ಗಂಗೊಳ್ಳಿ(ಎ ,14): ಅಂಬೇಡ್ಕರ್ ಅವರ ಬದುಕು ಹೋರಾಟ ಮತ್ತು ಸಾಧನೆ ಜಗತ್ತಿನ ಪ್ರತಿಯೊಬ್ಬರಿಗೂ ಪ್ರೇರಣೆ ನೀಡುವಂತದ್ದು ಈ ನಿಟ್ಟಿನಲ್ಲಿ ಅವರ ಬದುಕನ್ನು ಪ್ರತಿಯೊಬ್ಬರು ಅಧ್ಯಯನ ಮಾಡುವ ಅಗತ್ಯವಿದೆ ಎಂದು ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯ ಪಟ್ಟರು. ಅವರು ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ನೆಹರು ಯುವ ಕೇಂದ್ರ ಉಡುಪಿ, ಡಾ. ಬಿ. ಆರ್ ಅಂಬೇಡ್ಕರ್ ಯುವಕ ಮಂಡಲ, ಅಮೃತ […]
Tag: narendra gangolli
ಗಂಗೊಳ್ಳಿ : ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣೆ
ಗಂಗೊಳ್ಳಿ(ಏ,07): ಇಲ್ಲಿನ ಬೈಲು ಮನೆಯಲ್ಲಿರುವ ಶಿರಸಿ ಶ್ರೀ ಅಮ್ಮನವರ ಮತ್ತು ಸಪರಿವಾರ ದೇವರುಗಳ ಸನ್ನಿಧಿಯಲ್ಲಿ ಇತ್ತೀಚೆಗೆ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣಾ ಕಾರ್ಯಕ್ರಮವು ನೆರವೇರಿತು. ಶ್ರೀ ವೀರೇಶ್ವರ ದೇವಸ್ಥಾನದಿಂದ ಸನ್ನಿಧಾನದವರಿಗೆ ಮೆರವಣಿಗೆಯಲ್ಲಿ ಪೂರ್ಣ ಕುಂಭ ಸ್ವಾಗತದೊಂದಿಗೆ ರಜದ ಕಿರೀಟ ಮತ್ತು ರಜದ ಪ್ರಭಾವಳಿಯನ್ನು ತರಲಾಯಿತು. ಅರ್ಚಕರಾದ ರವೀಶ ಮತ್ತು ಬಳಗ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಸನ್ನಿಧಾನದ ಅರ್ಚಕರಾದ ಆನಂದ ಬಿಲ್ಲವ ಅವರು […]
ಗಂಗೊಳ್ಳಿ: ಬೈಲುಮನೆ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣೆ
ಗಂಗೊಳ್ಳಿ(ಮಾ .25): ಬೈಲುಮನೆಯಲ್ಲಿರುವ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣೆಯ ಕಾರ್ಯಕ್ರಮವು ಮಾರ್ಚ್ 30 ರಂದು ನಡೆಯಲಿದೆ. ಆ ಪ್ರಯುಕ್ತ ಬೆಳಗ್ಗೆ ಗಂಟೆ ಒಂಬತ್ತರಿಂದ ಸಾಮೂಹಿಕ ಪ್ರಾರ್ಥನೆ,ಶ್ರೀ ಗುರು ಗಣಪತಿ ಪೂಜೆ, ಪುಣ್ಯಾಹವಾಚನ, ಕಲಾಭಿವೃದ್ಧಿ ಹೋಮ, ತತ್ವ ಹೋಮ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳ ಜೊತೆ ಅನ್ನಸಂತರ್ಪಣೆ ಕೂಡ ನಡೆಯಲಿರುವುದು. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.
