ಕುಂದಾಪುರ ( ಮಾ .02): ದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸ್ ಆಫ್ ಇಂಡಿಯಾ ನೆಡೆಸಿದ 2026 ರ ಸಿಎ ಅಂತಿಮ ಪರೀಕ್ಷೆಯಲ್ಲಿ ಹುಂಚನಿ ಹೆಮ್ಮಕ್ಕಿ ವಸಂತಿ ಶೆಟ್ಟಿ ಮತ್ತು ಉಳ್ಳೂರು 74 ರ ಕರುಣಾಕರ ಶೆಟ್ಟಿಯವರ ಪುತ್ರ ಅಕ್ಷಯ ಶೆಟ್ಟಿ ಯವರು ಉತ್ತೀರ್ಣರಾಗಿರುತ್ತಾರೆ. ಇವರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಹಿಂದಿನ ವಿದ್ಯಾರ್ಥಿ
Tag: general news
ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ : ಅತ್ಯಾಧುನಿಕ ಸೌಕರ್ಯಗಳ ಉದ್ಘಾಟನಾ ಕಾರ್ಯಕ್ರಮ
ಹೊಸಂಗಡಿ ( ಮಾ .01): EFFULGENCE ಎಂಬ ಶೀರ್ಷಿಕೆಯಡಿ , “ಪ್ರತಿಭೆಗಳಿಗೊಂದು ಕನ್ನಡಿ, ಹೊಸತನಕ್ಕೊಂದು ಮುನ್ನುಡಿ” ಧ್ಯೇಯ ವಾಕ್ಯದೊಂದಿಗೆ ಅತ್ಯಾಧುನಿಕ ಹಾಗೂ ಮಾದರಿ ಸೌಕರ್ಯಗಳನ್ನೊಳಗೊಂಡ ಮೊದಲ ಕಾಲೇಜು ಎಂಬ ಹೆಗ್ಗಳಿಕೆಯನ್ನು ಸಂಪಾದಿಸಿಕೊಂಡಿರುವ ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿಯಲ್ಲಿ ವಿವಿಧ ಸೌಲಭ್ಯಗಳ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. CAN FINS HOMES LIMITED ಪ್ರಾಯೋಜಿತ ಸೋಲಾರ್ ಉತ್ಪಾದನಾ ಘಟಕ ಉದ್ಘಾಟನೆ , CSR ನಿಧಿಯಡಿಯಲ್ಲಿ ಇಡೀ ಕಾಲೇಜಿಗೆ ಸೋಲಾರ್ ಉತ್ಪಾದಿತ […]
ಸಂಜಯ ಗಾಂಧಿ ಪ್ರೌಢ ಶಾಲೆ ಅಂಪಾರು : ಎಸ್ ಎಸ್ ಎಲ್ ಸಿ ಪರೀಕ್ಷೆ ತಯಾರಿ ಕುರಿತು ವಿಶೇಷ ಕಾರ್ಯಾಗಾರ
ಹಾಲಾಡಿ ( ಫೆ.20): ಜೆಸಿಐ ಹಾಲಾಡಿ ವಾರಾಹಿ ಘಟಕದ ವಿಶೇಷ ಕಾರ್ಯಕ್ರಮದ ಅಡಿಯಲ್ಲಿ ಸಂಜಯ ಗಾಂಧಿ ಪ್ರೌಢ ಶಾಲೆ ಅಂಪಾರು ಇಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ʼಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಎದುರಿಸುವುದು ಹೇಗೆ? ಎನ್ನುವ ವಿಶೇಷ ಕಾರ್ಯಾಗಾರ ವನ್ನು ಫೆಬ್ರವರಿ 18 ರಂದು ಹಮ್ಮಿಕೊಳ್ಳಲಾಯಿತು. ಜೆಸಿಐ ತರಬೇತುದಾರರು ಮತ್ತು ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ಸ್ ಟ್ರಸ್ಟ್ (ರಿ) ಹೈಕಾಡಿ ಸಂಸ್ಥೆಯ ಅಧ್ಯಕ್ಷರಾಗಿರುವ ಶ್ರೀ ಕೃಷ್ಣಮೂರ್ತಿ ಹೈಕಾಡಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ […]
ರೋಗಿಯ ಅಶೀರ್ವಾದಕ್ಕಿಂತ ದೊಡ್ಡ ಸನ್ಮಾನ ಬೇರೊಂದಿಲ್ಲ :ಮಾಜಿ ಸಂಸದ ಶ್ರೀ ಕೆ.ಜಯಪ್ರಕಾಶ್ ಹೆಗ್ಡೆ
