ಕುಂದಾಪುರ(ಮೇ 26) : ಇಲ್ಲಿನ ಖಾರ್ವಿಕೇರಿ ನಿವಾಸಿ ಧಾರ್ಮಿಕ ಮುಖಂಡ, ಖಾರ್ವಿ ಸಮಾಜದ ನೇತಾರ ಹಾಗೂ ಕ್ರೀಡಾಪಟು ಜಯಾನಂದ ಖಾರ್ವಿಯವರು ಹೃದಯಾಘಾತದಿಂದ ಇಂದು ಮುಂಜಾನೆ 3.00 ಗಂಟೆಯ ವೇಳೆಗೆ ನಿಧನ ಹೊಂದಿದ್ದಾರೆ. ಹಲವಾರು ವರ್ಷಗಳಿಂದ ಸಾಮಾಜಿಕ ಹಾಗೂ ಧಾರ್ಮಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಇವರು ಕೊಂಕಣ ಖಾರ್ವಿ ಸಮಾಜದ ಖಾರ್ವಿಕೇರಿಯ ಶ್ರೀ ಮಹಾಂಕಾಳಿ ದೇವಸ್ಥಾನದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರ ನಿಧನಕ್ಕೆ ಕೊಂಕಣ ಖಾರ್ವಿ ಸಮಾಜ ಬಾಂಧವರು ಹಾಗೂ ವಿವಿಧ […]
Tag: general news
ಕೋಟದಲ್ಲಿ ಯಕ್ಷ ತ್ರಿವಳಿ ಸಮಾರೋಪ
ಕೋಟ ( ಎ ,20): “ಮಣ್ಣಿಗೆ ಸಂಸ್ಕಾರ ಕೊಟ್ಟರೆ ಮಡಕೆಯಾಗುತ್ತದೆ, ಚಿನ್ನಕ್ಕೆ ಸಂಸ್ಕಾರ ಕೊಟ್ಟರೆ ಒಡವೆಯಾಗುತ್ತದೆ, ಸೆಗಣಿಗೆ ಸಂಸ್ಕಾರ ಕೊಟ್ಟರೆ ವಿಭೂತಿಯಾಗುತ್ತದೆ, ಮಕ್ಕಳಿಗೆ ಸಂಸ್ಕಾರ ಕೊಟ್ಟರೆ ಮಹಾದೇವನಾಗುತ್ತಾನೆ. ಮಕ್ಕಳಿಗೆ ಬದುಕಿನ ಮೌಲ್ಯವನ್ನು ಕೊಡ ಬಲ್ಲ ಶಕ್ತಿ ಯಕ್ಷಗಾನಕ್ಕಿದೆ. ಮಗುವನ್ನು ತಾಯಿಯಂತೆ ಪೋಷಿಸಬಲ್ಲ ಶಕ್ತಿ ಯಕ್ಷಗಾನದ ನಿಜ ಸತ್ವವಾಗಿದೆ. ಸಾಲಿಗ್ರಾಮ ಮಕ್ಕಳ ಮೇಳದ ಹಂದೆ ಉಡುಪರು ಕಲೆಯ ಮೂಲಕ ಮಕ್ಕಳಲ್ಲಿ ಸಂಸ್ಕಾರದ ಬೀಜ ಬಿತ್ತುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಬ್ರಹ್ಮಾವರ ತಾಲೂಕು ಕನ್ನಡ […]
ಕ್ರಾಸ್ ಲ್ಯಾಂಡ್ ಕಾಲೇಜು ಬ್ರಹ್ಮಾವರ : ಮಾನವ ಹಕ್ಕು ಅರಿವಿನ ಕುರಿತು ಉಪನ್ಯಾಸ
ಬ್ರಹ್ಮಾವರ (ಎ. 19): ಇಲ್ಲಿನ ಕ್ರಾಸ್ ಲ್ಯಾಂಡ್ ಪದವಿ ಕಾಲೇಜಿನ ಮಾನವ ಹಕ್ಕು ಘಟಕದ ಆಶ್ರಯದಲ್ಲಿ ಮಾನವ ಹಕ್ಕುಗಳ ಕುರಿತು ಅರಿವು ಎನ್ನುವ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏಪ್ರಿಲ್,19 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಮಾತನಾಡಿ ಮಾನವ ಹಕ್ಕುಗಳ ಅರಿವು ಎಲ್ಲರಿಗೂ ಅಗತ್ಯ […]
