ಗಂಗೊಳ್ಳಿ(ಸೆ,16) : ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಇತ್ತೀಚೆಗೆ ೨೦೨೧-೨೨ರ ಶೈಕ್ಷಣಿಕ ವರುಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ ೮೫ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಭೋಧಕರನ್ನು ಗೌರವಿಸುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವು ಇತ್ತೀಚೆಗೆ ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳ ಸಭಾಂಗಣದಲ್ಲಿ ನಡೆಯಿತು. ಕುಂದಾಪುರದ […]
Tag: narendra gangolli
ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿಗೆ ಬಹುಮಾನ
ಗಂಗೊಳ್ಳಿ(ಸೆ,16): ಕನ್ನಡ ವಿಶ್ವವಿದ್ಯಾಲಯ ಹಂಪಿ ಪ್ರಜ್ಞಾ ಪ್ರವಾಹ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಪರಿವರ್ತನ ರಾಣಿಬೆನ್ನೂರು ಇವರ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಕವನ ರಚನಾ ಸ್ಪರ್ಧೆಯಲ್ಲಿ 1709 ಕವನಗಳ ನಡುವೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಇವರ ನನ್ನ ಯುದ್ಧ ಎನ್ನುವ ಕವನವು ನಾಲ್ಕನೇ ಸ್ಥಾನವನ್ನು ಗಳಿಸಿ ನಗದು ಬಹುಮಾನ ಗಳಿಸಿದೆ.
ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಕಿಂಡರ್ ಪ್ಲೇ ಗಾರ್ಡನ್ ಉದ್ಘಾಸಿದ ಶ್ರೀ ಆನಂದ ಸಿ ಕುಂದರ್
ಗಂಗೊಳ್ಳಿ (ಸೆ.16):ಇಲ್ಲಿನ ಸರಸ್ವತಿ ವಿದ್ಯಾಲಯದ ಆವರಣದಲ್ಲಿ ಹೊಸದಾಗಿ ನಿರ್ಮಿಸಲಾದ ಕಿಂಡರ್ ಪ್ಲೇ ಗಾರ್ಡನ್ ನ್ನು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕರಾದ ಉದ್ಯಮಿ ಆನಂದ ಸಿ ಕುಂದರ್ ಇತ್ತೀಚಿಗೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ವಿದ್ಯಾ ಸಂಸ್ಥೆ ಒದಗಿಸುವ ಇಂತಹ ಸೌಲಭ್ಯಗಳು ಮಕ್ಕಳಲ್ಲಿ ಉತ್ಸಾಹ ವನ್ನು ಹೆಚ್ಚಿಸುತ್ತದೆ. ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ವಿದ್ಯಾರ್ಥಿಗಳಿಗೆ ಪ್ರೇರಣೆಯನ್ನು ನೀಡುತ್ತವೆ ಎಂದು ಹೇಳಿದರು. ಜಿ ಎಸ್ ವಿ ಎಸ್ […]
ಗಂಗೊಳ್ಳಿ :ರೋಟರಾಕ್ಟ್ ಕ್ಲಬ್ ಪದಪ್ರಧಾನ ಸಮಾರಂಭ
ಗಂಗೊಳ್ಳಿ(ಆ,26): ಇಲ್ಲಿನ ಸರಸ್ವತಿ ವಿದ್ಯಾಲಯದ ಲೈಬ್ರರಿ ಹಾಲ್ ನಲ್ಲಿ ಇತ್ತೀಚಿಗೆ ಗಂಗೊಳ್ಳಿಯ ರೋಟರಾಕ್ಟ್ ಕ್ಲಬ್ ನ ಪದಪ್ರಧಾನ ಸಮಾರಂಭ ಜರುಗಿತು . 2022 -23ನೇ ಸಾಲಿನ ರೋಟರಾಕ್ಟ್ ಕ್ಲಬ್ ಅಧ್ಯಕ್ಷರಾಗಿ ಶ್ರೇಯಾ. ಜಿ ಹಾಗೂ ಕಾರ್ಯದರ್ಶಿಯಾಗಿ ಕಿರಣ್ ಆಯ್ಕೆಯಾದರು. ರೋಟರಾಕ್ಟ್ ಡಿಸ್ಟ್ರಿಕ್ಟ್ ಚೇರ್ಮನ್ ಜೈ ವಿಠ್ಠಲ್, ಪದಪ್ರಧಾನ ನೆರವೇರಿಸಿದರು. ರೊಟ್ರಾಕ್ಟ್ ವೈಸ್ ಚೇರ್ಮನ್ ಚಂದ್ರ ಪೂಜಾರಿ, ರೊಟ್ರ್ಯಾಕ್ ಜೋನಲ್ ಕೋ ಆರ್ಡಿನೇಟರ್ ಜಾನ್ಸನ್ ಡಿ ಅಲ್ಮೇಡ ಪದ ಪ್ರಧಾನ ಸಮಾರಂಭವನ್ನು […]
ಗಂಗೊಳ್ಳಿ: ಉಚಿತ ಹೊಲಿಗೆ ತರಬೇತಿ