ಕುಂದಾಪುರ ( ಫೆ.12): ರಕ್ತದಾನದ ಮೂಲಕ ಜೀವ ಉಳಿಸುವ ಪುಣ್ಯ ಕಾರ್ಯವನ್ನು ಮಾಡುತ್ತಿರುವ ಅಭಯಹಸ್ತ ಸಂಸ್ಥೆಗೆ ಯಾವುದೇ ರೋಗಿಯ ಅಶೀರ್ವಾದಕ್ಕಿಂತ ದೊಡ್ಡ ಸನ್ಮಾನ ಬೇರೊಂದಿಲ್ಲ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆಯವರು ಅಭಿಪ್ರಾಯಪಟ್ಟರು. ಅವರು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಆಯೋಜಿಸುತ್ತಿರುವ 300ನೇ ರಕ್ತದಾನ ಶಿಬಿರದ ಲಾಂಛನ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇವಲ 6 ವರ್ಷದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ 40,000 ಯೂನಿಟ್ ರಕ್ತ ಸಂಗ್ರಹಿಸಿರುವುದು […]
ಸುಣ್ಣಾರಿ : ವಿವೇಕೋತ್ಸವ
ಕೋಟೇಶ್ವರ ( ಜ .05): ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹೊಂಬಾಡಿ-ಮಂಡಾಡಿ (ಸುಣ್ಣಾರಿ) ಇದರ ಆಡಳಿತ ಮಂಡಳಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಶಾಲಾ ವಿವೇಕೋತ್ಸವ ಹಾಗೂ ಶಾಲಾ ಸಂಸ್ಥಾಪಕರಾದ ಕಾಪು ಸಂಜೀವ ಶೆಟ್ಟರ 110 ನೇ ಜನುಮ ದಿನದ ಆರದ ನೆನಪು ಹಾಗೂ ಶಾಲಾ ಸಂಚಾಲಕರಾದ ಸುಣ್ಣಾರಿ ದಿನಕರ ಶೆಟ್ಟರ 5 ನೇ ಪುಣ್ಯ ಸ್ಮರಣೆ ಆಚರಣೆಯು ಕುಂದಾಪುರ ವಿಧಾನ ಸಭಾ ಸದಸ್ಯರಾದ ಕಿರಣ ಕುಮಾರ […]
ಗೋಪಾಡಿ: ಜ.25,26 ರಂದು ಶ್ರೀ ಮಲಸಾವರಿ ಪಂಜುರ್ಲಿ ಪರಿವಾರ ದೈವಸ್ಥಾನದ 12 ನೇ ವಾರ್ಷಿಕ ವರ್ಧಂತ್ಯುತ್ಸವ
ಗೋಪಾಡಿ(ಜ.11): ಕುಂದಾಪುರ ತಾಲೂಕು ಗೋಪಾಡಿ (ಪಡು) ಗ್ರಾಮದ ಶ್ರೀ ಮಲಸಾವರಿ ಪಂಜುರ್ಲಿ(ಹೆಣ್ಣು ದೈವದ ಮನೆ ) ಹಾಗೂ ಪರಿವಾರ ದೈವಸ್ಥಾನದ 12ನೇ ವರ್ಷದ ವರ್ಧಂತ್ಯುತ್ಸವ ಜನವರಿ 25ರ ಆದಿತ್ಯವಾರ ಹಾಗೂ 26 ರ ಸೋಮವಾರದಂದು ನಡೆಯಲಿದೆ. ತಾ. 25-01-2026ನೇ ಆದಿತ್ಯವಾರ ಸಂಜೆ ಗಂಟೆ 4.00ಕ್ಕೆ ಅಯ್ಯಪ್ಪ ಸ್ವಾಮಿ ಭಕ್ತವೃಂದ, ಗೋಪಾಡಿ (ಪಡು) ಇವರಿಂದ ಶ್ರೀ ಮಲಸಾವರಿ ಅಮ್ಮನವರಿಗೆ ಬೆಳ್ಳಿ ಮುಖವಾಡವನ್ನು ಶ್ರೀ ಚಿಕ್ಕು ಅಮ್ಮ ದೈವಸ್ಥಾನದಿಂದ ಪುರಮೆರವಣಿಗೆಯಲ್ಲಿ ಸಾಗಿ ಸಮರ್ಪಿಸಲಾಗುತ್ತದೆ. […]
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ಕುಂದಾಪುರ (ಜ. 03): ತಾಲೂಕಿನ ನಾಡದ ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು 2026 ರ ಜನವರಿ 14 ಮತ್ತು 15ರಂದು ನಡೆಯಲಿದೆ. ಜ.14 ಮಂಗಳವಾರ ಬೆಳಿಗ್ಗೆ ಸಮಯ 12ಕ್ಕೆ ಮಂಗಳಾರತಿ, ಮಹಾಪೂಜೆ, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ, 7.30ಕ್ಕೆ ದೈವದರ್ಶನ, ಗೆಂಡಸೇವೆ, 8 ಗಂಟೆಗೆ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ, 9.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾವಂತ […]