ಉಡುಪಿ ಜಿಲ್ಲಾ ಸಾಧಕರಿಗೆ ಪ್ರಾಂಶುಪಾಲರ ಸಂಘದ ಅಭಿನಂದನೆ
ಉಡುಪಿ(ಏ,10) : 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆಯು ಶೇ.93.90ರ ಫಲಿತಾಂಶದೊAದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದೆ. ಈ ಸಾಧನೆಗೆ ಜಿಲ್ಲಾಡಳಿತದ ಮಾರ್ಗದರ್ಶನ, ಉಪನಿರ್ದೇಶಕರ ನಿರ್ದೇಶನ, ಕಾಲೇಜು ಆಡಳಿತ ಮಂಡಳಿಗಳ ಹಾಗೂ ಪೋಷಕರ ಸಹಕಾರ ಮತ್ತು ಪ್ರಾಂಶುಪಾಲರ ಸಂಘದ ಕಾರ್ಯವೈಖರಿಯು ಕಾರಣೀಭೂತವಾಗಿದೆ. ವಿಜ್ಞಾನ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾದ ಆಸ್ತಿ ಎಸ್ ಶೆಟ್ಟಿ (596), ವಾಣಿಜ್ಯ ವಿಭಾಗದಲ್ಲಿ ಕ್ರೈಸ್ತ ಕಿಂಗ್ ಕಾಲೇಜಿನ ಸುಧೀಕ್ಷಾ ಶೆಟ್ಟಿ ಮತ್ತು ವಿದ್ಯೋದಯ ಕಾಲೇಜಿನ ಪ್ರಣವಿ […]
ಜ್ಞಾನ ಭಾರತ್-ಬಾಲಸಂಸ್ಕಾರ ಮಕ್ಕಳಿಂದ ಹಿರಿಯಡ್ಕ ದೇಗುಲ ದರ್ಶನ
ಹಿರಿಯಡ್ಕ(ಫೆ.03): ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಮಕ್ಕಳು ಹಿರಿಯಡ್ಕದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ವಿಹಾರದ ಮುಖ್ಯ ಅತಿಥಿಯಾಗಿ ಆಗಮಿಸಿದ ರಂಗಕರ್ಮಿ, ಸಾಹಿತಿ ಶ್ರೀಮತಿ ಪೂರ್ಣಿಮಾ ಸುರೇಶ್ ಸ್ಥಳ ಸಾನಿಧ್ಯದ ಪರಿಚಯ ಮಾಡಿಕೊಟ್ಟರು. ನಮ್ಮ ಊರಿನ ಕ್ಷೇತ್ರದ ಮಹಿಮೆಗಳನ್ನು, ಹಿರಿಯರು ಆಚರಿಸಿಕೊಂಡು ಬರುತ್ತಿರುವ ಧಾರ್ಮಿಕ, ದೈವಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರಿಸಿಕೊoಡು ಹೋಗುವ […]
ಫೆ. 04 ರಂದು ಪುತ್ತೂರು ಪೋಳ್ಯ ಮಠದಲ್ಲಿ ಗರುಡ ರಥೋತ್ಸವ
ಪುತ್ತೂರು(ಫೆ. 03): ತಾಲೂಕಿನ ಪೋಳ್ಯ ಗ್ರಾಮದಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ಲಕ್ಷ್ಮೀ ವೆಂಕಟ್ರಮಣ ಮಠದ ರಥೋತ್ಸವವು ಫೆಬ್ರವರಿ 4ರಂದು ವಿಜೃಂಭಣೆಯಿಂದ ನಡೆಯಲಿದೆ. ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ಈ ದೇವಾಲಯ”ಎರಡನೇ ತಿರುಪತಿ” ಎಂಬ ಹೆಸರಿನಿಂದ ಪ್ರಸಿದ್ಧಿಯಾಗಿದೆ.ಇಲ್ಲಿ ಪ್ರಧಾನ ದೇವರು ಶ್ರೀ ಲಕ್ಷ್ಮೀ ವೆಂಕಟ್ರಮಣ, ಜೊತೆಗೆ ಭವಾನಿಶಂಕರ, ದೇವಿ, ಮತ್ತು ಮೂರು ವಿಭಿನ್ನ ಶಕ್ತಿಯುಳ್ಳ ಗಣಪತಿ ಸೇರಿದಂತೆ ಪಂಚ ದೇವತೆಗಳನ್ನು ಆರಾಧಿಸಲಾಗುತ್ತದೆ. ಸ್ಥಳ ದೈವಗಳಾಗಿ ಧೂಮಾವತಿ ಮತ್ತು ಗುಳಿಗ ದೈವಗಳೂ […]
ಬ್ರಹ್ಮಾವರ: ಅಭಿಮತ ಸಂಭ್ರಮ ಕಚೇರಿ ಉದ್ಘಾಟನೆ
ಬ್ರಹ್ಮಾವರ(ಫೆ,02): ಅಭಿಮತ ಸಂಭ್ರಮ ಈ ಬಾರಿ ಬ್ರಹ್ಮಾವರದಲ್ಲಿ ಆಕೃತಿಗೊಳ್ಳುತ್ತಿರುವುದು ಸಂತಸ ತಂದಿದೆ. ಅಭಿಮತ ಸಂಭ್ರಮದ ಕಂಪು ರಾಜ್ಯ ಹಾಗೂ ದೇಶ ಮಟ್ಟದಲ್ಲಿಯೂ ಪಸರಿಸಲಿ ಎಂದು ನೀಲಾವರ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿಯವರು ಶುಭ ಹಾರೈಸಿದರು. ಅಭಿಮತ ಸಂಭ್ರಮವನ್ನು ಹೊಸ ಬಗೆಯ ಸಾಧ್ಯತೆಯೊಂದಿಗೆ ಬ್ರಹ್ಮಾವರದಲ್ಲಿ ವಿನೂತನವಾಗಿ ಆಯೋಜಿಸುವ ಕುರಿತು ಬ್ರಹ್ಮಾವರದ ಸ್ವರ್ಣ ನಗರದಲ್ಲಿ ಫೆಬ್ರವರಿ 02 ರಂದು ಹಮ್ಮಿಕೊಂಡ ಅಭಿಮತ ಸಂಭ್ರಮದ ಕಚೇರಿಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ […]
ಉದಯ ಕುಮಾರ ಶೆಟ್ಟಿ ಯವರಿಗೆ ರಾಜ್ಯಮಟ್ಟದ ಅತ್ಯುತ್ತಮ ಮತದಾರ ಸಾಕ್ಷರತಾ ಕ್ಲಬ್ ಸಂಚಾಲಕ ಪುರಸ್ಕಾರ
ಆಲೂರು ( ಜ.28): ಇಲ್ಲಿನ *ಸರಕಾರಿ ಪ್ರೌಢಶಾಲೆಯ ಶಿಕ್ಷಕರಾದ ಉದಯ ಕುಮಾರ ಶೆಟ್ಟಿಯವರು ರಾಜ್ಯಮಟ್ಟದ ಅತ್ಯುತ್ತಮ ಮತದಾರ ಸಾಕ್ಷರತಾ ಕ್ಲಬ್ ಸಂಚಾಲಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಬೆಂಗಳೂರಿನ ಟೌನ್ ಹಾಲ್ ನಲ್ಲಿ ನೆಡೆದ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಉದಯ ಕುಮಾರ ಶೆಟ್ಟಿಯವರನ್ನು ಗೌರವಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಚುನಾವಣಾಧಿಕಾರಿಗಳಾದ ಮನೋಜ್ ಕುಮಾರ ಮೀನಾ,ಬಿ.ಬಿ.ಎಂ.ಪಿ ಆಯುಕ್ತರಾದ ತುಷಾರ ಗಿರಿನಾಥ್ ಉಪಸ್ಥಿತರಿದ್ದರು.
