (ಡಿ,23): ಯಕ್ಷಗಾನ ವಿದ್ವಾಂಸ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ, ರಂಗನಟ, ಸಾಹಿತಿ ಕಾರ್ಕಡ ಶ್ರೀನಿವಾಸ ಉಡುಪ ಸಂಸ್ಮರಣ 2022 ರ ಪ್ರಶಸ್ತಿಯನ್ನು ಯಕ್ಷಗಾನ ಹಿರಿಯ ಕಲಾವಿದ ಕೋಡಿ ವಿಶ್ವನಾಥ ಗಾಣಿಗರಿಗೆ ಪ್ರದಾನ ಮಾಡಲಾಗುವುದೆಂದು ಸ್ಥಾಪಕ ನಿರ್ದೇಶಕ ಎಚ್. ಶ್ರೀಧರ ಹಂದೆ, ಕಾರ್ಯಾಧ್ಯಕ್ಷ ಮಹೇಶ ಉಡುಪ, ಮಂದಾರ್ತಿ ಅಧ್ಯಕ್ಷ ಬಲರಾಮ ಕಲ್ಕೂರು, ಉಪಾಧ್ಯಕ್ಷ ಜನಾರ್ದನ ಹಂದೆಯವರನ್ನೊಳಗೊಂಡ ಸಮಿತಿ ನಿರ್ಧರಿಸಿದೆ. ಬಡಗು ತಿಟ್ಟಿನ ಕಮಲಶಿಲೆ ಮೇಳದಲ್ಲಿ ಗೆಜ್ಜೆ ಕಟ್ಟಿ, ಅಮೃತೇಶ್ವರಿ, ಸಾಲಿಗ್ರಾಮ, ಹಾಲಾಡಿ, ಸೌಕೂರು […]
ಕೊಡೇರಿ: ಕಡಲಾಮೆ ರಕ್ಷಣೆ
ಉಪ್ಪುಂದ(ಡಿ,22) : ಇಲ್ಲಿನ ಕೋಡೇರಿ ಸಮುದ್ರ ತೀರದಲ್ಲಿ ಮೊಟ್ಟೆ ಇಡಲು ಬಂದ ಕಡಲಾಮೆಯೊಂದನ್ನು ಸ್ಥಳೀಯರು ರಕ್ಷಣೆ ಮಾಡಿ ಅರಣ್ಯ ಇಲಾಖೆಗೆ ಒಪ್ಪಿಸಿದರು. ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಮೆಗೆ ಸಣ್ಣ ಪುಟ್ಟ ಗಾಯಗಳಾಗಿರುವುದರಿಂದ ಆಮೆಯ ಚಿಕಿತ್ಸೆಗೆ ಕುಂದಾಪುರದ ಕೋಡಿ ಕಡಲಾಮೆ ಸಂರಕ್ಷಣಾ (FSL) ಘಟಕಕ್ಕೆ ರವಾನಿಸಿದ್ದಾರೆ. ವರದಿ : ಈಶ್ವರ್ ಸಿ ನಾವುoದ
ತಡರಾತ್ರಿ ಮೀನುಗಾರನ ರಕ್ಷಣೆ: ಆಪತ್ಭಾಂದವ ಈಶ್ವರ ಮಲ್ಪೆಯವರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ
ಮಲ್ಪೆ (ಡಿ,03): ಮಲ್ಪೆ ಮೀನಿಗಾರಿಕಾ ಬಂದರಿನಲ್ಲಿ ಡಿ,02 ರ ತಡರಾತ್ರಿ 2.30.ಗಂಟೆಗೆ ಆಂಧ್ರಪ್ರದೇಶ ಮೂಲದ ಮೀನುಗಾರ ಲಕ್ಷ್ಮಣ ನಿಯಂತ್ರಣ ತಪ್ಪಿ ನೀರಿಗೆ ಬಿದ್ದಿದ್ದಾರೆ. ವಿಷಯ ತಿಳಿದ ಆಪತ್ಭಾಂದವ ಈಶ್ವರ ಮಲ್ಪೆ ತಕ್ಷಣ ಬೋಟಿನ ಬಳಿ ತೆರಳಿ ರಕ್ಣಿಸುವುದರ ಜೊತೆಗೆ ಪ್ರಥಮ ಚಿಕಿತ್ಸೆ ನೀಡಿ ಉಡುಪಿ ಜಿಲ್ಲಾ ಆಸ್ಪತ್ರೆಗೆ ಸೇರಿಸಿದರು.