ಗಂಗೊಳ್ಳಿ(ಜೂ,30) : ಗಂಗೊಳ್ಳಿಯ ರೋಟರಿ ಕ್ಲಬ್ ನ 2023 -24 ನೇ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಖ್ಯಾತ ಉದ್ಯಮಿ ಎಂ ನಾಗೇಂದ್ರ ಪೈ ಆಯ್ಕೆಯಾಗಿರುತ್ತಾರೆ. ವಿವಿಧ ಸಂಘ ಸಂಸ್ಥೆಗಳ ಸಕ್ರಿಯ ಸದಸ್ಯರಾಗಿರುವ ಇವರು ಗಂಗೊಳ್ಳಿ ಭಾಗದಲ್ಲಿ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ.
Tag: narendra gangolli
ಅಂಬೇಡ್ಕರ್ ಯುವಕ ಮಂಡಲ ಮೇಲ್ ಗಂಗೊಳ್ಳಿ: ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ
ಗಂಗೊಳ್ಳಿ(ಜೂ,17): ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ಮೇಲ್ ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಮತ್ತು ಕಲಿಕಾ ಪರಿಕರಗಳನ್ನು ಹಾಗು ಇಂಗ್ಲೀಷ್ ಭಾಷಾ ಕಲಿಕೆಯ ಪುಸ್ತಕಗಳನ್ನು ಹಂಚುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷರಾದ ಶ್ರೀ ಭಾಸ್ಕರ್. ಹೆಚ್. ಜಿ, ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಘವೇಂದ್ರ ಮತ್ತು ಎಲ್ಲಾ ಸದಸ್ಯರು, […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ : ಉಪನ್ಯಾಸಕ -ಪೋಷಕರ ಸಮ್ಮಿಲನ ಕಾರ್ಯಕ್ರಮ
ಗಂಗೊಳ್ಳಿ(ಜೂ,17) : ಮಕ್ಕಳ ತಪ್ಪುಗಳನ್ನು ಪ್ರೀತಿಯಿಂದಲೇ ತಿದ್ದುವ ಅಭ್ಯಾಸವನ್ನು ಪೋಷಕರು ಬೆಳೆಸಿಕೊಳ್ಳಬೇಕು. ಮಕ್ಕಳ ಜೊತೆ ನಿರಂತರವಾದ ಉತ್ತಮ ಸಂವಹನ ಮತ್ತು ಸಂಬಂಧವನ್ನು ಕಾಪಿಟ್ಟುಕೊಳ್ಳಬೇಕು ಎಂದು ಬಸ್ರೂರು ಶಾರದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ರಾಧಾಕೃಷ್ಣ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು,ವಿದ್ಯಾರ್ಥಿಗಳು ಮತ್ತು ಹೆತ್ತವರ ಸಮ್ಮಿಲನ ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ […]
ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನೋಟ್ ಪುಸ್ತಕಗಳ ಉಚಿತ ವಿತರಣೆ
ಗಂಗೊಳ್ಳಿ (ಜೂ, 10) : ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಅವರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಯಾವುದೇ ಸಂಸ್ಥೆಗೆ ಘನತೆಯನ್ನು ತಂದು ಕೊಡುತ್ತದೆ. ಪ್ರತಿ ಸಂಘ- ಸಂಸ್ಥೆಗಳು ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವನಾಥ ಭಟ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನಡೆದ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಬಿಲ್ಲವರ […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಪ್ರಥಮ ಪಿಯುಸಿ ಆರಂಭೋತ್ಸವ
ಗಂಗೊಳ್ಳಿ(ಜೂ,4):ವಿದ್ಯಾರ್ಥಿಗಳು ಪಠ್ಯದ ಕಲಿಕೆಯ ಜೊತೆ ಜೊತೆಗೆ ತಮ್ಮ ಸರ್ವಾಂಗೀಣ ವ್ಯಕ್ತಿತ್ವದ ಅಭಿವೃದ್ಧಿಯ ಕಡೆಗೂ ಗಮನ ಹರಿಸಬೇಕು. ಉತ್ತಮ ವ್ಯಕ್ತಿತ್ವದಿಂದ ಯಶಸ್ಸು ಕಾಣಲು ಸಾಧ್ಯ ಎಂದು ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೆಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಸಂಸ್ಕøತ ಉಪನ್ಯಾಸಕ ವೆಂಕಟೇಶ ಮೂರ್ತಿ ಎನ್. ಸಿ ಪಠ್ಯಇತರ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. […]
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ: ಜೂನ್ 10ರಂದು ಉಚಿತ ನೋಟ್ ಬುಕ್ ವಿತರಣೆ
