ಗಂಗೊಳ್ಳಿ( ಫೆ,2) : ಓದು ವ್ಯಸನವಾಗಬೇಕು ,ಪಠ್ಯೇತರ ಪುಸ್ತಕಗಳ ಓದು ನಮ್ಮ ಜ್ಞಾನದ ಪರಿಧಿಯನ್ನು ಹೆಚ್ಚಿಸುವುದರ ಜೊತೆಗೆ ಆತ್ಮವಿಶ್ವಾಸವನ್ನು ಕೂಡ ನೀಡುತ್ತದೆ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ ಈ . ನಾಯ್ಕ್ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಎಸ್. ವಿ ಕಾಮರ್ಸ್ ಕ್ಲಬ್ ಮತ್ತು ಗಂಗೊಳ್ಳಿಯ ಸಂಜೀವ ಪಾರ್ವತಿ ಪ್ರಕಾಶನದ ಜಂಟಿ ಆಶ್ರಯದಲ್ಲಿ […]
Tag: narendra gangolli
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ವಕೀಲಿಕೆ ಮತ್ತು ಜನಸಾಮಾನ್ಯರು ಕಾರ್ಯಕ್ರಮ
ಗಂಗೊಳ್ಳಿ( ಜ ,15) : ಜನಸಾಮಾನ್ಯರ ಪ್ರತೀ ಸಮಸ್ಯೆಯೂ ವಕೀಲರನ್ನು ಸ್ಪಂದಿಸುವಂತೆ ಮಾಡುತ್ತದೆ. ದೈನಂದಿನ ಬದುಕಿನಲ್ಲಿ ವಕೀಲರ ಮೂಲಕ ತಮ್ಮ ಕ್ಲಿಷ್ಟ್ಟ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವುದರೊಂದಿಗೆ ಜನ ಸಾಮಾನ್ಯ ಮತ್ತು ವಕೀಲರ ಸಂಬಂಧ ಗಟ್ಟಿಯಾಗಿದೆ ಎಂದು ನ್ಯಾಯವಾದಿ ಮತ್ತು ಪತ್ರಕರ್ತರಾಗಿರುವ ರವಿಕುಮಾರ್ ಗಂಗೊಳ್ಳಿ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್.ವಿ. ಕಾಮರ್ಸ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ […]
ಕೊಂಕಣಿ ಕಂಠಪಾಠ ಸ್ಪರ್ಧೆ : ಸನ್ನಿಧಿ ಖಾರ್ವಿ ದ್ವಿತೀಯ ಸ್ಥಾನ
ಉಡುಪಿ ( ಜ ,03): ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಪ್ರಾಥಮಿಕ ವಿಭಾಗದ ಕೊಂಕಣಿ ಕಂಠಪಾಠ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ ಖಾರ್ವಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈಕೆ ಅರುಣ್ ಖಾರ್ವಿ ಹಾಗೂ ಭವಾನಿ ಖಾರ್ವಿ ದಂಪತಿಯ ಪುತ್ರಿ.
ಗಂಗೊಳ್ಳಿಯಲ್ಲಿ ಸಂಪನ್ನಗೊಂಡ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ “ಮಾತೃ ದೇವೋಭವ” ಕಾರ್ಯಕ್ರಮ
ಗಂಗೊಳ್ಳಿ(ನ,27) : ದಿನವೂ ಹತ್ತಾರು ಮಕ್ಕಳನ್ನು ತಮ್ಮ ಸ್ವಂತ ಮನೆಯ ಮಕ್ಕಳಂತೆ ಕಾಳಜಿಯಿಂದ ಆರೈಕೆ ಮಾಡುವ, ಅಕ್ಷರದ ಅರಿವು ಮೂಡಿಸುವ, ಸಂಸ್ಕೃತಿಯನ್ನು ಕಲಿಸುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕಾರ್ಯ ಅತ್ಯಂತ ಶ್ರೇಷ್ಠವಾದದ್ದು ಮತ್ತು ಅಭಿನಂದನನೀಯವಾದದ್ದು ಎಂದು ಗಂಗೊಳ್ಳಿಯ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಮಡಿವಾಳ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನಸೇವಾ ಬಳಗ (ರಿ.)ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ಕಳೆದ […]
ಗಂಗೊಳ್ಳಿಯಲ್ಲಿ ನ .16 ರಂದು ಮಾತೃ ದೇವೋ ಭವ ಕಾರ್ಯಕ್ರಮ
ಗಂಗೊಳ್ಳಿ( ನ .12): ಇಲ್ಲಿನ ಶ್ರೀ ನಾರಾಯಣ ಗುರು ಜನಸೇವಾ ಬಳಗ(ರಿ.), ವತಿಯಿಂದ ಗಂಗೊಳ್ಳಿ ವಲಯದ ಅಂಗನವಾಡಿ ಮತ್ತು ಶಿಶುಮಂದಿರದ 18 ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಗೌರವಿಸುವ ಅಭಿನಂದನಾ ಸಮಾರಂಭ ಮಾತೃ ದೇವೋಭವ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ನವೆಂಬರ್ 16ರ ಭಾನುವಾರ ಸಂಜೆ 4:00 ಗಂಟೆಗೆ ನಡೆಯಲಿದೆ. ಗಂಗೊಳ್ಳಿಯ ಉದ್ಯಮಿ ವಿಠಲ ಬಿ ಶೆಣೈ ಸಮಾರಂಭವನ್ನು ಉದ್ಘಾಟಿಸಲಿದ್ದು, ಗಂಗೊಳ್ಳಿಯ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ […]