ಅಲ್ಲಿನ ವೈದ್ಯರು ಹಾಗೂ ಅವರ ತಂಡ ಲಕ್ಷ್ಮಣ್ ರವರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರುಮಾಡಿದ್ದಾರೆ.ಉಡುಪಿ ಜಿಲ್ಲಾಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿಗಳ ತುರ್ತು […]
ಜೀವ ರಕ್ಷಕ, ಮುಳುಗು ತಜ್ಞ ಸುರೇಶ ಖಾರ್ವಿ ಭಟ್ಕಳ್ (ಕಡಲಾಳದ ಅಂತರಂಗ- ಬದುಕಿನ ಕಥೆ ವ್ಯಥೆ )
ಜೀವ ರಕ್ಷಣೆ ಮತ್ತು ಸಾವು ಅದು ಎಷ್ಟು ಕಠೋರವೆಂದರೆ ಆ ಚಕ್ರವ್ಯೂಹಕ್ಕೆ ಸಿಲುಕಿ ಬದುಕು ಬಂದವರರಿಗೆ ಮಾತ್ರ ಗೊತ್ತು .ಸಾವಿನಂಚಿನ ಕದ ತಟ್ಟಿ ಬದುಕಿ ಬರುವುದೆಂದರೆ ಅದೇನು ಆಟವಲ್ಲಾ.ಅದರ ಪರಿಕಲ್ಪನೆ ಮಾಡುವುದು ಕೂಡ ಕಷ್ಟ, ಅಂತಹ ಪರಿಸ್ಥಿತಿಯಲ್ಲಿ ಇರುವವರನ್ನು ಬದುಕಿಸುವವರೇ ಜೀವ ರಕ್ಷಕರು. ಜೀವರಕ್ಷಕರು ಅಕ್ಷರಶಃ ದೇವರಿಗೆ ಸಮನಾದವರು. ಆದರೆ ಇಂಥ ದೇವರುಗಳು ಮಾತ್ರ ಕಣ್ಣೀರಲ್ಲಿ ಕೈತೊಳೆತ್ತಾ ಇರುವುದು ಮಾತ್ರ ಶೋಚನೀಯ…!ಇವರ ನಿಸ್ವಾರ್ಥ ಸೇವಾ ಕಾರ್ಯವನ್ನು ಗುರುತಿಸಿ ಇವರಿಗೆ ಗೌರವದ […]
ಜೀವರಕ್ಷಕ ಭಾಸ್ಕರ್ ತಳಗೊಡುರವರ ಬದುಕನ್ನು ಬೆಳಗಿಸಿದ ದೀಪಾವಳಿ
ಜೀವರಕ್ಷಕ, ಮುಳುಗು ತಜ್ಞ ಭಾಸ್ಕರ್ ಕಳಸ ತಳಗೊಡು, ಈ ಬಡ ಸಂಸಾರ ಆ ಮಕ್ಕಳ ಮೊಗದಲ್ಲಿ ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭದಲ್ಲಿ ಖುಷಿ ತರಿಸಿದ ಎಲ್ಲಾ ಸಮಾಜ ಸೇವಕರಿಗೂ ಶಿರಬಾಗಿ ನಮಸ್ಕರಿಸುವೆ. ಪ್ರತಿಬಿಂಬ ಟ್ರಸ್ಟ್ ಬೆಂಗಳೂರು ಭಾಸ್ಕರ್ ರವರ ಮೂರು ಮಕ್ಕಳಿಗೆ ಅನುಕೂಲವಾಗಲೆಂದು ಶಾಲಾ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಗಳು ಮತ್ತು ಬಟ್ಟೆ ಪುಸ್ತಕವನ್ನು ಜೋಡಿಸಿಡಲು ಕಾಪಾಟ್ ಒಂದನ್ನು ಬೆಂಗಳೂರಿನಿಂದ ಕಳಿಸಿಕೊಟ್ಟಿದ್ದಾರೆ. ಕಳಸದ ಕೃಷಿಕರು, ಪತ್ರಕರ್ತರಾದ ರವಿ ಕೆಳಂಗಡಿ […]
