ಗಂಗೊಳ್ಳಿ(ಡಿ.22): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಇಲ್ಲಿನ ವಿದ್ಯಾರ್ಥಿಗಳು ಅಭಿನಯಿಸಿದ “ಮೃಡ” – ಒಂದು ಸತ್ಯದ ಕಥೆ ನಾಟಕ ತನ್ನ ಭಿನ್ನವೆನಿಸುವ ಕಥಾ ವಸ್ತು ಮತ್ತು ವಿಶೇಷ ಪ್ರಸ್ತುತಿಯಿಂದ ಗಮನ ಸೆಳೆಯಿತು. ಮರಣ ಹೊಂದುವ ಮೊದಲು ಶಿವನನ್ನು ನೋಡಬೇಕು ಆ ಮೂಲಕ ಜನರ ಕಣ್ಣಲ್ಲಿ ಆರಾಧಿಸಲ್ಪಡಬೇಕು ಎನ್ನುವ ಬಯಕೆಯೊಂದಿಗೆ ಶಿವನನ್ನು ನೋಡ ಹೊರಟ ಚಾರುಕೀರ್ತಿ ಎನ್ನುವ ಧನಿಕ ಅಂತಿಮವಾಗಿ ತನ್ನ ತಪ್ಪುಗಳಿಗೆ ಅಹಂಕಾರಕ್ಕೆ ಬಲಿಯಾಗುವ […]
Tag: narendra gangolli
ಕುಂದಾಪುರ: ಗಮಕ ವಾಚನ ವ್ಯಾಖ್ಯಾನ
ಕುಂದಾಪುರ( ಡಿ,4): ಪುರಾಣ ಹಾಗೂ ಆಧುನಿಕ ಕಾವ್ಯಗಳ ಸುಲಭ ಅರ್ಥೈಸುವಿಕೆಗೆ ಗಮಕ ಕಲೆ ಪೂರಕವಾದುದು. ಕಾವ್ಯಗಳಲ್ಲಿನ ಸಾಂದರ್ಭಿಕವಾದ ಸಾಹಿತ್ಯ ಶ್ರೀಮಂತಿಕೆಗೆ ರಸಬದ್ಧವಾದ ರಾಗಗಳ ಸಂಯೋಜನೆಯಿಂದ ಶೋತೃಗಳಿಗೆ ಹೃದ್ಯವಾಗುತ್ತದೆ. ಮನೆಮನೆಗಳಲ್ಲಿ ಗಮಕ ಕಲೆ ಪ್ರಸ್ತುತಗೊಳ್ಳಬೇಕು ಯುವ ಮನಸುಗಳನ್ನು ಅರಳಿಸಬೇಕು ಎಂದು ಕುಂದಾಪುರದ ಖ್ಯಾತ ನ್ಯಾಯವಾದಿ ಎ ಎಸ್ ಎನ್ ಹೆಬ್ಬಾರ್ ಅಭಿಪ್ರಾಯಪಟ್ಟರು. ಅವರು ಕುಂದಾಪುರದ ‘ನುಡಿ’ ಯಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಕರ್ನಾಟಕ ಗಮಕ ಕಲಾ […]
ವೈಷ್ಣವಿ ಖಾರ್ವಿಗೆ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ
ಕುಂದಾಪುರ ( ನ.29): ಬೆಂಗಳೂರಿನಲ್ಲಿ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಇಕ್ಯುಪ್ಡ್ ಬೆಂಚ್ ಪ್ರೆಸ್ ಸ್ಪರ್ಧೆಯ 69 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಗಂಗೊಳ್ಳಿ ಇವರು ತೃತೀಯ ಸ್ಥಾನವನ್ನು ಪಡೆದು ಕಂಚಿನ ಪದಕವನ್ನು ಗಳಿಸಿರುತ್ತಾರೆ. ಈಕೆ ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್ (ರಿ )ಹಾಗೂ ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್( ರಿ ) ಈ ಸಂಸ್ಥೆಯ ಸದಸ್ಯರಾಗಿದ್ದು ಗಂಗೊಳ್ಳಿಯ […]
ಸರಸ್ವತಿ ವಿದ್ಯಾಲಯ ಪಿ ಯು ಕಾಲೇಜು ಗಂಗೊಳ್ಳಿ :ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಂಪನ್ನ
ಗಂಗೊಳ್ಳಿ ( ನ,21): ವಿದ್ಯಾರ್ಥಿಗಳಲ್ಲಿ ಭಾವೈಕ್ಯತೆ ಮತ್ತು ಸಾಮಾಜಿಕ ಕಳಕಳಿ ಉಂಟು ಮಾಡುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯಾ ಇಂತಹ ಯೋಜನೆಗಳು ಅತ್ಯಂತ ಅರ್ಥಪೂರ್ಣವಾಗಿದೆ ಎಂದು ವಂಡ್ಸೆ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲಕರಾದ ರಾಜೀವ್ ನಾಯ್ಕ್ ಅಭಿಪ್ರಾಯಪಟ್ಟರು. ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಕೊಲ್ಲೂರಿನ ಧರ್ಮಪೀಠದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕವಿತಾ ಎಂ ಸಿ ರವರು […]
ಗಂಗೊಳ್ಳಿಯಲ್ಲಿ ಕನ್ನಡ ರಾಜ್ಯೋತ್ಸವ
ಗಂಗೊಳ್ಳಿ( ನ.02): ನಮ್ಮ ಮಾತೃಭಾಷೆಯಾದ ಕನ್ನಡದ ಬಗೆಗೆ ನಿರಂತರವಾದ ಪ್ರೀತಿ ಕಾಳಜಿಯನ್ನು ಇಟ್ಟುಕೊಂಡು ಅದನ್ನು ನಿತ್ಯದ ಜೀವನದಲ್ಲಿ ಹೆಚ್ಚು ಬಳಸೋಣ ಎಂದು ನಿವೃತ್ತ ಪೋಸ್ಟ್ ಮಾಸ್ಟರ್ ಸೀತಾರಾಮ ಗಾಣಿಗ ಅಭಿಪ್ರಾಯಪಟ್ಟರು ಅವರು ಬೆಂಗಳೂರು ಹೋಟೆಲ್ ನ್ಯೂಸ್ ಮಾಸಪತ್ರಿಕೆ ಮತ್ತು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ ಗಂಗೊಳ್ಳಿಯಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಂದು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಂಕರ ಜಿ.ಭಾಸ್ಕರ, ಲಕ್ಷ್ಮಣ, ಗುರು ಪಟೇಲ್, […]
