ಹೆಮ್ಮಾಡಿ(ಆ,15): ಮೊಗವೀರ ಯುವ ಸಂಘಟನೆಯ [ರಿ.] ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಹಾಗೂ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.), ಉಡುಪಿ, ಅಂಬಲಪಾಡಿ ಇವರ ಸಂಯುಕ್ತ ಆಶ್ರಯದಲ್ಲಿ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ಹಮ್ಮಿಕೊಂಡ “ಸೈನಿಕರಿಗೊಂದು ಗೌರವಾರ್ಪಣೆ” ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ನಿವ್ರತ್ತ ಯೋಧ ಶ್ರೀ ಮೋಹನದಾಸ ಶೆಟ್ಟಿ ದಂಪತಿಗಳನ್ನು ಅವರ ಸ್ವಗ್ರಹದಲ್ಲಿ ಅಗಸ್ಟ್ 15 ರಂದು ಸನ್ಮಾನಿಸಿ ಗೌರವಿಸಲಾಯಿತು. ಮೊಗವೀರ ಯುವ ಸಂಘಟನೆ (ರಿ.),ಉಡುಪಿ ಜಿಲ್ಲೆ, ಹೆಮ್ಮಾಡಿ […]
Tag: mogaveera society
ಬಗ್ವಾಡಿ: ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀವರಮಹಾಲಕ್ಷ್ಮೀ ಪೂಜೆ
ಕುಂದಾಪುರ(ಆ,09): ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಶಕ್ತಿಕ್ಷೇತ್ರಗಳಲ್ಲಿ ಒಂದಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತ ವಿಜೃoಭಣೆಯಿ೦ದ ನಡೆಯಿತು. ಭಕ್ತಾದಿಗಳಿಗೆ ಸಾಮೂಹಿಕವಾಗಿ ಶ್ರೀ ವರಮಹಾಲಕ್ಷ್ಮೀಯ ಪೂಜೆಯ ಅವಕಾಶ ಕಲ್ಪಿಸಲಾಗಿತ್ತು. ಕ್ಷೇತ್ರದ ಪ್ರಧಾನ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಸಾಮೂಹಿಕ ವರಮಹಾಲಕ್ಷ್ಮೀ ಪೂಜೆಯಲ್ಲಿ ಭಕ್ತಾದಿಗಳು ಪಾಲ್ಗೊಂಡರು. ಮಧ್ಯಾಹ್ನ ನಡೆದ ಮಹಾ ಅನ್ನಸಂತರ್ಪಣೆಯಲ್ಲಿ 2500ಕ್ಕೂ ಹೆಚ್ಚು ಭಕ್ತರು ಅನ್ನಪ್ರಸಾದ ಸೇವಿಸಿದರು. ಶ್ರೀಮಹಿಷಾಸುರಮರ್ದಿನಿ ದೇವಸ್ಥಾನ ಬಗ್ವಾಡಿ, ಮೊಗವೀರ ಮಹಾಜನ ಸೇವಾ […]
ಮಾನವತಾ ಧರ್ಮವೇ ಶ್ರೇಷ್ಠವಾದದ್ದು : ಉದಯಕುಮಾರ್ ಹಟ್ಟಿಯಂಗಡಿ
ಉಳ್ಳಾಲ (ಆ,09): ಧರ್ಮವನ್ನು ಇಂದು ವಿವಿಧ ಅರ್ಥದಲ್ಲಿ ವ್ಯಾಖ್ಯಾನಿಸಲಾಗುತ್ತದೆ. ಆದರೆ ಧರ್ಮದ ಮೂಲವನ್ನು ಹುಡುಕುತ್ತಾ ಹೋದರೆ ನಮಗೆ ಸತ್ಯದ ಅರಿವಾಗುತ್ತದೆ. ದಯೆಯೇ ಧರ್ಮದ ಮೂಲ ವೆಂದು ಬಸವಣ್ಣನವರು ಶತಶತಮಾನದ ಹಿಂದೆ ಹೇಳಿದ್ದಾರೆ. ಆ ನಿಟ್ಟಿನಲ್ಲಿ ದಯೆಯಿಂದ ಕೂಡಿದ ಮಾನವತಾ ಧರ್ಮವೇ ಶ್ರೇಷ್ಠ ಎಂದು ಮೊಗವೀರ ಮಹಾಜನ ಸೇವಾ ಸಂಘ( ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಇದರ ಅಧ್ಯಕ್ಷರು ಸಹಕಾರಿ ರತ್ನ ಹಾಗು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ […]
ಕಂಡ್ಲೂರು : ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಯಶಸ್ವಿ-104 ಯೂನಿಟ್ ರಕ್ತ ಸಂಗ್ರಹ