ಮಾನವೀಯ ಮೌಲ್ಯಗಳ ಸರದಾರರು ”Humanity”ಸಂಸ್ಥೆಯ ಸದ್ಗುಣ ಸಮಾಜ ಸೇವಾ ಯುವಕರು
ಸಮಾಜ ಸೇವೆ ಮಾಡುವಾಗ ಜಾತಿ-ಧರ್ಮವನ್ನು ನೋಡದೆ ಪ್ರತಿಯೊಬ್ಬರ ಏಳಿಗೆಗಾಗಿ ಶ್ರಮಿಸಿದರೆ ಸಮಾಜದಲ್ಲಿ ಸೌಹಾರ್ಧತೆ ಮತ್ತು ಮನುಷ್ಯನ ಮಾನವೀಯತೆಯ ದರ್ಶನವಾಗುತ್ತದೆ.ಒಬ್ಬ ವ್ಯಕ್ತಿ ಅಥವಾ ಸಮಾಜ ಸೇವಾ ಸಂಸ್ಥೆ ತನ್ನನ್ನು ಸೇವಾ ಕೈಂಕರ್ಯದಲ್ಲಿ ತೊಡಗಿಸಿಕೊಳ್ಳುವಾಗ ಮಾನವೀಯ ಮೌಲ್ಯಗಳನ್ನು ಹೊಂದಬೇಕಾಗಿರುವುದು ಅತ್ಯವಶ್ಯಕ. ಈ ಸಮಾಜದಲ್ಲಿ ಬದುಕುತ್ತಿರುವ ಪ್ರತಿಯೊಬ್ಬ ವ್ಯಕ್ತಿ ತನಗೆ ಗೌರವದಿಂದ ಬದುಕಲು ಅವಕಾಶ ಮಾಡಿ ಕೊಟ್ಟ ಸಮಾಜಕ್ಕೆ ಋಣಿಯಾಗಿರುವುದರ ಜೊತೆಗೆ ತಮ್ಮಿಂದ ಸಮಾಜಕ್ಕೆ ಏನಾದರೂ ಸೇವೆ ನೀಡಬೇಕೆಂಬ ಒಂದಿಷ್ಟು ಸೇವಾ ಮನಸ್ಸುಗಳು ಕಾತುರದಿಂದಿರುತ್ತದೆ. ಅಂತ […]
ಬಡ ಕುಟುಂಬಕ್ಕೆ ಮನೆ ಕಟ್ಟಿಸಿ ಕೊಡುವ ಸಂಕಲ್ಪ:ಸಮಾಜ ಸೇವಕಿ ಶ್ರೀ ಮತಿ ಗೀತಾಂಜಲಿ ಸುವರ್ಣ
ಉಡುಪಿ(ಅ,21) : ಉಷಾ ಪೂಜಾರಿಯವರ ಹಳೆಯದಾದ ಮನೆ ಮಳೆ ಮತ್ತು ಗಾಳಿಗೆ ಮೈಯೊಡ್ಡಿ ಸಂಪೂರ್ಣ ಕುಸಿದಿದ್ದು ,ಇದರ ಮಾಹಿತಿ ಪಡೆದ ಸಮಾಜ ಸೇವಕರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು ಆಗಿರುವ ಶ್ರೀಮತಿ ಗೀತಾಂಜಲಿ ಸುವರ್ಣ ಉಷಾರವರ ಮನೆಗೆ ಭೇಟಿಕೊಟ್ಟು ಇವರ ಕಷ್ಟವನ್ನು ಆಲಿಸಿ ಈ ಬಡ ಕುಟುಂಬಕ್ಕೆ ಆಸರೆಯಾಗಲಿ ಎಂದು ಸ್ನೇಹ ಚಾರಿಟೇಬಲ್ ಟ್ರಸ್ಟ್ ಇದರ ಮುಖ್ಯಸ್ಥರಾದ ಶ್ರೀ ಶಿವಾನಂದ್ ಕೋಟ್ಯಾನ್ ರವರ ಸಂಪೂರ್ಣ ಸಹಕಾರದೊಂದಿಗೆ ಶ್ರೀಮತಿ ಗೀತಾಂಜಲಿ ಸುವರ್ಣ […]
