ರಾಣಿಬೇನ್ನೂರು ನಗರದ ಯುವ ಕವಿ,ಸಾಹಿತ್ಯ ಪರಿಚಾರಕ ಬಸವರಾಜ ಎಸ್. ಬಾಗೇವಾಡಿಮಠರವರು ತಮ್ಮ ಸಂಸ್ಥೆಯವತಿಯಿಂದ ಹಳೆಯ ಪುಸ್ತಕಗಳನ್ನು ಸಂಗ್ರಹಿಸಿ ಬಡ ಮಕ್ಕಳಿಗೆ ಓದಲು ಕೊಡುವ ದೃಷ್ಟಿಯಿಂದ ವಿನೂತನ ಯೋಜನೆಯೊಂದನ್ನು ಜಾರಿಗೊಳಿದ್ದಾರೆ. ಮನೆಯಲ್ಲಿ ಶೈಕ್ಷಣಿಕ ವಿಷಯಕ್ಕೆ ಸಂಬಂಧಿಸಿದ ಯಾವುದೇ ಹಳೆಯ ಪಠ್ಯ ಪುಸ್ತಕ, ಕಾದಂಬರಿ,ಕಥೆ, ಕವನ ಸಂಕಲನ, ಲೇಖಕನಗಳ ಮಾಲಿಕೆ, ವಾರ-ಮಾಸ ಪತ್ರಿಕೆ,ಗ್ರಂಥಗಳು, ನಿಘಂಟುಗಳು ಸೇರಿದಂತೆ ಇತರೆ ಯಾವುದೇ ವಿಷಯ ಜ್ಞಾನಾರ್ಜನೆ ಹೆಚ್ಚಿಸುವ ಪುಸ್ತಕಗಳಿರಲಿ ಅವುಗಳನ್ನು ರದ್ದಿಗೆ ಹಾಕದೇ ಮುಕ್ತವಾಗಿ ಶೃಂಗಾರ ಕಾವ್ಯ […]
Tag: general news
ಕೆಂಚನೂರು: ಶ್ರೀ ಬ್ರಹ್ಮ ಮತ್ತು ಯಕ್ಷಿ ಸಹಪರಿವಾರ ದೇವಸ್ಥಾನ: ಅಷ್ಟಬಂಧ ಪುನ:ಪ್ರತಿಷ್ಠೆ ಸಂಪನ್ನ
ವಂಡ್ಸೆ( ಮೇ,10): ಶ್ರೀ ಬ್ರಹ್ಮ ಮತ್ತು ಯಕ್ಷಿ ಸಹಪರಿವಾರ ದೇವಸ್ಥಾನ ಪಡೂರು, ಭಟ್ರಮಕ್ಕಿ ಇದರ ಅಷ್ಟಬಂಧ ಪುನ:ಪ್ರತಿಷ್ಠೆ ಮೇ7 ಹಾಗೂ 8 ರಂದು ನಡೆಯಿತು. ಅರ್ಚಕರಾದ ಪ್ರಶಾಂತ್ ಭಟ್ ರವರ ನೇತೃತ್ವದಲ್ಲಿ ಅಷ್ಟಬಂಧ ಪುನ:ಪ್ರತಿಷ್ಠೆಯ ಧಾರ್ಮಿಕ ವಿಧಿ -ವಿಧಾನಗಳು ನೇರವೇರಿತು. ಧಾರ್ಮಿಕ ಸಭಾ ಕಾರ್ಯಕ್ರಮ ನೆಂಪು ಸೀತಾರಾಮ ಶೆಟ್ಟಿ ವೇದಿಕೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಬಹಳ ಅರ್ಥಪೂರ್ಣವಾಗಿ ನಡೆಯಿತು. ಶ್ರೀ ಬ್ರಹ್ಮ ಮತ್ತು ಯಕ್ಷಿ ಸಹಪರಿವಾರ ದೇವಸ್ಥಾನದ ಗೌರವಾಧ್ಯಕ್ಷರಾದ ಶೀನ ಗಾಣಿಗ ಚೂಡಿಕಟ್ಟೆ […]
ಅಂಪಾರು: ನಮ್ಮೂರ ಸಂಭ್ರಮದ ಪೋಸ್ಟರ್ ಅನಾವರಣಗೊಳಿಸಿ ಶುಭ ಹಾರೈಸಿದ ಡಾ.ಡಿ.ವೀರೇಂದ್ರ ಹೆಗ್ಡೆ
