ಹೆಮ್ಮಾಡಿ( ಸೆ .01): ಶಿಕ್ಷಣ ಎಂಬುದು ಬೆಳಕು.ಆ ಬೆಳಕು ಹಂಚಿದಷ್ಟು ಅದು ಬೆಳೆಗುತ್ತದೆ ಆ ಕೆಲಸವನ್ನು ಈ ಸಂಸ್ಥೆ ನಿರಂತರವಾಗಿ ಮಾಡುತ್ತಾ ಬಂದಿದೆ.ಗೆದ್ದರೆ ಖುಷಿ ಪಡಿ ಸೋತರೆ ಅನುಭವದ ಕಿಡಿ ಪ್ರಜ್ವಲಿಸಲಿ ಎಂದು ರಾಷ್ಟ್ರೀಯ ಈಜುಪಟು ಗಿನ್ನಿಸ್ ದಾಖಲೆ ಖ್ಯಾತಿಯ ನಾಗರಾಜ್ ಖಾರ್ವಿ ಕಂಚಗೋಡು ಹೇಳಿದರು. ಅವರು ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಉಡುಪಿ ಇವರ ಆಸರೆಯಲ್ಲಿ ನಡೆದ ಜಿಲ್ಲಾ […]
Tag: janatha p u
ಹೆಮ್ಮಾಡಿ ಜನತಾ ಪಿಯು ಕಾಲೇಜಿನಲ್ಲಿ ಜನತಾ ದಿಬ್ಬಣ
ಹೆಮ್ಮಾಡಿ(ಅ 23 ): ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಮತ್ತು ಶಿಸ್ತನ್ನು ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಸಮಾಜದಲ್ಲಿ ವಿಜ್ಞಾನಿ, ಡಾಕ್ಟರ್ ಆಗಿ ದೇಶಕ್ಕೆ ಕೊಡುಗೆ ನೀಡಿ ಎಂದು ವಿ ವಿ ವಿ ಮಂಡಳಿ.ರಿ.ಹೆಮ್ಮಾಡಿ ಇದರ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಹೇಳಿದರು. ಅವರು ಹೆಮ್ಮಾಡಿ ಜನತಾ ಪಿಯು ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಜನತಾ ದಿಬ್ಬಣ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಚಿತ್ರ ಸಾಹಿತಿ ಪ್ರಮೋದ್ ಮರವಂತೆ […]
ಜನತಾ ಪಿಯು ಕಾಲೇಜು ಹೆಮ್ಮಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್
ಹೆಮ್ಮಾಡಿ( ಆ ,17): ಹಳ್ಳಿಯ ಎಲ್ಲ ಮಕ್ಕಳಿಗೂ ಶಿಕ್ಷಣ ಸಿಗಬೇಕು.ಆಗ ಮಾತ್ರ ಗಾಂಧಿ ಕಂಡ ಕನಸ್ಸು ಸಾರ್ಥಕತೆ ಪಡೆಯುತ್ತದೆ.ಹಳ್ಳಿಯ ಪ್ರತಿ ಮಗು ಸಮಾಜದ ಮುಖ್ಯ ವಾಹಿನಿಗೆ ಬರಲು ನಾವೆಲ್ಲಾ ಶ್ರಮಿಸಬೇಕು. ವಿದ್ಯಾರ್ಥಿಗಳು ಕೂಡ ವೀರ ಯೋಧರ ತ್ಯಾಗ ಸ್ಮರಿಸಿ ಅವರ ಆದರ್ಶ ಗಳನ್ನುತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜನತಾ ಪಿಯು ಕಾಲೇಜು ಹೆಮ್ಮಾಡಿಯ ಪ್ರಾಂಶುಪಾಲರಾದ ಗಣೇಶ ಮೊಗವೀರ ಹೇಳಿದರು. ಜನತಾ ಪಿಯು ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂಸ್ಯ ಇಂಗ್ಲೀಷ್ […]
ಗಣೇಶ ಮೊಗವೀರರವರಿಗೆ ರಾಷ್ಟ್ರೀಯ ಮಟ್ಟದ ಡಾ.| ಶ್ಯಾಮ್ ಪ್ರಸಾದ್ ಮುಖರ್ಜಿ ಮೆಮೋರಿಯಲ್ ಪ್ರಶಸ್ತಿ ಪ್ರದಾನ
ಹೆಮ್ಮಾಡಿ(ಜು,28): ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರರವರ ಇದುವರೆಗಿನ ಶೈಕ್ಷಣಿಕ ಸಾಧನೆ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಪ್ರತಿಷ್ಠಿತ ಟೊಪ್ನೆಟೆಕ್ ಪೌಂಡೇಶನ್ ನವರು ಕೊಡಮಾಡುವ 2025 ನೇ ಸಾಲಿನ ರಾಷ್ಟ್ರೀಯ ಮಟ್ಟದ ಪ್ರಶಸ್ತಿ ಡಾ| ಶ್ಯಾಮ್ ಪ್ರಸಾದ್ ಮುಖರ್ಜಿ ಮೆಮೋರಿಯಲ್ ಪ್ರಶಸ್ತಿಯನ್ನು ಪಡೆದಿರುತ್ತಾರೆ. ಗಣೇಶ ಮೊಗವೀರರವರನ್ನು ಆಯ್ಕೆ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಿ ಜುಲೈ 25 ರಂದು ಮುಂಬೈನ ಪ್ರಸಿದ್ಧ […]
ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಸಂಖ್ಯಾಶಾಸ್ತ್ರ ಕಾರ್ಯಗಾರ
ಹೆಮ್ಮಾಡಿ( ಜು ,21): ಸಂಖ್ಯಾಶಾಸ್ತ್ರವು ಬಹುತೇಕ ಉದ್ಯೋಗಗಳಲ್ಲಿ ಅಗತ್ಯವಿದೆ. ವ್ಯವಹಾರ, ಆರೋಗ್ಯ, ತಂತ್ರಜ್ಞಾನ, ಸರ್ಕಾರ, ಶಿಕ್ಷಣ,ದತ್ತಾಂಶ ವಿಶ್ಲೇಷಣೆ, ಮಾರುಕಟ್ಟೆ ವಿಶ್ಲೇಷಣೆ, ಹಣಕಾಸು ಊಹೆ ಮುಂತಾದ ಕ್ಷೇತ್ರಗಳಲ್ಲಿ ಇದು ಉಪಯೋಗಿಯಾಗುತ್ತದೆ. ದಿನನಿತ್ಯದ ಸಮೀಕ್ಷೆಗಳು, ಸುದ್ದಿಗಳಲ್ಲಿನ ಅಂಕಿಅಂಶಗಳು ಮತ್ತು ವಿಜ್ಞಾನ ವರದಿಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಸಂಖ್ಯಾಶಾಸ್ತ್ರ ಸಹಾಯವಾಗುತ್ತದೆ. ಆದರೆ ಇಂದು ಇಂತಹ ಅಮೂಲ್ಯ ವಿಷಯವನ್ನು ವಿದ್ಯಾರ್ಥಿಗಳು ಆಸೆ ಪಟ್ಟು ಓದದೇ, ಇರುವುದರಿಂದ ಮತ್ತು ಸಮಾಜದಲ್ಲಿ ಒಲವು ಕೂಡ ಕಡಿಮೆಯಾಗುತ್ತಿರುವುದು ಸಂಖ್ಯಾಶಾಸ್ತ್ರ ಮೈನರ್ ವಿಷಯ […]
ತಾನು ಕಲಿತ ಪ್ರೈಮೇರಿ ಶಾಲೆಗೆ ಬಸ್ ಕೊಡುಗೆ ನೀಡಿದ ಶಾಲಾ ಹಳೆ ವಿದ್ಯಾರ್ಥಿ ಶ್ರೀ ಗಣೇಶ ಮೊಗವೀರ
ಹೆಮ್ಮಾಡಿ(ಜು ,4): ತನ್ನ ಭವಿಷ್ಯದ ಭದ್ರ ಬುನಾದಿ ಹಾಕಿಕೊಟ್ಟ ಪ್ರಾಥಮಿಕ ಶಿಕ್ಷಣವನ್ನು ಪಡೆದ ಹೆಮ್ಮಾಡಿ ಊರಿನ ಹೆಮ್ಮೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಅಗತ್ಯ ಸೌಲಭ್ಯಗಳಲ್ಲಿ ಒಂದಾಗಿರುವ ವಾಹನ ಸೌಲಭ್ಯವನ್ನು, ಹೆಮ್ಮಾಡಿ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು ಶಾಲೆಗೆ ಬಸ್ ವ್ಯವಸ್ಥೆಯನ್ನು ಮಾಡುವುದರ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಮ್.ಸಿ.ಅಧ್ಯಕ್ಷರು,ಪದಾಧಿಕಾರಿಗಳು, ಸರ್ವಸದಸ್ಯರು,ಶಾಲಾ ಮುಖ್ಯ […]
ಹೆಮ್ಮಾಡಿಯ ಜನತಾ ಅನುದಾನಿತ ಪ್ರೌಢಶಾಲೆಗೆ ಬಸ್ ಕೊಡುಗೆ ನೀಡಿದ ಗಣೇಶ ಮೊಗವೀರ
ಹೆಮ್ಮಾಡಿ (ಜು ,5): ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಶ್ರೀ ವಿ.ವಿ.ವಿ.ಮಂಡಳಿ(ರಿ) ಆಡಳಿತ ಮಂಡಳಿಗೆ ಒಳಪಟ್ಟಿರುವ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಹೆಮ್ಮೆಯ ಶಿಕ್ಷಣ ಸಂಸ್ಥೆ.ಗ್ರಾಮೀಣ ಭಾಗಗಳಿಂದ ನೂರಾರು ವಿದ್ಯಾರ್ಥಿಗಳು ಈ ಶಿಕ್ಷಣ ಸಂಸ್ಥೆಯಲ್ಲಿ ದಾಖಲಾತಿ ಪಡೆದುಕೊಂಡು ಶಿಕ್ಷಣ ಪಡೆಯುತ್ತಿರುವ ಈ ಸಂದರ್ಭದಲ್ಲಿ ಶಾಲಾ ಅಗತ್ಯ ಸೌಲಭ್ಯಗಳಲ್ಲಿ ಒಂದಾಗಿರುವ ಶಾಲಾ ವಾಹನ ಸೌಲಭ್ಯವನ್ನು ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಜನತಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಗಣೇಶ ಮೊಗವೀರರವರು […]