ರಾಷ್ಟ್ರಮಟ್ಟದ ಅಬಾಕಾಸ್ ಸ್ಪರ್ಧೆ: ಛಾಯಾ ವಿ . ಅರ್. ದ್ವಿತೀಯ ಸ್ಥಾನ
ಕುಂದಾಪುರ( ಜ .15): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರವೇಟ್ ಲಿಮಿಟೆಡ್ ವತಿಯಿಂದ ಬೆಂಗಳೂರಿನ ವೈಟ್ ಫೆದರ್ ಕನ್ವೇಷನ್ ಹಾಲ್ ನಲ್ಲಿ ನಡೆದ 20ನೇ ರಾಷ್ಟ್ರಮಟ್ಟದ ಅಬಾಕಾಸ್ ಸ್ಪರ್ಧೆಯ 4ನೇ ವಿಭಾಗದಲ್ಲಿ ಕುಂದಾಪುರದ ಛಾಯಾ ವಿ . ಆರ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕುಂದಾಪುರದ ಎಚ್ಎ.ಮ್ .ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿರುವ ಇವರು ಕುಂದಾಪುರದ ಪ್ರಸಿದ್ದ ಛಾಯಾ ಚಿತ್ರ ಗ್ರಾಹಕ ವಿಶ್ವನಾಥ ಮುನ್ನಾ ಹಾಗೂ ರಜನಿ ದಂಪತಿಯ ಪುತ್ರಿ.
ಶ್ರೀ ದುರ್ಗಾಂಬಿಕೆ ದೇವಸ್ಥಾನ ಕೆಳಾ ಹೇರೂರು: ಜ .16 ರಂದು ವರ್ಷಾವಧಿ ಜಾತ್ರಾ ಮಹೋತ್ಸವ
ಬೈಂದೂರು(ಜ.14): ಬೈಂದೂರು ತಾಲೂಕಿನ ಹೇರೂರು ಗ್ರಾಮದ ಕೆಳಾಹೇರೂರಿನ ಶ್ರೀ ದುರ್ಗಾಂಬಿಕೆ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಜನವರಿ 16 ನೇ ಗುರುವಾರದಂದು ಜರುಗಲಿದೆ. ಭಕ್ತಾದಿಗಳು ಸಕುಟುಂಬ ಸಮೇತರಾಗಿ ಆಗಮಿಸಿ, ಶ್ರೀದೇವರ ಸನ್ನಿಧಾನದಲ್ಲಿ ನಡೆಯುವ ಧಾರ್ಮಿಕ ಪೂಜಾ ವಿಧಿ ವಿಧಾನಗಳಲ್ಲಿ ಭಾಗವಹಿಸಿ, ಮಧ್ಯಾಹ್ನದ ಮಹಾ ಅನ್ನಸಂತರ್ಪಣೆಯ ಮಹಾಪ್ರಸಾದವನ್ನು ಸ್ವೀಕರಿಸಿ, ಶ್ರೀದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ದೇಗುಲದ ಮೊಕ್ತೇಸರರಾದ ಶ್ರೀ ಮಹಾಬಲ ಶೆಟ್ಟಿ ಗರಡಿ ಮನೆ ಹಾಗೂ ಗರಡಿಮನೆ ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










