ಕುಂದಾಪುರ(ಜು ,12): ಮೊಳಹಳ್ಳಿ ದಿನೇಶ್ ಹೆಗ್ಡೆ ಜಯರತ್ನ ಟ್ರಸ್ಟ್ (ರಿ.), ಮೊಳಹಳ್ಳಿ ಇವರ ಆಶ್ರಯದಲ್ಲಿ ರಾಜ್ಯಮಟ್ಟದಲ್ಲಿ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ರಾಜ್ಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆಗೈದ ಕ್ರೀಡಾಪಟುಗಳಿಗೆ ಗೌರವ ಸನ್ಮಾನ, ಮೊಳಹಳ್ಳಿ ಗ್ರಾಮದ ವಿಶಿಷ್ಟ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಬಿದ್ಕಲ್ ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಪ್ರೌಢಶಾಲಾ […]
Tag: general news
ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
ಕುಂದಾಪುರ (ಮೇ 18): ಇಲ್ಲಿನ ಅಂಪಾರು ಗ್ರಾಮದ ಬಲಾಡಿ ಕಲ್ತ್ತೋಡ್ಮಿ ಮನೆ ಕುಟುಂಬಸ್ಥರು ವರ್ತೆ ಪಂಜುರ್ಲಿ ಹಾಗೂ ಸಪರಿವಾರ ದೈವಸ್ಥಾನಗಳಿಗೆ ಮೂರನೇ ವರ್ಷದ ವರ್ಧಂತ್ಯೋತ್ಸವ ಪ್ರಯುಕ್ತ ಶ್ರೀ ಪಂಜುರ್ಲಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಕ್ಷೇತ್ರ ಗೋಳಿಗರಡಿ ಇವರಿಂದ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಿದರು. ಈ ಸಂದರ್ಭ ಯಕ್ಷರಂಗದಲ್ಲಿ ಸುದೀರ್ಘ 50 ವರ್ಷಕ್ಕೂ ಮೇಲ್ಪಟ್ಟು ಕಲಾ ಸೇವೆಗೈದ ಹಿರಿಯ ಯಕ್ಷಗಾನ ಕಲಾವಿದರಾದ ಜಮದಗ್ನಿ ಶೀನ ನಾಯ್ಕ ಹಾಗೂ ಬೇಲ್ತೂರು ರಮೇಶ್ ಅವರನ್ನು […]
ಮಿಲಾಗ್ರಿಸ್ ಪದವಿಪೂರ್ವ ಕಾಲೇಜು ಕಲ್ಯಾಣಪುರ : ಶಿಕ್ಷಕರಿಗೆ ಪ್ರೇರಣಾದಾಯಕ ಕಾರ್ಯಾಗಾರ
ಉಡುಪಿ ( ಮೇ,25): ಇಲ್ಲಿನ ಕಲ್ಯಾಣಪುರ ದ ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರಿಗಾಗಿ “ಹ್ಯಾಪಿ ಟೀಚರ್ ಮತ್ತು ಹ್ಯಾಪಿ ಕ್ಲಾಸ್ ರೂಮ್” ಎಂಬ ವಿಷಯದಡಿ ಶಿಕ್ಷಕರ ಸಮೃದ್ಧಿ ಕಾರ್ಯಕ್ರಮವನ್ನು ಮೇ 14 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಕಳದ ಎಂ.ಪಿ.ಎಂ. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರೊ. ಲೂಯಿಸ್ ಮನೋಜ್ ಅಂಬ್ರೋಸ್ಆಗಮಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ. ಮೆಲ್ವಿನ್ ಮೆಂಡೊನ್ಸಾ ಅವರು ಅತಿಥಿಗಳನ್ನು […]
ಶಿವಮೊಗ್ಗ : ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್ ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ
ಶಿವಮೊಗ್ಗ ( ಏ .02): ನಗರದ ಪ್ರತಿಷ್ಠಿತ ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಮಹಿಳೆಯರಿಗಾಗಿ ಕಾಸ್ಮೆಟಿಕ್ ಗೈನಾಕಾಲಜಿ ವಿಭಾಗವನ್ನು ಉದ್ಘಾಟಿಸಲಾಗಿದ್ದು, ನಗರದ ಮಹಿಳೆರಿಗೆ ವಿಶಿಷ್ಠ ಸೇವೆ ನೀಡಲು ಮುಂದಾಗಿದೆ. ಮಹಿಳೆಯರ ಆರೋಗ್ಯ, ಸೌಂದರ್ಯ ಮತ್ತು ಆತ್ಮವಿಶ್ವಾಸವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಹೊಸ ಘಟಕವನ್ನು ಪ್ರಾರಂಭಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಕೆಎಎಸ್’ಒಜಿಎ ಮುಖ್ಯ ಪೋಷಕರು, ಎಸ್’ಒಜಿಎಸ್ ಸಂಸ್ಥಾಪಕ ಸದಸ್ಯರು ಹಾಗೂ ಹಿರಿಯ ಸ್ತ್ರೀರೋಗ ಮತ್ತು ಪ್ರಸೂತಿ ತಜ್ಞರೂ ಆದ ಡಾ.ಎಚ್. ನಾಗರಾಜ್, […]
ಸಿಎ ಅಂತಿಮ ಪರೀಕ್ಷೆಯಲ್ಲಿ ಅಕ್ಷಯ ಶೆಟ್ಟಿ ಉತ್ತೀರ್ಣ
ಕುಂದಾಪುರ ( ಮಾ .02): ದ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆನ್ಸ್ ಆಫ್ ಇಂಡಿಯಾ ನೆಡೆಸಿದ 2026 ರ ಸಿಎ ಅಂತಿಮ ಪರೀಕ್ಷೆಯಲ್ಲಿ ಹುಂಚನಿ ಹೆಮ್ಮಕ್ಕಿ ವಸಂತಿ ಶೆಟ್ಟಿ ಮತ್ತು ಉಳ್ಳೂರು 74 ರ ಕರುಣಾಕರ ಶೆಟ್ಟಿಯವರ ಪುತ್ರ ಅಕ್ಷಯ ಶೆಟ್ಟಿ ಯವರು ಉತ್ತೀರ್ಣರಾಗಿರುತ್ತಾರೆ. ಇವರು ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜಿನ ಹಿಂದಿನ ವಿದ್ಯಾರ್ಥಿ
ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿ : ಅತ್ಯಾಧುನಿಕ ಸೌಕರ್ಯಗಳ ಉದ್ಘಾಟನಾ ಕಾರ್ಯಕ್ರಮ
ಹೊಸಂಗಡಿ ( ಮಾ .01): EFFULGENCE ಎಂಬ ಶೀರ್ಷಿಕೆಯಡಿ , “ಪ್ರತಿಭೆಗಳಿಗೊಂದು ಕನ್ನಡಿ, ಹೊಸತನಕ್ಕೊಂದು ಮುನ್ನುಡಿ” ಧ್ಯೇಯ ವಾಕ್ಯದೊಂದಿಗೆ ಅತ್ಯಾಧುನಿಕ ಹಾಗೂ ಮಾದರಿ ಸೌಕರ್ಯಗಳನ್ನೊಳಗೊಂಡ ಮೊದಲ ಕಾಲೇಜು ಎಂಬ ಹೆಗ್ಗಳಿಕೆಯನ್ನು ಸಂಪಾದಿಸಿಕೊಂಡಿರುವ ಸರಕಾರಿ ಪದವಿ ಪೂರ್ವ ಕಾಲೇಜು ಹೊಸಂಗಡಿಯಲ್ಲಿ ವಿವಿಧ ಸೌಲಭ್ಯಗಳ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. CAN FINS HOMES LIMITED ಪ್ರಾಯೋಜಿತ ಸೋಲಾರ್ ಉತ್ಪಾದನಾ ಘಟಕ ಉದ್ಘಾಟನೆ , CSR ನಿಧಿಯಡಿಯಲ್ಲಿ ಇಡೀ ಕಾಲೇಜಿಗೆ ಸೋಲಾರ್ ಉತ್ಪಾದಿತ […]
ಸಂಜಯ ಗಾಂಧಿ ಪ್ರೌಢ ಶಾಲೆ ಅಂಪಾರು : ಎಸ್ ಎಸ್ ಎಲ್ ಸಿ ಪರೀಕ್ಷೆ ತಯಾರಿ ಕುರಿತು ವಿಶೇಷ ಕಾರ್ಯಾಗಾರ
ಹಾಲಾಡಿ ( ಫೆ.20): ಜೆಸಿಐ ಹಾಲಾಡಿ ವಾರಾಹಿ ಘಟಕದ ವಿಶೇಷ ಕಾರ್ಯಕ್ರಮದ ಅಡಿಯಲ್ಲಿ ಸಂಜಯ ಗಾಂಧಿ ಪ್ರೌಢ ಶಾಲೆ ಅಂಪಾರು ಇಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ʼಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಎದುರಿಸುವುದು ಹೇಗೆ? ಎನ್ನುವ ವಿಶೇಷ ಕಾರ್ಯಾಗಾರ ವನ್ನು ಫೆಬ್ರವರಿ 18 ರಂದು ಹಮ್ಮಿಕೊಳ್ಳಲಾಯಿತು. ಜೆಸಿಐ ತರಬೇತುದಾರರು ಮತ್ತು ಸ್ಮಾರ್ಟ್ ಕ್ರೀಯೇಶನ್ಸ್ ಎಜ್ಯುಕೇಶನ್ಸ್ ಟ್ರಸ್ಟ್ (ರಿ) ಹೈಕಾಡಿ ಸಂಸ್ಥೆಯ ಅಧ್ಯಕ್ಷರಾಗಿರುವ ಶ್ರೀ ಕೃಷ್ಣಮೂರ್ತಿ ಹೈಕಾಡಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ […]