ಕಂಡ್ಲೂರು(ಜೂ, 27): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ವಿವಿಧ ಸಂಘ -ಸಂಸ್ಥೆಗಳ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಜೂನ್, 29 ರಂದು ಕಂಡ್ಲೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು. ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ ಇದರ ಅಧ್ಯಕ್ಷರಾದ ಶ್ರೀ ಜಯಂತ್ ಅಮೀನ್ ಕೋಡಿ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು. […]
ರಥೋತ್ಸವದ ಸಾಂಸ್ಕೃತಿಕ ಮೆರುಗನ್ನು ಹೆಚ್ಚಿಸುವ ಕಾರ್ಯ ಶ್ಲಾಘನೀಯ – ಆನಂದ್ ಸಿ. ಕುಂದರ್
ಬಗ್ವಾಡಿ(ಎ. 14): ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇಗುಲದ ಬ್ರಹ್ಮರಥೋತ್ಸವದ ಪ್ರಯುಕ್ತ ಬಗ್ವಾಡಿ ಉತ್ಸವ”ದ ಶೀರ್ಷಿಕೆಯಡಿಯಲ್ಲಿ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಹಾಗೂ ಸಾಂಸ್ಕೃತಿಕ ವೈಭವ ಹಮ್ಮಿಕೊಂಡಿರುವುದು ಶ್ಲಾಘನೀಯ. ಇದು ರಥೋತ್ಸವದ ಸಾಂಸ್ಕೃತಿಕ ಮೆರುಗನ್ನು ಹೆಚ್ಚಿಸುತ್ತದೆ. ಮುಂದಿನ ದಿನಗಳಲ್ಲಿಯೂ ಸಹ ಇದೇ ರೀತಿಯ ಉತ್ತಮ ಕಾರ್ಯಗಳು ನಿಮ್ಮಿಂದಾಗಲಿ ಎಂದು ಗೀತಾನಂದ ಫೌಂಡೇಶನ್ ಇದರ ಪ್ರವರ್ತಕರಾದ ಶ್ರೀ ಆನಂದ ಸಿ ಕುಂದರ್ ಹೇಳಿದರು. ಅವರು ಶ್ರೀ ಮಹಿಷಾಸುರ ಮರ್ದಿನಿ ಸಾಂಸ್ಕೃತಿಕ ಬಳಗ ಇವರ […]
ಏಪ್ರಿಲ್ 12 ರಂದು ಬಗ್ವಾಡಿ ಉತ್ಸವ – ರಾಜ್ಯ ಮಟ್ಟದ ನ್ರತ್ಯ ಸ್ಪರ್ಧೆ
ಬಗ್ವಾಡಿ (ಏ. 09): ಕುಂದಾಪುರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಸ್ಥಾನದ ಬ್ರಹ್ಮರಥೋತ್ಸವ ಇದೇ ಏಪ್ರಿಲ್ 12ರ ಶನಿವಾರದಂದು ನಡೆಯಲಿದ್ದು , ರಥೋತ್ಸವದ ಪ್ರಯುಕ್ತ ಸಂಜೆ 7 ರಿಂದ ವಿವಿಧ ಸಾಂಸ್ಕೃತಿ ಕಾರ್ಯಕ್ರಮ ಹಾಗೂ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಪ್ರಖ್ಯಾತ ನೃತ್ಯ ತಂಡಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಲಿದೆ ಎಂದು ಶ್ರೀ ಮಹಿಷಾಸುರ ಮರ್ದಿನಿ ಸಾಂಸ್ಕೃತಿಕ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.
ಬಗ್ವಾಡಿ: ಬ್ರಹ್ಮ ರಥೋತ್ಸವದ ಪೂರ್ವಭಾವಿಯಾಗಿ ದೇವಸ್ಥಾನದ ವಠಾರದಲ್ಲಿ ಸ್ವಚ್ಛತೆ ಕಾರ್ಯಕ್ರಮ
ಹೆಮ್ಮಾಡಿ (ಏ ,02): ಶ್ರೀ ಕ್ಷೇತ್ರ ಬಗ್ವಾಡಿ ಮಹಿಷಾಸುರಮರ್ದಿನಿ ದೇವಸ್ಥಾನದ ರಥೋತ್ಸವದ ಪೂರ್ವಭಾವಿಯಾಗಿ ದೇವಸ್ಥಾನದ ವಠಾರ ಸ್ವಚ್ಛತೆ ಕಾರ್ಯಕ್ರಮವನ್ನು ಮಾರ್ಚ್ 30 ರಂದು ಹಮ್ಮಿಕೊಳ್ಳಲಾಯಿತು. ಮೊಗವೀರ ಮಹಾಜನಾ ಸೇವಾ ಸಂಘ(ರಿ.)ಮುಂಬೈ, ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆ, ಮೊಗವೀರ ಯುವ ಸಂಘಟನೆ (ರಿ.)ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕ ಹಾಗೂ ಜಿ. ಶಂಕರ್ ಫ್ಯಾಮಿಲಿ(ರಿ.)ಅಂಬಲಪಾಡಿ, ಉಡುಪಿ ಹಾಗೂ ಮೊಗವೀರ ಸ್ತ್ರೀ ಶಕ್ತಿ ಬಗ್ವಾಡಿ ಹೋಬಳಿ, ಬಗ್ವಾಡಿ ಫ್ರೆಂಡ್ಸ್ ಹಾಗೂ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ […]
ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನ:ಶಿಲಾ ಧ್ವಜಸ್ತoಭಕ್ಕೆ ತಾಮ್ರ ಮತ್ತು ಪೀಠಕ್ಕೆ ಹಿತ್ತಾಳೆ ಹೊದಿಕೆ ಸಮರ್ಪಣೆ
ಹೆಮ್ಮಾಡಿ (ಏ. 03): ಕುಂದಾಪುರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬಗ್ವಾಡಿ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಮುಂಭಾಗದಲ್ಲಿರುವ ಶಿಲಾ ಧ್ವಜಸ್ತoಭಕ್ಕೆ ಮೊಗವೀರ ಯುವ ಸಂಘಟನೆ(ರಿ) ಉಡುಪಿ ಜಿಲ್ಲೆ ಇದರ ಕುಂದಾಪುರ ಘಟಕದ ನೇತ್ರತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಅಂದಾಜು 5,50,000 ಒಟ್ಟು ವೆಚ್ಚದಲ್ಲಿ ನಿರ್ಮಿಸಲಾದ ತಾಮ್ರ ಮತ್ತು ಪೀಠಕ್ಕೆ ಹಿತ್ತಾಳೆ ಹೊದಿಕೆಯನ್ನು ಏಪ್ರಿಲ್ 1ರಿಂದ 4 – 2025 ರ ವರೆಗೆ ನಡೆದ ವರ್ಧಂತಿ ಉತ್ಸವದ ಸಂದರ್ಭದಲ್ಲಿ ಪುನರ್ ಪ್ರತಿಷ್ಠೆಯೊಂದಿಗೆ […]
ಶ್ರೀ ಕ್ಷೇತ್ರ ಬಗ್ವಾಡಿ: ಬ್ರಹ್ಮರಥೋತ್ಸವದ ಆಮಂತ್ರಣ ಪತ್ರಿಕೆ ಹಾಗೂ ಬಗ್ವಾಡಿ ಉತ್ಸವದ ಪೋಸ್ಟರ್ ಬಿಡುಗಡೆ
ಹೆಮ್ಮಾಡಿ (ಮಾ. 18): ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಕ್ಷೇತ್ರವಾದ ಬಗ್ವಾಡಿ ಶ್ರೀ ಮಹಿಷಾಸುರಮರ್ದಿನಿ ದೇವಿಯ ವಾರ್ಷಿಕ ಬ್ರಹ್ಮರಥೋತ್ಸವ ಏಪ್ರಿಲ್ 12ರಂದು ಜರುಗಲಿದ್ದು, ಆ ನಿಟ್ಟಿನಲ್ಲಿ ರಥೋತ್ಸವದ ಆಮಂತ್ರಣ ಪತ್ರಿಕೆ ಹಾಗೂ ರಥೋತ್ಸವದ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಡೆಯುವ ರಾಜ್ಯಮಟ್ಟದ ನೃತ್ಯ ಸ್ಪರ್ಧೆ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ವೈಭವವಾದ “ಬಗ್ವಾಡಿ ಉತ್ಸವ” ದ ಪೋಸ್ಟರ್ ನ್ನು ಶ್ರೀದೇವರ ಸನ್ನಿಧಿಯಲ್ಲಿ ಮೊಗವೀರ ಮಹಾಜನ ಸೇವಾ ಸಂಘ (ರಿ),ಬಗ್ವಾಡಿ ಹೋಬಳಿ […]
ಗುಹೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಜು ಮೆಂಡನ್ ತ್ರಾಸಿ ಆಯ್ಕೆ
ಗುಜ್ಜಾಡಿ(ಮಾ.5): ಇಲ್ಲಿನ ಗುಹೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ರಾಜು ಮೆಂಡನ್ ತ್ರಾಸಿ ಆಯ್ಕೆಯಾಗಿದ್ದಾರೆ. ಹಲವಾರು ಸಂಘ ಸಂಸ್ಥೆ ಗಳಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರ ದಲ್ಲಿ ಅಪಾರ ಸೇವೆ ಸಲ್ಲಿಸಿರುವ ಇವರು ತ್ರಾಸಿ ಗ್ರಾಮ ಪಂಚಾಯತ್ ನ ಸದಸ್ಯರಾಗಿ ರಾಜಕೀಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ. ಮೊಗವೀರ ಮಹಾಜನ ಸೇವಾ ಸಂಘ (ರಿ,) ಮುಂಬೈ, ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಸದಸ್ಯರಾಗಿ, ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ,ಹೆಮ್ಮಾಡಿ […]










