ಗಂಗೊಳ್ಳಿ( ಅ,31): ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಪೋಷಿಸುವಲ್ಲಿ ಪ್ರತಿಯೊಬ್ಬರು ಮನಸ್ಸು ಮಾಡಬೇಕಿದೆ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ತಮ್ಮನ್ನು ಹೆಚ್ಚು ಮುತುವರ್ಜಿಯಿಂದ ತೊಡಗಿಸಿಕೊಳ್ಳಬೇಕಿದೆ ಎಂದು ಲಿಫ್ಟ್ ನ್ ಒಲಿವೆರಾ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ಎಸ್ಎಂಎಲ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲ್ಪಟ್ಟ ಉಡುಪಿ ಜಿಲ್ಲಾ ಮಟ್ಟದ ಪುರುಷರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಜಿಎಸ್ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. […]
Tag: narendra gangolli
ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆ
ಕುಂದಾಪುರ (ಅ,27): ಸಾಹಿತ್ಯ ತಂಗುದಾಣ ಬಳಗ ರಾಜ್ಯಮಟ್ಟದ ಭಾವ ಬರಹ ಸ್ಪರ್ಧೆಯನ್ನು ಏರ್ಪಡಿಸಿದೆ. ಆಸಕ್ತರು ತಮ್ಮ ಜೀವನಕ್ಕೆ ಸಂಬಂಧಿಸಿದ ಯಾವುದೇ ವಸ್ತು ವಿಚಾರ ವ್ಯಕ್ತಿ ಸಂಬಂಧ ಕನಸು ಸ್ಥಳ ಸನ್ನಿವೇಶ ಇತ್ಯಾದಿ ವಿಷಯಗಳ ಬಗೆಗೆ ಭಾವನೆಗಳನ್ನು ಪ್ರಕಟಪಡಿಸುವಂತಹ ಬರಹವನ್ನು ಬರೆಯಬಹುದು. ಪ್ರಥಮ ಮತ್ತು ದ್ವಿತೀಯ ನಗದು ಬಹುಮಾನಗಳ ಜೊತೆಗೆ ಪ್ರಮಾಣ ಪತ್ರಗಳನ್ನು ನೀಡಲಾಗುವುದು. ಬರಹಗಳನ್ನು ವಾಟ್ಸಪ್ ಮೂಲಕ 9242127307 ಅಥವಾ ಇಮೇಲ್ ಮೂಲಕ sahithyathangudana@gmail.com ಗೆ ಕಳುಹಿಸಬಹುದಾಗಿದೆ. ಬರಹವನ್ನು ಕಳಿಸಲು ಕೊನೆಯ ದಿನಾಂಕ […]
ಗಂಗೊಳ್ಳಿಯಲ್ಲಿ ಗೂಡುದೀಪ ಸ್ಪರ್ಧೆ
ಗಂಗೊಳ್ಳಿ(ಅ,19): ಡಾ.ಬಿ.ಆರ್. ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡುದೀಪ ಸ್ಪರ್ಧೆಯನ್ನು ಅಕ್ಟೋಬರ್ 24 ರಂದು ಹಮ್ಮಿಕೊಳ್ಳಲಾಗಿದೆ. ಪ್ರಥಮ ದ್ವಿತೀಯ ಮತ್ತು ತೃತೀಯ ನಗದು ಬಹುಮಾನಗಳು ಇವೆ. ಸ್ವಂತ ರಚನೆಯ ಆಧುನಿಕ ಮತ್ತು ಸಾಂಪ್ರದಾಯಿಕ ಶೈಲಿಯ ಗೂಡುದೀಪಗಳಿಗೆ ಸ್ಪರ್ಧೆಯಲ್ಲಿ ಅವಕಾಶವಿದ್ದು ಅಕ್ಟೋಬರ್ 23ರ ಒಳಗೆ ಸ್ಪರ್ಧಾಳುಗಳು ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 7406196138, 9481751521, 9535633230 9632867885 ನಂಬರನ್ನು ಸಂಪರ್ಕಿಸಲು ಕೋರಲಾಗಿದೆ. ವರದಿ : ನರೇಂದ್ರ […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಎನ್ಎಸ್ಎಸ್ ಶಿಬಿರದ ಸಮಾರೋಪ ಸಮಾರಂಭ