ಗಂಗೊಳ್ಳಿ ಶಾರದೋತ್ಸವದಲ್ಲಿ ಸಂಜಿತ್ ಎಮ್ ದೇವಾಡಿಗರಿಂದ ಸ್ಯಾಕ್ಸೋಫೋನ್ ವಾದನ ಸೇವೆ
ಗಂಗೊಳ್ಳಿ(ಆ,27): ಸೇವಾ ಸಂಘ(ರಿ.) ಗಂಗೊಳ್ಳಿಯ 49 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ವೇದಿಕೆಯಲ್ಲಿ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಹುಮುಖ ಬಾಲ ಪ್ರತಿಭೆ ಸಂಜಿತ್ ಎಮ್ ದೇವಾಡಿಗ ತಮ್ಮ ತಂಡದೊಂದಿಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ಸಲ್ಲಿಸಿದರು. ಶಾರದೆ ದಯೆ ತೋರಿದೆ, ಡೀ ಡೀ ಆಡ್ಯಾನೇ ರಂಗ , ಆವ ಕುಲವೋ ರಂಗ, ಕಣ್ಣುಗಳೆರಡು ಸಾಲದಮ್ಮ, ಕಮಲದ ಮೊಗದೋಳೆ, ತುಳುವನಾಡ ಧರ್ಮ ತುಡರ್, ಎಂಥ ಅಂದ ಎಂಥ ಚಂದ, ತಂಬೂರಿ ಮೀಟಿದವ […]
ಪವರ್ ಲಿಫ್ಟಿಂಗ್ ನಲ್ಲಿ ವೈಷ್ಣವಿಗೆ ಎರಡು ಚಿನ್ನ
ಕುಂದಾಪುರ( ಆ,06): ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ಪವರ್ ಲಿಫ್ಟಿಂಗ್ ಪಂದ್ಯಕೂಟದಲ್ಲಿ 69 ಕೆ.ಜಿ. ಸಬ್ ಜೂನಿಯರ್ ಬೆಂಚ್ ಪ್ರೆಸ್ ಕ್ಲಾಸಿಕ್ ಮತ್ತು ಇಕ್ವಿಪ್ದ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಅವರು ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕಗಳನ್ನು ಗಳಿಸಿರುತ್ತಾರೆ. ಈಕೆ ಕುಂದಾಪುರದ ನ್ಯೂ ಹರ್ಕುಲಸ್ ಜಿಮ್ ನ ಸದಸ್ಯೆ. ತರಬೇತುದಾರ ಸತೀಶ್ ಖಾರ್ವಿ ಮತ್ತು ಕಾರ್ತಿಕ್ ಪೂಜಾರಿ ತರಬೇತಿ ನೀಡಿರುತ್ತಾರೆ. ಈಕೆ ಗಂಗೊಳ್ಳಿಯ […]
ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ
ಗಂಗೊಳ್ಳಿ(ಸೆ,28): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಲಕರ ಬಾಲ್ ಬ್ಯಾಡ್ಮಿಂಟನ್ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ತಂಡಗಳು ಪ್ರಥಮ ಸ್ಥಾನಿಯಾಗಿ ಮೂಡಿಬಂದು ಅವಳಿ ಪ್ರಶಸ್ತಿಯನ್ನು ಗೆದ್ದುಕೊಂದಿದೆ. […]
ಉಡುಪಿ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ದ್ವಿತೀಯ
ಗಂಗೊಳ್ಳಿ(ಸೆ,28): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ನೆಟ್ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಲಕರ ತಂಡದಲ್ಲಿ ವೀರೇಶ್, ಚರಣ್, ನಾಗರಾಜ್, ಆದಿತ್ಯ, ಶಮಿತ್, ಯುವರಾಜ್, ರಿತೇಶ್, ನವೀನ್ ಶರಣ್ ಮತ್ತು […]
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆ
ಗಂಗೊಳ್ಳಿ( ಸೆ.16): ಭಾರತದಲ್ಲಿ ಅತಿ ಹೆಚ್ಚು ಜನರು ಮಾತನಾಡುವ ಭಾಷೆ ಹಿಂದಿ ಯಾಗಿದೆ. ಅದನ್ನು ನಮ್ಮ ರಾಷ್ಟ್ರಭಾಷೆ ಎನ್ನಲು ನಾವು ಹೆಮ್ಮೆ ಪಡಬೇಕು. ಹೊಸ ಭಾಷೆಗಳನ್ನು ಕಲಿಯುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯಡಕ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿಂದಿ ಭಾಷಾ ಉಪನ್ಯಾಸಕರಾದ ಅನಂತರಾಮ ನಾಯಕ್ ಅಭಿಪ್ರಾಯ ಪಟ್ಟರು. ಅವರು ಕಳೆದ ಗುರುವಾರ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ […]










