ಗಂಗೊಳ್ಳಿ(ಆ,11):ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳನ್ನು ಹೆಚ್ಚು ಕ್ರಿಯಾಶೀಲವಾಗಿಡುವಲ್ಲಿ ಸಹಕಾರ ನೀಡುತ್ತವೆ. ಉತ್ತಮ ಬದುಕಿಗೆ ಬೇಕಾದ ಆತ್ಮವಿಶ್ವಾಸವನ್ನು ನೀಡುತ್ತವೆ ಎಂದು ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷ ಎಂ ನಾಗೇಂದ್ರ ಪೈ ಹೇಳಿದರು. ಅವರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಸೇವಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಭಟ್ಕಳದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ವೈಶಾಲಿ ಜಿ […]
Tag: narendra gangolli
ನಾವುಂದ ಕಾಲೇಜಿನ ಅಗ್ರಸ್ಥಾನಿ ರಾಹುಲ್ ಗೆ ನಗದು ಬಹುಮಾನ
ನಾವುಂದ (ಜು,20): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದದ್ದು ಮಾತ್ರವಲ್ಲದೆ ಬೈಂದೂರು ತಾಲೂಕಿಗೂ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ರಾಹುಲ್ ಅವರಿಗೆ 1995 -96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಪರವಾಗಿ ಮಣಿಪಾಲದ ನವಿತಾಸ್ ಲೈಫ್ ಸೈನ್ಸ್ ನಲ್ಲಿ […]
ಗಂಗೊಳ್ಳಿಯಲ್ಲಿ ಮತ್ತೊಮ್ಮೆ ಮನ ರಂಜಿಸಿದ ಮರಣಿ ಮಾಂಟೆ
ಗಂಗೊಳ್ಳಿ(ಜು,20): ಇಲ್ಲಿನ ಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಆಶ್ರಯದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಕ್ತನ ಮತ್ತು ಹಳೆ ವಿದ್ಯಾರ್ಥಿಗಳು ಇಲ್ಲಿನ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ಪ್ರದರ್ಶಿಸಿದ ‘ಮರಣಿ ಮಾಂಟೆ’ ನಾಟಕವು ತನ್ನ ವಿಶೇಷವಾದ ಕಥಾ ವಸ್ತು ಮತ್ತು ಕಥನ ಶೈಲಿಯಿಂದ ಗಮನ ಸೆಳೆದು ಜನ ಮನ ಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು. ಸಾವು ಬಾರದಂತೆ ಔಷಧಿ ಕಂಡು ಹುಡುಕಿ ಸಾವಿನ ದೇವತೆಗೆ ಸವಾಲು ಹಾಕುವ ವೈದ್ಯನೊಬ್ಬ ಕೊನೆಯಲ್ಲಿ […]
ಬಿಲ್ಲವರ ಹಿತ ರಕ್ಷಣಾ ವೇದಿಕೆ ಗಂಗೊಳ್ಳಿ: ವಾರ್ಷಿಕ ಮಹಾಸಭೆ
ಗಂಗೊಳ್ಳಿ(ಜು12) : ಒಂದು ಸಮುದಾಯದ ಅಭಿವೃದ್ಧಿಯಲ್ಲಿ ಪರಸ್ಪರ ಸಹಕಾರ ಪ್ರೀತಿ ವಿಶ್ವಾಸ ಮತ್ತು ಸ್ವಾವಲಂಬನೆ ಕೂಡ ಬಹಳ ಮಹತ್ವದ ಪಾತ್ರವನ್ನು ವಹಿಸುತ್ತದೆ. ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಮನಸ್ಸುಗಳನ್ನು ಸಮಾಜ ಯಾವತ್ತೂ ಸ್ಮರಿಸುತ್ತದೆ ಎಂದು ಉಪ್ಪುಂದದ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕರಾದ ಗೋವಿಂದ ಬಾಬು ಪೂಜಾರಿಯವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಎರಡನೇ ವರ್ಷದ […]
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ: ಜು.9 ರಂದು ಎರಡನೇ ಮಹಾಸಭೆ
ಗಂಗೊಳ್ಳಿ(ಜು,5) : ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿಯ ಎರಡನೇ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಜುಲೈ 9 ರ ಭಾನುವಾರದಂದು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಲಿದೆ. ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕರಾದ ಡಾ. ಗೋವಿಂದ ಬಾಬು ಪೂಜಾರಿಯವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರಕಾರದ ಮಾಜಿ ಶಾಸಕರಾದ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಜಿಲ್ಲಾ ಪಂಚಾಯತ್ ನ ಮಾಜಿ ಸದಸ್ಯೆ […]