ಪರಿಸರ ಚಿತ್ರಕಲೆ ಸಂಜಿತ್ ಎಂ. ದೇವಾಡಿಗ ದ್ವಿತೀಯ ಸ್ಥಾನ
ಗಂಗೊಳ್ಳಿ ( ನ ,01): ವಿಜಯ ಕರ್ನಾಟಕ ದಿನಪತ್ರಿಕೆಯು ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ದ್ವಿತೀಯ ಸ್ಥಾನ ಗಳಿಸಿರುತ್ತಾನೆ. ಇವನು ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಮಾಧವ ಎಮ್ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಗೆ […]
ಸಂಜಿತ್ ಎಂ. ದೇವಾಡಿಗ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ
ಗಂಗೊಳ್ಳಿ ( ಆ ,26): ಕೆನರಾ ಬ್ಯಾಂಕ್, ಗಂಗೊಳ್ಳಿ ವತಿಯಿಂದ ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಯೋಗೇಶ್ ಎನ್ ಸಕ್ಲಾತಿ ದ್ವಿತೀಯ ಸ್ಥಾನವನ್ನು ಅಪೂರ್ವ ಖಾರ್ವಿ ತೃತೀಯ ಸ್ಥಾನವನ್ನು ಪಡೆದರು. ಗಂಗೊಳ್ಳಿ ಕೆನರಾ ಬ್ಯಾಂಕ್ ಶಾಖೆಯ ಮ್ಯಾನೇಜರ್ ವಾಸು ದೇವಾಡಿಗ ಬಹುಮಾನಗಳನ್ನು […]
ಸರಸ್ವತಿ ವಿದ್ಯಾಲಯದಲ್ಲಿ ಭಾರತೀಯ ಸೇನೆಯಲ್ಲಿ ಉದ್ಯೋಗಾವಕಾಶಗಳು ಮಾಹಿತಿ ಕಾರ್ಯಕ್ರಮ
ಗಂಗೊಳ್ಳಿ(ಆ,23) : ತಂತ್ರಜ್ಞಾನ, ವೈದ್ಯಕೀಯ, ಮೆಕ್ಯಾನಿಕ್, ಬೋಧನೆ ಸೇರಿದಂತೆ ಹತ್ತಾರು ರೀತಿಯ ಉದ್ಯೋಗದ ಅವಕಾಶಗಳು ಸೇನೆಯಲ್ಲಿ ಇವೆ. ಅದನ್ನು ಅರಿತುಕೊಂಡು ಸದ್ಬಳಕೆ ಮಾಡಿಕೊಳ್ಳುವಲ್ಲಿ ಇಂದಿನ ಯುವ ಪೀಳಿಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಂದು ಮಾಜಿ ಸೈನಿಕರು ಲೇಖಕರು ಆಗಿರುವ ಬೈಂದೂರು ಚಂದ್ರಶೇಖರ ನಾವುಡ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್. ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಹಾಗು ಶ್ರೀ ನಾರಾಯಣ […]
ಸರಸ್ವತಿ ವಿದ್ಯಾಲಯದಲ್ಲಿ ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮ
ಗಂಗೊಳ್ಳಿ(ಆ,10): ವಿದ್ಯಾರ್ಥಿಗಳು ಪಿಯುಸಿ ನಂತರದ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಯಾವುದೇ ಕೋರ್ಸ್ ಗಳನ್ನು ಸೇರುವ ಮುನ್ನ ಅದರ ಸಾಧಕ ಬಾದಕಗಳನ್ನು ತಿಳಿದುಕೊಂಡು ಸ್ವಯಂ ಆಸಕ್ತಿಯಿಂದ ಸೇರಿದಾಗಲೇ ಯಶಸ್ಸು ಸಾಧ್ಯವಾಗುತ್ತದೆ ಎಂದು ತ್ರಿಷಾ ವಿದ್ಯಾ ಕಾಲೇಜಿನ ಕನ್ನಡ ಉಪನ್ಯಾಸಕ ಧೀರಜ್ ಬೆಳ್ಳಾರೆ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್ ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ […]
ಸರಸ್ವತಿ ವಿದ್ಯಾಲಯದಲ್ಲಿ ಎಸ್. ವಿ. ಕಾಮರ್ಸ್ ಕ್ಲಬ್ ಉದ್ಘಾಟನೆ
ಗಂಗೊಳ್ಳಿ (ಸೆ .15): ವಿದ್ಯಾರ್ಥಿಗಳು ಪಠ್ಯದ ಜೊತೆ ವ್ಯವಹಾರ ಜ್ಞಾನ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಬದುಕಿನಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಇದು ಅತಿ ಮುಖ್ಯವಾಗುತ್ತದೆ ಎಂದು ಉದ್ಯಮಿ ವಿಠ್ಠಲ ಬಿ ಶಣೈ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಎಸ್.ವಿ. ಕಾಮರ್ಸ್ ಕ್ಲಬ್ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿಯ ಉದ್ಯಮಿ ರೋಷನ್ ಖಾರ್ವಿ ಎಸ್. ವಿ ಕಾಮರ್ಸ್ ಕ್ಲಬ್ ಲಾಂಛನವನ್ನು […]