ಕುಂದಾಪುರ (ಏ,14):ಇಲ್ಲಿನ ಅಂಪಾರು ಗ್ರಾಮ ಮೂಡುಬಗೆಯಲ್ಲಿ ಮೇ, 11 ರಂದು ಜರುಗಲಿರುವ ಧಾರ್ಮಿಕ -ಸಾಮಾಜಿಕ- ಸಾಂಸ್ಕೃತಿಕ ಸಮಾಗಮ ”ನಮ್ಮೂರ ಸಂಭ್ರಮ’‘ದ ಪೋಸ್ಟರ್ ನ್ನು ಧರ್ಮಸ್ಥಳದ ಧರ್ಮದರ್ಶಿಗಳಾದ ಪೂಜ್ಯ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಧರ್ಮಸ್ಥಳಕ್ಕೆ ಭೇಟಿ ನೀಡಿದ ಅಂಪಾರಿನ ನಮ್ಮೂರ ಸಂಭ್ರಮದ ತಂಡದ ಬಳಿ ಮಾತನಾಡಿ ಡಾ. ಡಿ. ವೀರೇಂದ್ರ ಹೆಗಡೆಯವರು ಕಾರ್ಯಕ್ರಮದ ಉದ್ದೇಶಗಳನ್ನು ರೂಪು ರೇಷೆಗಳನ್ನು ತಿಳಿದುಕೊಂಡು ಕಾರ್ಯಕ್ರಮದ ಯಶಸ್ಸಿಗೆ ಶುಭಕೋರಿದರು.ಕಾರ್ಯಕ್ರಮದ ಬಗ್ಗೆ ವಿವರಣೆ ಪಡೆದು ಸಂತೃಪ್ತರಾದ […]
ಗುಜ್ಜಾಡಿ : ಮಹಿಳೆಯ ಮೂತ್ರ ಪಿಂಡದ ಕಸಿ ಆಪರೇಷನ್ ಗೆ ಆಸ್ಪತ್ರೆ ವೆಚ್ಚ ಭರಿಸಲು ಬೇಕಿದೆ ಸಹಾಯ ಹಸ್ತ
ಗುಜ್ಜಾಡಿ(ಮಾ.24): ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಶಾಲೆ ರಸ್ತೆ ಬಳಿಯ ವಾಸವಾಗಿರುವ ಕಂಟದಮನೆ ವಿದ್ಯಾವತಿ ಪೂಜಾರಿಯವರು ಸುಮಾರು ಒಂದು ವರ್ಷದಿಂದ ಮೂತ್ರ ಪಿಂಡದ ವೈಫಲ್ಯ ಖಾಯಿಲೆಯಿಂದ ಬಳಲುತ್ತಿದ್ದು, ವಾರಕ್ಕೆ 2 ಬಾರಿ ಡಯಾಲಿಸೀಸ್ ಮಾಡ ಬೇಕಾಗಿದ್ದು, ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ರಿ ಖಾಯಿಲೆಗೆ ಮುಂದಿನ ತಪಾಸಣೆ ಮತ್ತು ಮೂತ್ರಪಿಂಡದ ಕಸಿ (Kidney Transplant) ಆಪರೇಷನ್, ಮತ್ತಿತರ ಚಿಕಿತ್ಸಾ ವೆಚ್ಚದ ಅಂದಾಜು ಪಟ್ಟಿಯನ್ನು ಆಸ್ಪತ್ರೆಯ ವೈದ್ಯರು ನೀಡಿದ್ದು, ಅದರಂತೆ […]
ಬಾಲಕನ ಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ ನೆಂಪು ಫ್ರೆಂಡ್ಸ್
ವಂಡ್ಸೆ( ಮಾ.14): ಕುಂದಾಪುರ ತಾಲೂಕಿನ ಕಟ್ ಬೇಲ್ತೂರು ಗ್ರಾಮದ ನಿವಾಸಿಗಳಾದ ಶ್ರೀಮತಿ ಶ್ಯಾಮಲಾ ಮತ್ತು ಚರಣ್ ರವರ ಮಗನಾದ ಮಾಸ್ಟರ್ ಪವನ್ ಕುಮಾರ್ (ವಯಸ್ಸು 4 ವರ್ಷ) ಈ ಮಗು ತಲಸ್ಸೇಮಿಯಾ ಕಾಯಿಲೆಯಿಂದ ಬಳಲುತ್ತಿದ್ದು ,ಬಾಲಕನ ಈ ಕಾಯಿಲೆಗೆ ತುರ್ತುಚಿಕಿತ್ಸೆಯ ಅಗತ್ಯವಿದ್ದು ಸುಮಾರು ರೂ. 40 ಲಕ್ಷದಷ್ಟು ಹಣ ಖರ್ಚಾಗುತ್ತದೆ ಎಂದು ವೈದ್ಯರು ತಿಳಿಸಿರುತ್ತಾರೆ. ಈ ನಿಟ್ಟಿನಲ್ಲಿ ನೆಂಪು ಫ್ರೆಂಡ್ಸ್ ಹಾಗೂ ನೆಂಪು ಪ್ರೀಮಿಯರ್ ಲೀಗ್ (NPL) ಇವರ ಸಹಾಯ ಹಸ್ತದಿಂದ […]