ಜಿ.ಎಸ್.ವಿ.ಎಸ್ ಅಸೋಷಿಯೇಷನ್ ಗಂಗೊಳ್ಳಿ: ಶೈಕ್ಷಣಿಕ ಸಾಧಕರ ಅಭಿನಂದನಾ ಸಮಾರಂಭ
ಗಂಗೊಳ್ಳಿ(ಜು,5): ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಕಳೆದ 2022-23ರ ಶೈಕ್ಷಣಿಕ ವರುಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 85ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಭೋಧಕರನ್ನು ಗೌರವಿಸುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಚಿನ್ಮಯಿ ಆಸ್ಪತ್ರೆಯ […]
ರೋಟರಿ ಕ್ಲಬ್ ಅಧ್ಯಕ್ಷರಾಗಿ ಎಂ ನಾಗೇಂದ್ರ ಪೈ ಆಯ್ಕೆ
ಗಂಗೊಳ್ಳಿ(ಜೂ,30) : ಗಂಗೊಳ್ಳಿಯ ರೋಟರಿ ಕ್ಲಬ್ ನ 2023 -24 ನೇ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಖ್ಯಾತ ಉದ್ಯಮಿ ಎಂ ನಾಗೇಂದ್ರ ಪೈ ಆಯ್ಕೆಯಾಗಿರುತ್ತಾರೆ. ವಿವಿಧ ಸಂಘ ಸಂಸ್ಥೆಗಳ ಸಕ್ರಿಯ ಸದಸ್ಯರಾಗಿರುವ ಇವರು ಗಂಗೊಳ್ಳಿ ಭಾಗದಲ್ಲಿ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ.
ಅಂಬೇಡ್ಕರ್ ಯುವಕ ಮಂಡಲ ಮೇಲ್ ಗಂಗೊಳ್ಳಿ: ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ
ಗಂಗೊಳ್ಳಿ(ಜೂ,17): ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ಮೇಲ್ ಗಂಗೊಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಮತ್ತು ಕಲಿಕಾ ಪರಿಕರಗಳನ್ನು ಹಾಗು ಇಂಗ್ಲೀಷ್ ಭಾಷಾ ಕಲಿಕೆಯ ಪುಸ್ತಕಗಳನ್ನು ಹಂಚುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಡಾ. ಬಿ. ಆರ್ ಅಂಬೇಡ್ಕರ್ ಯುವಕ ಮಂಡಲದ ಸ್ಥಾಪಕಾಧ್ಯಕ್ಷರಾದ ಶ್ರೀ ಭಾಸ್ಕರ್. ಹೆಚ್. ಜಿ, ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಘವೇಂದ್ರ ಮತ್ತು ಎಲ್ಲಾ ಸದಸ್ಯರು, […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ : ಉಪನ್ಯಾಸಕ -ಪೋಷಕರ ಸಮ್ಮಿಲನ ಕಾರ್ಯಕ್ರಮ
ಗಂಗೊಳ್ಳಿ(ಜೂ,17) : ಮಕ್ಕಳ ತಪ್ಪುಗಳನ್ನು ಪ್ರೀತಿಯಿಂದಲೇ ತಿದ್ದುವ ಅಭ್ಯಾಸವನ್ನು ಪೋಷಕರು ಬೆಳೆಸಿಕೊಳ್ಳಬೇಕು. ಮಕ್ಕಳ ಜೊತೆ ನಿರಂತರವಾದ ಉತ್ತಮ ಸಂವಹನ ಮತ್ತು ಸಂಬಂಧವನ್ನು ಕಾಪಿಟ್ಟುಕೊಳ್ಳಬೇಕು ಎಂದು ಬಸ್ರೂರು ಶಾರದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೆ.ರಾಧಾಕೃಷ್ಣ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು,ವಿದ್ಯಾರ್ಥಿಗಳು ಮತ್ತು ಹೆತ್ತವರ ಸಮ್ಮಿಲನ ಕಾರ್ಯಕ್ರಮದ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ […]
ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನೋಟ್ ಪುಸ್ತಕಗಳ ಉಚಿತ ವಿತರಣೆ
ಗಂಗೊಳ್ಳಿ (ಜೂ, 10) : ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ದೃಷ್ಟಿಯಿಂದ ಅವರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಯಾವುದೇ ಸಂಸ್ಥೆಗೆ ಘನತೆಯನ್ನು ತಂದು ಕೊಡುತ್ತದೆ. ಪ್ರತಿ ಸಂಘ- ಸಂಸ್ಥೆಗಳು ಈ ನಿಟ್ಟಿನಲ್ಲಿ ಪ್ರಯತ್ನಿಸಬೇಕು ಎಂದು ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವಿಶ್ವನಾಥ ಭಟ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನಡೆದ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಬಿಲ್ಲವರ […]