ಸಣ್ಣ ಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು : ನರೇಂದ್ರ ಎಸ್ ಗಂಗೊಳ್ಳಿ
ವಕ್ವಾಡಿ(ಮಾ,15): ನಾವು ಸಣ್ಣ ಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು. ಭೂತಕಾಲದಲ್ಲಿ ಏನು ಮಾಡಿದೆ ಎನ್ನುವುದಕ್ಕಿಂತ ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ಏನು ಮಾಡುತ್ತಿರುವೆ ಮತ್ತು ಮಾಡ ಹೊರಟಿದ್ದೇವೆ ಎನ್ನುವುದು ಮುಖ್ಯ ಎಂದು ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಅಭಿಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ನಮ್ಮ ಸಾಮರ್ಥ್ಯಗಳ ಜೊತೆ ನಾವೇ ಸ್ಪರ್ಧಿಸುತ್ತ ಸತತವಾಗಿ ನಮ್ಮ ಕೌಶಲ್ಯವನ್ನು ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸಿಕೊಳ್ಳುವುದು ಈ ಸ್ಪರ್ಧಾತ್ಮಕ […]
ಗಂಗೊಳ್ಳಿ: ಯುವ ಪ್ರತಿಭೆ ಮಾಸ್ಟರ್ ಶ್ಯಾಮ್ ಇದೀಗ “ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್” ನ ಸಾಧಕ
ಕುಂದಾಪುರ(ಫೆ,27): ಕೊಳಲು ನುಡಿಸುವುದರ ಮೂಲಕ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆದು ಅದ್ವಿತೀಯ ಸಾಧನೆಗೈದ ಗಂಗೊಳ್ಳಿಯ ಮಾಸ್ಟರ್ ಶ್ಯಾಮ್ ತನ್ನ 14 ನೆ ವಯಸ್ಸಿನಲ್ಲಿಯೇ ವಿಭಿನ್ನ ರಾಗಗಳನ್ನು ಕೊಳಲಿನಲ್ಲಿ ಒಂದು ನಿಮಿಷದಲ್ಲಿ ನುಡಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ನಿರ್ಮಿಸಿದ್ದಾನೆ. 2024ನೇ ಸಾಲಿನ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ಸ್ವೀಕರಿಸಿ ಈಗ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡಿರುವ ಈತ ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು […]
ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ: 80 ನೇ ಶಿವರಾತ್ರಿ ಮಹೋತ್ಸವ ಹಾಗೂ ಕುಣಿತ ಭಜನಾ ಸ್ಪರ್ಧೆ
ಗಂಗೊಳ್ಳಿ ( ಫೆ .216): ಇಲ್ಲಿನ ಶ್ರೀ ಇಂದುಧರ ದೇವಸ್ಥಾನ ಇದರ 80ನೇ ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ಫೆಬ್ರವರಿ 25ರಂದು ಸಂಜೆ, 7:00ರಿಂದ ಅಂತರ್ ಜಿಲ್ಲಾ ಮಟ್ಟದ ಕುಣಿತ ಸ್ಪರ್ಧೆಯನ್ನು ಆಯೋಜಿಸಲಾಯಿತು. ಧಾರ್ಮಿಕ ಮುಖಂಡರಾದ ಬಿ. ಸದಾನಂದ ಶೆಣೈಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗಂಗೊಳ್ಳಿ ಪರ್ಶಿನ್ ಬೋಟ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಶ್ರೀ ಲಕ್ಷ್ಮಿನಾರಾಯಣ ಮಡಿವಾಳರವರು ಕುಣಿತ ಭಜನೆ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ […]
ಚಿತ್ರಕಲಾ ಸ್ಪರ್ಧೆಯಲ್ಲಿ ಸಂಜಿತ್ ಎಂ. ದೇವಾಡಿಗ ಪ್ರಥಮ