ಉಪ್ಪುಂದ: ಮಾ. 6 ರಂದು ಜ| ಬಿಪಿನ್ ರಾವತ್ ಕೃತಿ ಲೋಕಾರ್ಪಣೆ
ಬೈಂದೂರು (ಫೆ.26): ಭಾರತೀಯ ಸೇನೆಯನ್ನು ಸ್ವಾವಲಂಬಿ ಮತ್ತು ಶಕ್ತಿಶಾಲಿಯಾಗಿಸಲು ಸೇವಾಕಾಲದುದ್ದಕ್ಕೂ ಶ್ರಮಿಸುತ್ತಾ, ಕಳೆದ ವರ್ಷ ಡಿ.8 ರಂದು ಹೆಲಿಕಾಪ್ಟರ್ ದುರ್ಘಟನೆಯಲ್ಲಿ ವಿಧಿವಶರಾದ ಪದ್ಮವಿಭೂಷಣ CDS ಜ. ಬಿಪಿನ್ ರಾವತ್ ಅವರ ಪ್ರೇರಣಾದಾಯಿ ವ್ಯಕ್ತಿತ್ವವನ್ನು ಜನಸಾಮಾನ್ಯರಿಗೆ ತಲುಪಿಸುವ ದೃಷ್ಟಿಯಿಂದ ಮಾಜಿ ಸೈನಿಕ, ಲೇಖಕ ಬೈಂದೂರು ಚಂದ್ರಶೇಖರ ನಾವಡರು `ಮಹಾನ್ ಸೇನಾನಿ ಜನರಲ್ ಬಿಪಿನ್ ರಾವತ್` ಕೃತಿ ರಚಿಸಿರುತ್ತಾರೆ. ಮಂಗಳೂರಿನ ಅವನಿ ಪ್ರಕಾಶನ ಕೃತಿಯನ್ನು ಹೊರತಂದಿದೆ.ಕೃತಿ ಲೋಕಾರ್ಪಣೆ ಸಮಾರಂಭವು ಭಾನುವಾರ ಮಾ. 6 […]
ಪ್ರೇಕ್ಷಕರ ಮನಗೆದ್ದ ಇಷ್ಟಾರ್ಥ ಪ್ರೊಡಕ್ಷನ್ಸ್ ಹೊಸ ತಂಡ
ಕಿರುಚಿತ್ರ ಲೋಕದಲ್ಲಿ ದಿನೇ ದಿನೇ ಹೊಸ ಪ್ರತಿಭೆಗಳು ಪರಿಚಯವಾಗುತ್ತಿದೆ. ಆ ಸಾಲಿನಲ್ಲಿ ಈಗ ಕುಂದಾಪುರದ ‘ಇಷ್ಟಾರ್ಥ ಪ್ರೊಡಕ್ಷನ್’ ಎನ್ನುವ ಹೊಸ ತಂಡ ಮೊದಲ ಹೆಜ್ಜೆ ಇಟ್ಟಿದೆ.ನಟನೆಯಿಂದ ನಿರ್ದೇಶನದ ತನಕ ಮೊದಲ ಬಾರಿಗೆ ಹೊಸ ಪ್ರತಿಭೆಗಳು ಸೇರಿಕೊಂಡು ಮಾಡಿರುವ “ಕಲ್ಮಶ” ಎನ್ನುವ ಕಿರುಚಿತ್ರ ಈಗ ಪ್ರೇಕ್ಷಕರ ಮನಗೆದ್ದು ಎಲ್ಲೆಡೆ ಸದ್ದು ಮಾಡುತ್ತಿದೆ.ಗೆಳೆತನದ ನಡುವೆ ಸ್ವಾರ್ಥ ಎಂಬುದು ಬಂದಾಗ ಏನಾಗಬಹುದು ಎಂಬುದನ್ನ ಎಳೆಯಾಗಿ ಇಟ್ಟುಕೊಂಡು ಮಾಡಿರುವ ಚಿತ್ರ, ಪ್ರೇಕ್ಷಕರ ಕುತೂಹಲಕ್ಕೆ ಕೊನೆತನಕ ತಿರುವುಗಳು […]
ವಾರಾಹಿ ಕಾಲುವೆ ಯೋಜನೆಯ ಅವೈಜ್ಞಾನಿಕ ಕಾಮಗಾರಿಗೆ ದಂಡ ತೆತ್ತ ಅಮಾಯಕ ಯುವಕ
ವಕ್ವಾಡಿ(ಜ.24): ವಕ್ವಾಡಿಯಲ್ಲಿ ನಡೆಯುತ್ತಿರುವ ವಾರಾಹಿ ಕಾಲುವೆ ಯೋಜನೆ, ಆರಂಭದಿಂದಲೂ ಒಂದಿಲ್ಲೊಂದು ಸಮಸ್ಯೆ ತಂದೊಡ್ಡುತ್ತಲೇ ಇದೆ. ಈ ಎಲ್ಲ ಸಮಸ್ಯೆಗಳನ ಕುರಿತು, ಸ್ಥಳಿಯರು, ಗ್ರಾಮ ಪಂಚಾಯತ್ ನೊಂದಿಗೆ ಸೇರಿ ಅನೇಕ ಬಾರಿ ಕಂಪೆನಿ ಯೊಂದಿಗೆ ಸಭೆ ನಡೆಸಿ, ಸಮಸ್ಯೆ ಗಳ ಶೀಘ್ರ ಪರಿಹಾರ ಕ್ಕೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರೂ ಯಾವುದೇ ಪ್ರಯೋಜನ ಆಗಲಿಲ್ಲ. ಇದೀಗ ಈ ಕಾಮಗಾರಿ ನಡೆಸುತ್ತಿರುವ ಕಂಪೆನಿ ಯ ಔದಾಸಿನ್ಯಕ್ಕೆ ಹಿಡಿದು ಕೈಗನ್ನಡಿಯಂತೆ, ಬೇಕು ಬೇಕಾದಲ್ಲಿ ಹೊಂಡ ತೆರೆದು, […]
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ನಾಡ(ಜ.12): ಶ್ರೀ ಕ್ಷೇತ್ರ ಹಾಡಿಗರಡಿ ದೈವಸ್ಥಾನ ನಾಡ ಇದರ ಪರಿವಾರ ದೈವಗಳ ವಾರ್ಷಿಕ ಹಾಲುಹಬ್ಬ, ಗೆಂಡಸೇವೆ, ಮಹಾಪೂಜೆ, ದೈವದರ್ಶನ ಹಾಗೂ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಇದೇ ಜ.14 ಮತ್ತು 15 ರಂದು ನಡೆಯಲಿದೆ. ಜ.14 ರ ಶುಕ್ರವಾರ ಸಂಜೆ 6 ಗಂಟೆಗೆ ದೈವದರ್ಶನ ಹಾಗೂ ಗೆಂಡಸೇವೆ, 7 ಗಂಟೆಗೆ ಮಹಾ ಅನ್ನಸಂತರ್ಪಣೆ, ಸಾಧಕರಿಗೆ ಸನ್ಮಾನ, ವಿದ್ಯಾರ್ಥಿವೇತನ ವಿತರಣೆಇನ್ನಿತರ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಹಾಗೆಯೇ ಜ.15ರ ಶನಿವಾರಬೆಳಿಗ್ಗೆ ಗಂಟೆ 10-00ಕ್ಕೆ […]
ಆ 90 ದಿನಗಳು ಸಿನಿಮಾದ ಫಸ್ಟ್ ಲುಕ್, ಪೋಸ್ಟರ್, ಟ್ರೈಲರ್ ಮತ್ತು ಹಾಡು ಬಿಡುಗಡೆ
ಬಸ್ರೂರು(ಜ.3): ರಾಷ್ಟ್ರಪ್ರಶಸ್ತಿ ಪುರಸ್ಕೃತ ಯಾಕೂಬ್ ಖಾದರ್ ಗುಲ್ವಾಡಿ ಹಾಗೂ ರೊನಾಲ್ಡ್ ಲೋಬೊ ನಿರ್ದೇಶನದ ಕರಾವಳಿಯ ಯುವ ಪ್ರತಿಭೆಗಳನ್ನೊಳಗೊಂಡ ಆ 90 ದಿನಗಳು ಸಿನಿಮಾದ ಫಸ್ಟ್ ಲುಕ್ ಪೋಸ್ಟರ್, ಟೈಲರ್ ಮತ್ತು ಹಾಡು ಬಿಡುಗಡೆ ಕಾರ್ಯಕ್ರಮ ಜ.02 ರಂದು ಗುಲ್ವಾಡಿಯಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಹಿಂದುಳಿದ ಆಯೋಗದ ಅಧ್ಯಕ್ಷರಾದ ಕೆ.ಜಯಪ್ರಕಾಶ್ ಹೆಗ್ಡೆ,ನಾಡೋಜ ಡಾ. ಜಿ ಶಂಕರ್ ,ಖ್ಯಾತ ಚಲನಚಿತ್ರ ನಿರ್ದೇಶಕ,-ನಟ ರಿಷಬ್ ಶೆಟ್ಟಿ ,ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ,ಹಿರಿಯ ನ್ಯಾಯವಾದಿ […]