ರೋಗಿಯ ಅಶೀರ್ವಾದಕ್ಕಿಂತ ದೊಡ್ಡ ಸನ್ಮಾನ ಬೇರೊಂದಿಲ್ಲ :ಮಾಜಿ ಸಂಸದ ಶ್ರೀ ಕೆ.ಜಯಪ್ರಕಾಶ್ ಹೆಗ್ಡೆ
ಕುಂದಾಪುರ ( ಫೆ.12): ರಕ್ತದಾನದ ಮೂಲಕ ಜೀವ ಉಳಿಸುವ ಪುಣ್ಯ ಕಾರ್ಯವನ್ನು ಮಾಡುತ್ತಿರುವ ಅಭಯಹಸ್ತ ಸಂಸ್ಥೆಗೆ ಯಾವುದೇ ರೋಗಿಯ ಅಶೀರ್ವಾದಕ್ಕಿಂತ ದೊಡ್ಡ ಸನ್ಮಾನ ಬೇರೊಂದಿಲ್ಲ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆಯವರು ಅಭಿಪ್ರಾಯಪಟ್ಟರು. ಅವರು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ ಆಯೋಜಿಸುತ್ತಿರುವ 300ನೇ ರಕ್ತದಾನ ಶಿಬಿರದ ಲಾಂಛನ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೇವಲ 6 ವರ್ಷದಲ್ಲಿ ವಿವಿಧ ಸಂಘಟನೆಗಳ ಸಹಕಾರದಲ್ಲಿ 40,000 ಯೂನಿಟ್ ರಕ್ತ ಸಂಗ್ರಹಿಸಿರುವುದು […]
ಸುಣ್ಣಾರಿ : ವಿವೇಕೋತ್ಸವ
ಕೋಟೇಶ್ವರ ( ಜ .05): ವಿವೇಕೋದಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹೊಂಬಾಡಿ-ಮಂಡಾಡಿ (ಸುಣ್ಣಾರಿ) ಇದರ ಆಡಳಿತ ಮಂಡಳಿ ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ಶಾಲಾ ವಿವೇಕೋತ್ಸವ ಹಾಗೂ ಶಾಲಾ ಸಂಸ್ಥಾಪಕರಾದ ಕಾಪು ಸಂಜೀವ ಶೆಟ್ಟರ 110 ನೇ ಜನುಮ ದಿನದ ಆರದ ನೆನಪು ಹಾಗೂ ಶಾಲಾ ಸಂಚಾಲಕರಾದ ಸುಣ್ಣಾರಿ ದಿನಕರ ಶೆಟ್ಟರ 5 ನೇ ಪುಣ್ಯ ಸ್ಮರಣೆ ಆಚರಣೆಯು ಕುಂದಾಪುರ ವಿಧಾನ ಸಭಾ ಸದಸ್ಯರಾದ ಕಿರಣ ಕುಮಾರ […]
ಗೋಪಾಡಿ: ಜ.25,26 ರಂದು ಶ್ರೀ ಮಲಸಾವರಿ ಪಂಜುರ್ಲಿ ಪರಿವಾರ ದೈವಸ್ಥಾನದ 12 ನೇ ವಾರ್ಷಿಕ ವರ್ಧಂತ್ಯುತ್ಸವ
ಗೋಪಾಡಿ(ಜ.11): ಕುಂದಾಪುರ ತಾಲೂಕು ಗೋಪಾಡಿ (ಪಡು) ಗ್ರಾಮದ ಶ್ರೀ ಮಲಸಾವರಿ ಪಂಜುರ್ಲಿ(ಹೆಣ್ಣು ದೈವದ ಮನೆ ) ಹಾಗೂ ಪರಿವಾರ ದೈವಸ್ಥಾನದ 12ನೇ ವರ್ಷದ ವರ್ಧಂತ್ಯುತ್ಸವ ಜನವರಿ 25ರ ಆದಿತ್ಯವಾರ ಹಾಗೂ 26 ರ ಸೋಮವಾರದಂದು ನಡೆಯಲಿದೆ. ತಾ. 25-01-2026ನೇ ಆದಿತ್ಯವಾರ ಸಂಜೆ ಗಂಟೆ 4.00ಕ್ಕೆ ಅಯ್ಯಪ್ಪ ಸ್ವಾಮಿ ಭಕ್ತವೃಂದ, ಗೋಪಾಡಿ (ಪಡು) ಇವರಿಂದ ಶ್ರೀ ಮಲಸಾವರಿ ಅಮ್ಮನವರಿಗೆ ಬೆಳ್ಳಿ ಮುಖವಾಡವನ್ನು ಶ್ರೀ ಚಿಕ್ಕು ಅಮ್ಮ ದೈವಸ್ಥಾನದಿಂದ ಪುರಮೆರವಣಿಗೆಯಲ್ಲಿ ಸಾಗಿ ಸಮರ್ಪಿಸಲಾಗುತ್ತದೆ. […]