ಗಂಗೊಳ್ಳಿ(ಅ,8): ಎನ್ಎಸ್ಎಸ್ ಶಿಬಿರದಲ್ಲಿ ಕಲಿತ ಮೌಲಿಕವಾದ ಅಂಶಗಳನ್ನು ತಮ್ಮ ಜೀವನದಲ್ಲಿ ವಿದ್ಯಾರ್ಥಿಗಳು ಅಳವಡಿಸಿಕೊಳ್ಳುವುದರ ಮೂಲಕ ವ್ಯಕ್ತಿತ್ವವನ್ನು ಸದೃಢಗೊಳಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲರು ,ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ ಅವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ […]
ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ
ಗಂಗೊಳ್ಳಿ (ಅ,8): ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಇವರ ವತಿಯಿಂದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ನನ್ನ ಜೀವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಭಾವ ಈ ವಿಷಯದ ಕುರಿತಂತೆ ವಿದ್ಯಾರ್ಥಿಗಳು A4 ಅಳತೆಯ ಕಾಗದದಲ್ಲಿ ಮೂರು ಪುಟಗಳಿಗೆ ಮೀರದಂತೆ ಕಾಗದದ ಒಂದೇ ಮಗ್ಗುಲಿನಲ್ಲಿ ಕನ್ನಡದ ಹಸ್ತಾಕ್ಷರದಲ್ಲಿ ಬರೆದು ಕಳುಹಿಸಬೇಕು. ಪ್ರಥಮ ದ್ವಿತೀಯ ಮತ್ತು ತೃತೀಯ ಬಹುಮಾನಗಳಿದ್ದು ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಡಿಜಿಟಲ್ […]
ಎಸ್ ವಿ ಪಿ ಯು ಕಾಲೇಜು ಗಂಗೊಳ್ಳಿ : ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಗಂಗೊಳ್ಳಿ (ಸೆ.01): ಎನ್ಎಸ್ಎಸ್ ಮೂಲಕ ಸಿಗುವ ಅವಕಾಶಗಳನ್ನು ಸಮರ್ಪಕವಾಗಿ ವಿದ್ಯಾರ್ಥಿಗಳು ಬಳಸಿಕೊಂಡರೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ. ವ್ಯಕ್ತಿತ್ವ ವಿಕಸನದ ಜೊತೆಗೆ ಉತ್ತಮ ಸಮಾಜವನ್ನು ಕಟ್ಟುವಲ್ಲಿಯೂ ಎನ್ಎಸ್ಎಸ್ ಕೊಡುಗೆಯನ್ನು ನೀಡುತ್ತದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷರಾದ ಶ್ರೀ ಎಚ್ ಗಣೇಶ್ ಕಾಮತ್ ಅವರು ಅಭಿಪ್ರಾಯ ಪಟ್ಟರು. ಅವರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಗಂಗೊಳ್ಳಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಸರಸ್ವತಿ ವಿದ್ಯಾಲಯ ಅಂಗ್ಲ ಮಾಧ್ಯಮ […]
ನರೇಂದ್ರ ಎಸ್ ಗಂಗೊಳ್ಳಿಗೆ ನೇಷನ್ ಬಿಲ್ಡರ್ ಪ್ರಶಸ್ತಿ
ಗಂಗೊಳ್ಳಿ (ಸೆ,29): ಪ್ರತಿಷ್ಠಿತ ರೋಟರಿ ಕ್ಲಬ್ ನ ರೋಟರಿ ಇಂಡಿಯಾ ಲಿಟರಸಿ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಶಿಕ್ಷಕರಿಗೆ ಕೊಡ ಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅವರಿಗೆ ಲಭಿಸಿದೆ. ರೋಟರಿ ಕ್ಲಬ್ ಗಂಗೊಳ್ಳಿ ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಉಪನ್ಯಾಸಕ […]
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟಗಳ ಉದ್ಘಾಟನೆ
ಗಂಗೊಳ್ಳಿ(ಸೆ,25): ಹದಿ ಹರೆಯದಲ್ಲಿ ಕ್ರೀಡೆಯಂತಹ ಚಟುವಟಿಕೆಗಳಲ್ಲಿ ನಮ್ಮನ್ನು ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ವಿಕಾಸಗೊಳ್ಳಲು ಸಹಾಯವಾಗುತ್ತದೆ. ಇಲ್ಲಿನ ಶಿಸ್ತು ಬದ್ಧತೆ ಎನ್ನುವಂತಾದ್ದು ಉತ್ತಮ ಜೀವನವನ್ನು ರೂಪಿಸಿಕೊಳ್ಳಿವಲ್ಲಿ ಕೂಡ ನೆರವು ನೀಡುತ್ತದೆ ಎಂದು ಜಿ.ಎಸ್.ವಿ.ಎಸ್ ಅಸೋಷಿಯೇಷನ್ ಕಾರ್ಯದರ್ಶಿ ಹೆಚ್ ಗಣೇಶ ಕಾಮತ್ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ […]
ಕರಾಟೆಯಲ್ಲಿ ಅನ್ಸಿಟಾಗೆ ದ್ವಿತೀಯ ಸ್ಥಾನ
ಗಂಗೊಳ್ಳಿ(ಸೆ,19): ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪದವಿಪೂರ್ವ ವಿಭಾಗದ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪಂದ್ಯಾಟ 2022-23ರಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅನ್ಸಿಟಾ ಮರಿಯಾ ರೆಬೆಲ್ಲೊ ಕರಾಟೆಯ ಕುಮಿಟೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಇವರು ಗಂಗೊಳ್ಳಿಯ ಟ್ರೆವರ್ ರೋಮನ್ ರೆಬೆಲ್ಲೊ ಮತ್ತು ಅನಿತಾ ಸ್ಟೆಫಾನಿಯ ರೆಬೆಲ್ಲೊ ದಂಪತಿಯ ಪುತ್ರಿ ಹಾಗೂ ಕಿರಣ್ ಕುಂದಾಪುರ ಇವರಿಂದ ತರಬೇತಿ ಪಡೆದಿದ್ದಾಳೆ.
ಇಂಜಿನಿಯರ್ಸ್ ಡೇ: ಸನ್ಮಾನ ಕಾರ್ಯಕ್ರಮ
ಗಂಗೊಳ್ಳಿ( ಸೆ.18): ಇಂಜಿನಿಯರ್ಸ್ ಡೇ ಪ್ರಯುಕ್ತ ಹಕ್ಲಾಡಿಯ ಚೆನ್ನಕೇಶವ ಲಯನ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್ ಗಂಗೊಳ್ಳಿ ಜಂಟಿ ಸಭೆಯನ್ನು ಇತ್ತೀಚೆಗೆ ಆಯೋಜಿಸಲಾಯಿತು . ಕಾರ್ಯಕ್ರಮದಲ್ಲಿ ಇಂಜಿನಿಯರ್ ಲಯನ್ಸ್ ಸತೀಶ್ ಶೆಟ್ಟಿ ಇವರಿಗೆ ಗಂಗೊಳ್ಳಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ಬಿನ ಅಧ್ಯಕ್ಷರಾದ ನಾಗೇಶ್ ಪೂಜಾರಿ ಹಾಗೂ ರೋಟರಿ ಕ್ಲಬ್ ನ ಅಧ್ಯಕ್ಷರಾದ ಸುಗುಣ ಆರ್ ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಲಯನ್ ಕಿಶೋರ್ ಕುಮಾರ್ ಶೆಟ್ಟಿ ಹಾಗೂ […]