ಗಂಗೊಳ್ಳಿ(ಜೂ,4 ): ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಇವರ ವತಿಯಿಂದ ಗಂಗೊಳ್ಳಿಯ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳಿಗಾಗಿ ಉಚಿತ ನೋಟ್ ಬುಕ್ ವಿತರಣಾ ಸಮಾರಂಭವು ಜೂನ್ 10ರಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಲಿದೆ. ಗೋಪಾಲ ಪೂಜಾರಿಯವರು ಅಧ್ಯಕ್ಷತೆ ವಹಿಸಲಿದ್ದು, ಬಿ. ಎಸ್ ಎನ್ ಎಲ್ ನಿವೃತ್ತ ಇಂಜಿನಿಯರ್ ಅಣ್ಣಪ್ಪ ಬಿಲ್ಲವ, ಉದ್ಯಮಿಗಳಾದ ಲಕ್ಷ್ಮಣ ಬಿಲ್ಲವ ಮತ್ತು ದಿನೇಶ್ ಬಿಲ್ಲವ, ವಿಶ್ವನಾಥ್ ಭಟ್, ಜಿ.ಕೆ ವೆಂಕಟೇಶ, ಜಿ ಎ […]
ಗಂಗೊಳ್ಳಿ : ಸರಸ್ವತಿ ವಿದ್ಯಾಲಯಕ್ಕೆ ಶೇ.98.3 ಫಲಿತಾಂಶ
ಗಂಗೊಳ್ಳಿ(ಎ,24): 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಶೇ. 98.3 ಫಲಿತಾಂಶ ದಾಖಲಿಸಿದ್ದು, ವಿಜ್ಞಾನ ವಿಭಾಗದಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಕುಳಿತ 117 ವಿದ್ಯಾರ್ಥಿಗಳಲ್ಲಿ 115 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು, 45 ವಿದ್ಯಾರ್ಥಿಗಳು ವಿಶಿಷ್ಠ ದರ್ಜೆಯಲ್ಲಿ, 57 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 7 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು 6 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ […]
ಗಂಗೊಳ್ಳಿ ಪ್ರಬಂಧ ಸ್ಪರ್ಧೆ ಫಲಿತಾಂಶ
ಗಂಗೊಳ್ಳಿ( ಎ,17): ಡಾ.ಬಿ.ಆರ್ ಅಂಬೇಡ್ಕರ್ ಯುವಕ ಮಂಡಲ(ರಿ),ಅಮೃತಾ ಯುವತಿ ಮಂಡಲ (ರಿ) ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿ. ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆಯ ಪ್ರಯುಕ್ತ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪದವಿ ಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ನನ್ನ ಅರಿವಿನ ಅಂಬೇಡ್ಕರ್ ವಿಷಯದ ಕುರಿತಾದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟಗೊಂಡಿದೆ. ಕುಂದಾಪುರದ ಡಾ. ಬಿ […]
ಬದುಕಿನ ಸ್ವಯಂ ವಿಶ್ಲೇಷಣೆ ಮುಖ್ಯ : ನರೇಂದ್ರ ಎಸ್ ಗಂಗೊಳ್ಳಿ
ಗಂಗೊಳ್ಳಿ(ಏ .01): ನಮ್ಮ ಬದುಕಿನ ಸ್ವಯಂ ವಿಶ್ಲೇಷಣೆ ಮಾಡಿಕೊಂಡಾಗ ಆತ್ಮತೃಪ್ತಿ ಸಂತೋಷ ಕಾಣಸಿಗುವಂತಾಗಬೇಕು ಅದು ನಿಜವಾದ ಬದುಕಿನ ಸಾರ್ಥಕತೆ ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಇದರ 39ನೇ ವಾರ್ಷಿಕೋತ್ಸವ ಮತ್ತು ಗುರು ಜ್ಯೋತಿ ಶಿಕ್ಷಣ ನಿಧಿ ಯೋಜನೆಯ 22ನೇ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದ ಅಧ್ಯಕ್ಷತೆ […]
ಡಾ.ಗಣೇಶ್ ಗಂಗೊಳ್ಳಿಯವರಿಗೆ ಸನ್ಮಾನ
ಗಂಗೊಳ್ಳಿ(ಮಾ.05): ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇದರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ನಾಡಗೀತೆ ಮತ್ತು ರೈತ ಗೀತೆ ಹಾಗೂ ಇತರ ಹಾಡುಗಳನ್ನು ಹಾಡಲು ಅತ್ಯುತ್ತಮ ರೀತಿಯಲ್ಲಿ ತರಬೇತಿ ನೀಡಿದ ಗಾಯಕ ಹಾಗೂ ಸಂಘಟಕ ಡಾ.ಗಣೇಶ್ ಗಂಗೊಳ್ಳಿ ಅವರಿಗೆ ಸಂಸ್ಥೆಯ ವತಿಯಿಂದ ಮಾ.04 ರಂದು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಶ್ರೀ ಉಮೇಶ್ ಕಾರ್ಣಿಕ್ , ಶ್ರೀ ರಾಘವೇಂದ್ರ , ಹಾಗೂ ಸಹ ಶಿಕ್ಷಕರಾದ ಶ್ರೀ ಗೋಪಾಲ್ ,ಶ್ರೀಮತಿ […]