ಅರಳುವ ಯುವ ಪ್ರತಿಭೆ ರವಿ ಮುಕ್ರಿ ಬೋರೋಳ್ಳಿ
ಸಂತೋಷ ಮತ್ತು ಸಂಗೀತ ಎರಡೂ ಒಂದನ್ನು ಬಿಟ್ಟು ಮತ್ತೊಂದು ಇರಲಾರದೇನೋ ಅನ್ನುವಷ್ಟು ಜೋಡಿಯಾಗಿದೆ. ಖುಷಿಯಾಗಿದ್ದಾಗ ನಾವು ಸಂಗೀತವನ್ನು ಆಸ್ವಾಧಿಸುತ್ತೇವೆ. ಆದರೆ ದುಃಖದಲ್ಲಿದ್ದಾಗ ಅದರಲ್ಲಿನ ಸಾಹಿತ್ಯ ನಮಗೆ ಅರ್ಥವಾಗುತ್ತದೆ ಎಂಬ ಮಾತಿದೆ. ಸಂತೋಷದ ಹಾಡುಗಳು ಹಾಗೆಯೇ ಸ್ವಲ್ಪ ವೇಗದ ಉತ್ಸಾಹದ ದಾಟಿರುತ್ತದೆ. ದುಃಖದ ಹಾಡುಗಳು ನಿಧಾನವಾಗಿ ಸಾಗುತ್ತದೆ. ಬದುಕೇ ಒಂದು ಸಂಗೀತ ಎಂದುಕೊಂಡರೆ ಖುಷಿಯಲ್ಲಿರುವಾಗ ಕ್ಷಣಗಳು ಬೇಗಬೇಗನೆ ಸರಿದು ಹೋಗುತ್ತದೆ. ದುಃಖದ ಸನ್ನಿವೇಶಗಳು ಬೇಗನೆ ಕರಗುವುದೇ ಇಲ್ಲ .ಕಷ್ಟಗಳು ಹಾಗೂ ದುಃಖ ನಮ್ಮ ಮನಸ್ಸನ್ನು ಕರಗಿಸಿ […]
ಪ್ರವೀಣ್ ಬಾಳೆಕೆರೆಯವರ ಮಿರಾಕಲ್ ಡ್ಯಾನ್ಸ್ ಟೀಮ್ ಡಾನ್ಸ್ ಸ್ಟುಡಿಯೋ ಶಾಖೆ ಶುಭಾರಂಭ
ಹೆಮ್ಮಾಡಿ(ಅ,17): ಮಿರಾಕಲ್ ಡ್ಯಾನ್ಸ್ ಸ್ಟುಡಿಯೋ ಸಂಸ್ಥಾಪಕರಾದ ಪ್ರವೀಣ್ ರವರ ಈ ಡ್ಯಾನ್ಸ್ ಟೀಮ್ ಸತತ ಏಳು ವರ್ಷಗಳಿಂದ ನೃತ್ಯ ತರಬೇತಿಯನ್ನು ನೀಡಿ ಹಲವಾರು ನೃತ್ಯಪ್ರತಿಭೆಗಳಿಗೆ ಉತ್ತಮ ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ. ಹಲವಾರು ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿದ ಖ್ಯಾತಿ ಈ ತಂಡಕ್ಕಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ , ಡ್ಯಾನ್ಸ್- ಡ್ಯಾನ್ಸ್ ಸ್ಪರ್ಧೆಗಳಲ್ಲಿ ಭಾಗವಹಿಸಿ, ತನ್ನದೇ ಆದ ಛಾಪನ್ನು ಮೂಡಿಸಿದೆ. ಪ್ರಸ್ತುತ ಮಿರಾಕಲ್ ಡ್ಯಾನ್ಸ್ ಕಟ್ ಬೆಲ್ತೂರುನಲ್ಲಿ ರಾಮ ಲಕ್ಷ್ಮಣ ಸಭಾಗ್ರಹ ಹೆಮ್ಮಾಡಿ (ಕೊಲ್ಲೂರು ರೋಡ್)ಲ್ಲಿ ಹೊಸದಾಗಿ […]