ಗಂಗೊಳ್ಳಿ(ಫೆ,25):ಅವಕಾಶ ಫೌಂಡೇಶನ್ ತನ್ನ ದಶಮಾನೋತ್ಸವದ ಅಂಗವಾಗಿ ಇತ್ತೀಚಿಗೆ ಅಮಾವಾಸೆ ಬೈಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಆರರಿಂದ ಎಂಟನೇ ತರಗತಿಯವರೆಗಿನ ವಿದ್ಯಾರ್ಥಿಗಳ ವಿಭಾಗದ ಗ್ರಾಮೀಣ ಜೀವನ ಕುರಿತಾದ ಚಿತ್ರಕಲಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ಇವರು ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಇವರು ಗಂಗೊಳ್ಳಿಯ ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಮತ್ತು ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ […]
ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ: ಸುವರ್ಣ ಸಂಗಮ ಸಂಪನ್ನ
ನಾಯಕವಾಡಿ (ಜ,22) : ಸಂಸ್ಕಾರ ಭರಿತ ಸೃಜನಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮಾಜಕ್ಕೆ ಉತ್ತಮವಾದ ಸಂದೇಶವನ್ನು ನೀಡಲು ಖಂಡಿತ ಸಾಧ್ಯವಿದೆ . ಅದಕ್ಕೆ ತಕ್ಕ ಇಚ್ಚಾ ಶಕ್ತಿಯನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಸಕಲೇಶಪುರದ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು ಅಭಿಪ್ರಾಯಪಟ್ಟರು. ಅವರು ನಾಯಕವಾಡಿ ಗುಜ್ಜಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಬೈಂದೂರು ವಿಧಾನಸಭಾ ಕ್ಷೇತ್ರದ […]
ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿ: ಗಾನ ಸಂಭ್ರಮ
ಗಂಗೊಳ್ಳಿ (ಜ,20): ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿಯ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಅಂತರ್ ಜಿಲ್ಲಾ ಮಟ್ಟದ ಕರೋಕೆ ಟ್ರ್ಯಾಕ್ ಗೀತ ಗಾಯನ ಸ್ಪರ್ಧೆ ಗಾನ ಸಂಭ್ರಮ 2025 ರ ಫೈನಲ್ ಸ್ಪರ್ಧೆ ಇತ್ತೀಚೆಗೆ ಸುವರ್ಣ ಸಂಗಮ ವೇದಿಕೆಯಲ್ಲಿ ನಡೆಯಿತು. ಸರಿಗಮಪ ಖ್ಯಾತಿಯ ಗಾಯಕರಾದ ಕಂಬದ ರಂಗಯ್ಯ, ಮತ್ತು ಪ್ರಥ್ವಿ ಭಟ್ ಹಾಗು ಸ್ಟಾರ್ ಸಿಂಗರ್ ಖ್ಯಾತಿಯ ವಿನುಷ್ ಭಾರದ್ವಾಜ್ ತೀರ್ಪುಗಾರರಾಗಿ ಭಾಗವಹಿಸಿದ್ದರು. ಸರಿಗಮಪ ಖ್ಯಾತಿಯ ಗಾಯಕರಾದ […]
ಗಂಗೊಳ್ಳಿ : ಅಜಿತ್ ಕುಮಾರ ಅವರ ಪುಣ್ಯತಿಥಿ -‘ಸೇವಾ ದಿನಾಚರಣೆ’
ಗಂಗೊಳ್ಳಿ(ಜ.21): ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರೀತಿ, ಶಿಸ್ತು ಇರಬೇಕು. ರಾಮಾಯಣ, ಮಹಾಭಾರತ ಹಾಗೂ ಪುರಾಣ ಮತ್ತು ಗ್ರಂಥಗಳಲ್ಲಿ ಅಡಕವಾಗಿ ಅನೇಕ ವಿಷಯಗಳು ಇಂದಿನ ಮಕ್ಕಳಿಗೆ ತಿಳಿದಿಲ್ಲ. ಪಠ್ಯ ಪುಸ್ತಕದಲ್ಲಿ ಇರುವ ವಿಷಯಗಳನ್ನು ಮಾತ್ರ ಮಕ್ಕಳಿಗೆ ಹೇಳಲಾಗುತ್ತಿದೆ. ಇದರಿಂದ ನಮ್ಮ ಇತಿಹಾಸ ನಮ್ಮ ಮಕ್ಕಳಿಗೆ ತಿಳಿಯುತ್ತಿಲ್ಲ. ಹೀಗಾಗಿ ಪುರಾಣಗಳನ್ನು, ಧಾರ್ಮಿಕ ಗ್ರಂಥಗಳನ್ನು ಪಠಣ ಮಾಡಬೇಕು. ಮುಂದಿನ ಪೀಳಿಗೆಗೆ ದಾರಿದೀಪವಾಗಬೇಕು ಎಂದು ಮಹಾಬಲೇಶ್ವರ ಐತಾಳ್ ಉಪ್ಪುಂದ ಹೇಳಿದರು. ಸೇವಾ ಸಂಗಮ ನಿವೇದಿತಾ […]