ಹೆಮ್ಮಾಡಿಯ ಜನತಾ ಪಿ ಯು ಕಾಲೇಜಿನ ಸಿಂಚನಾ ಜಿ.ಭಟ್ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ
ಕುಂದಾಪುರ ( ಜೂ,26): ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯವರು ಆಯೋಜಿಸಿದ ತಾಲೂಕು ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ.ವಿದ್ಯಾರ್ಥಿನಿ ಸಿಂಚನಾ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಹಾಗೂ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿ ತನ್ವಿತಾ ತೃತೀಯ ಸ್ಥಾನ ಪಡೆದಿರುತ್ತಾಳೆ. ಸಾಧಕ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ಹೆಮ್ಮಾಡಿ: ಜನತಾ ಪಿ. ಯು ಕಾಲೇಜಿನಲ್ಲಿ ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಮಾಹಿತಿ ಕಾರ್ಯಕ್ರಮ
ಹೆಮ್ಮಾಡಿ( ಜೂ,27): ಜನತಾ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಕಂಡ್ಲೂರು ಪೋಲಿಸ್ ಠಾಣೆಯ ಢಾಣಾಧಿಕಾರಿಗಳಾಗಿರುವ ಶ್ರೀ ಭೀಮಾಶಂಕರ್ ರವರು ಮಾದಕ ವ್ಯಸನದ ವಿರುದ್ಧದ ಕುರಿತಾಗಿ ಮಾಹಿತಿ ನೀಡಿದರು. ಇಂದಿನ ಈ ಯುಗದಲ್ಲಿ ಆರೋಗ್ಯಕ್ಕೆ ಹಾನಿಯುಂಟುಮಾಡುವ ಮಾದಕ ವ್ಯಸನಗಳು ತುಂಬಾ ಸುಲಭವಾಗಿ ಕೈಗೆ ಸಿಗುತ್ತಿದ್ದು,ಅವೆಲ್ಲವನ್ನೂ ಸ್ವೀಕರಿಸಬೇಡಿ ಆರೋಗ್ಯದ ಕುರಿತಾಗಿ ಜಾಗ್ರತಿ ವಹಿಸಿ ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಠಾಣಾ ಸಿಬ್ಬಂದಿಗಳು,ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. […]
ನೀಟ್ ಫಲಿತಾಂಶ- 2025: ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ
ಹೆಮ್ಮಾಡಿ(ಜೂ ,15): ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಹೆಮ್ಮಾಡಿಯ ಜನತಾ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಆಕಾಶ್ ಹೆಬ್ಬಾರ್ 525,ಸುಬ್ರಹ್ಮಣ್ಯ ಜಿ.515 ಅಂಕಗಳನ್ನು ಪಡೆದು ಅರ್ಹತೆ ಪಡೆದಿರುತ್ತಾರೆ.ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಜನತಾ ವಿದ್ಯಾಸಂಸ್ಥೆ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ರೀತಿಯಲ್ಲಿ ತರಬೇತುಗೊಳಿಸಿ ಕಾಲೇಜು ಪ್ರಾರಂಭದ ತೃತೀಯ ವರ್ಷವೂ ಅತ್ತ್ಯುತ್ತಮ ಫಲಿತಾಂಶವನ್ನು ದಾಖಲಿಸಿದೆ. ವಿದ್ಯಾರ್ಥಿಗಳ […]