ಕಂಡ್ಲೂರಿನ ಕೆಡಿಎಫ್ ಡೋಜೋಗೆ ಕೀರ್ತಿ—ರಾಷ್ಟ್ರೀಯ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭರ್ಜರಿ ಪ್ರದರ್ಶನ
ಕುಂದಾಪುರ( ನ,25): ಕಂಡ್ಲೂರು ಕೆಡಿಎಫ್ ಡೋಜೋ ವಿದ್ಯಾರ್ಥಿಗಳು 22ನೇ ಕೆಬಿಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ 2025ರಲ್ಲಿ ಶ್ರೇಷ್ಠ ಪ್ರದರ್ಶನ ನೀಡಿ ರಾಜ್ಯ ಮತ್ತು ಡೋಜೋಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳು ಸಿಹಾನ್ ಶೇಖ್ ಬಸ್ರೂರು, ಸೌರವ್ ಶೆಟ್ಟಿ ಮತ್ತು ತ್ರುಪ್ತಿ ಆಚಾರ್ ಮೊಹಮ್ಮದ್ ಇಬ್ರಾಹಿಂ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಸ್ಪರ್ಧೆಯಲ್ಲಿ ತಂಡ ಒಟ್ಟು 32 ಪದಕಗಳನ್ನು ಗಳಿಸಿದೆ — 12 ಚಿನ್ನ, 6 ಬೆಳ್ಳಿ, 14 […]
22 ನೇ ಕೆ.ಬಿ.ಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ : ಮೊಹಮ್ಮದ್ ಶಾಹೀಮ್ ಪ್ರಥಮ
ಕುಂದಾಪುರ ( ನ ,25): ಉಡುಪಿಯ ಬುಡೋಖನ್ ಸ್ಪೋರ್ಟ್ಸ್ ಕರಾಟೆ ಕರ್ನಾಟಕ ಇವರು ಆಯೋಜಿಸಿರುವ 22ನೇ ಕೆ.ಬಿ.ಐ ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ 2025 ಇದರಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸ್ರೂರು ಉರ್ದು ಇಲ್ಲಿಯ 7ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಶಾಹೀಮ್ ಕಟಾ ವಿಭಾಗದಲ್ಲಿ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಥಮ ಬಹುಮಾನಗಳಿಸಿದ್ದಾರೆ. ಇವನರಿಗೆ ಸಿಹಾನ್ ಶೇಕ್ ಬಸ್ರೂರು ಡೋಜೋ ಟೀಮ್ ಕೆ ಡಿಎಫ್ ಕಂಡ್ಲೂರು ಇವರು ತರಬೇತಿಯನ್ನು ನೀಡಿರುತ್ತಾರೆ. ಈ […]
ನವೆಂಬರ್ 15 ರಂದು ಉಡುಪಿ- ದ.ಕ ಜಿಲ್ಲೆಗಳ ವಿದ್ಯಾರ್ಥಿಗಳಿಗಾಗಿ “ಕಾರ್ಟೂನು ಸ್ಪರ್ಧೆ”
ಕುಂದಾಪುರ ( ನ .6): “ಕಾರ್ಟೂನು ಕುಂದಾಪ್ರ’ ಇವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ 12ನೆಯ ವರ್ಷದ “ಕಾರ್ಟೂನು ಹಬ್ಬ” ಈ ಬಾರಿ ನವೆಂಬರ್ 15 ರಿಂದ 19ರ ತನಕ ಕುಂದಾಪುರದ ಕಲಾಮಂದಿರದಲ್ಲಿ ನಡೆಯಲಿದ್ದು ಆ ಪ್ರಯುಕ್ತ ನವೆಂಬರ್ 15 ರಂದು ಮಧ್ಯಾಹ್ನ 2ಗಂಟೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳಿಗಾಗಿ “ಕಾರ್ಟೂನು ರಚನಾ ಸ್ಪರ್ಧೆ”ಯು ನಡೆಯಲಿದೆ. “ಕಾರ್ಟೂನು ಸ್ಪರ್ಧೆ”ಯು 4ರಿಂದ 7ನೇಯ ತರಗತಿ, 8ರಿಂದ […]