ಗಂಗೊಳ್ಳಿ(ಜು,23): ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ರೋಟರಿ ಜಿಲ್ಲೆ 31 82ರ ಜಿಲ್ಲಾ ಗವರ್ನರ್ ರೊಟೇರಿಯನ್ ಡಾ. ಜಯಗೌರಿ ಹಾದಿಗಲ್ ರವರ ಮಹತ್ವಕಾಂಕ್ಷೆಯ ಜಿಲ್ಲಾ ಕಾರ್ಯಕ್ರಮ ಮಹಿಳಾ ಸಬಲೀಕರಣದ ಭಾಗವಾಗಿ ಸಮಾಜದ ಆರ್ಥಿಕವಾಗಿ ಹಿಂದುಳಿದ ಆಯ್ದ ಮಹಿಳೆಯರಿಗೆ ಸ್ವ ಉದ್ಯೋಗ ಮಾಡುವಲ್ಲಿ ತರಬೇತುಗೊಳಿಸಲು ಆಯೋಜಿತವಾದ ಮೂರು ತಿಂಗಳ ಕಾಲಾವಧಿಯ ಉಚಿತ ಹೊಲಿಗೆ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ರಥಬೀದಿ ಗಂಗೊಳ್ಳಿಯಲ್ಲಿ ನೆರವೇರಿತು. ವಲಯ ಒಂದರ […]
ರೋಟರಿ ಕ್ಲಬ್ ಗಂಗೊಳ್ಳಿ : ಪದಪ್ರದಾನ ಸಮಾರಂಭ
ಗಂಗೊಳ್ಳಿ(ಜು,21): ನಾವು ಮಾಡುವ ಸೇವೆ ಅರ್ಹ ವ್ಯಕ್ತಿಗಳಿಗೆ ತಲುಪಬೇಕು. ಯಾವುದೇ ಫಲಾಪೇಕ್ಷೆ ಇಲ್ಲದೆ ಮಾಡಿದ ಸೇವೆಯಿಂದ ಜೀವನ ಸಾರ್ಥಕ ಗೊಳ್ಳುತ್ತದೆ ಎಂದು ರೋಟರಿ ಕ್ಲಬ್ ನ ವಲಯ ಒಂದರ ಅಸಿಸ್ಟೆಂಟ್ ಗವರ್ನರ್ ರೋ. ಡಾ. ಉಮೇಶ್ ಪುತ್ರನ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆದ ರೋಟರಿ ಕ್ಲಬ್ ಗಂಗೊಳ್ಳಿಯ ನೂತನ ಪದಾಧಿಕಾರಿಗಳ ಪದ ಪ್ರಧಾನ ಸಮಾರಂಭದಲ್ಲಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಸಮಾಜ ಸೇವಾ […]
ಗಂಗೊಳ್ಳಿ : ಸಿ.ಎ ಪರೀಕ್ಷೆಯಲ್ಲಿ ಸ್ವಸ್ತಿಕ್ ಶೆಣೈ ಉತ್ತೀರ್ಣ
ಗಂಗೊಳ್ಳಿ(ಜು,15): ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ಕಳೆದ ಮೇ 2022ರಲ್ಲಿ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸ್ವಸ್ತಿಕ್ ಶೆಣೈ ಉತ್ತೀರ್ಣರಾಗಿದ್ದಾರೆ. ಇವರು ಕುಂದಾಪುರದ ಶಾನುಭಾಗ್ ಹೆಗಡೆ ಅಂಡ್ ಅಸೋಸಿಯೇಟ್ಸ್ ನಲ್ಲಿ ತರಬೇತಿ ಪಡೆದಿರುತ್ತಾರೆ. ಗಂಗೊಳ್ಳಿಯ ಉದ್ಯಮಿ ಟಿ. ವೆಂಕಟೇಶ್ ದೇವಣ್ಣ ಶೆಣೈ ಮತ್ತು ವಿಜಯಲಕ್ಷ್ಮಿ ಶೆಣೈ ದಂಪತಿಯ ಪುತ್ರನಾಗಿರುವ ಇವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ.
ಗಂಗೊಳ್ಳಿ: ರೋಟರಿ ಕ್ಲಬ್ ಅಧ್ಯಕ್ಷರಾಗಿ ಸುಗುಣ ಆರ್. ಕೆ ಆಯ್ಕೆ
ಗಂಗೊಳ್ಳಿ(ಜು,6): ರೋಟರಿ ಕ್ಲಬ್ ಗಂಗೊಳ್ಳಿ ಡಿಸ್ಟ್ರಿಕ್ 3182 ವಲಯ 1ರ, 2022 – 23ನೇ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ಸುಗುಣ ಆರ್ ಕೆ ಆಯ್ಕೆಯಾಗಿರುತ್ತಾರೆ. ಕಾರ್ಯದರ್ಶಿಯಾಗಿ ಚಂದ್ರಕಲಾ ಟಿ ಮತ್ತು ಖಜಾಂಜಿಯಾಗಿ ಜನಾರ್ದನ ಪೆರಾಜೆ ಆಯ್ಕೆಯಾಗಿರುತ್ತಾರೆ. ಜುಲೈ 17 ರ ಭಾನುವಾರದಂದು ಪದಪ್ರಧಾನ ಸಮಾರಂಭವು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಇಂಡೋರ್ ಸ್ಟೇಡಿಯಂನಲ್ಲಿ ಜರಗಲಿದ್ದು ವಲಯ 1 ರ ಅಸಿಸ್ಟೆಂಟ್ ಗವರ್ನರ್ ಡಾ. ಉಮೇಶ್ ಪುತ್ರನ್ ಪದಪ್ರಧಾನ ಸಮಾರಂಭವನ್ನು […]
ವೈದ್ಯರ ದಿನಾಚರಣೆ: ಡಾ. ಮಹೇಶ್ ಜಿ & ಡಾ.ಸುಜಾತ ದಂಪತಿಗೆ ಸನ್ಮಾನ
ಗಂಗೊಳ್ಳಿ(ಜು,2): ವೈದ್ಯರ ದಿನಾಚರಣೆಯ ಪ್ರಯುಕ್ತ ಗಂಗೊಳ್ಳಿ ರೋಟರಿ ಕ್ಲಬ್ ನ ವತಿಯಿಂದ ಗಂಗೊಳ್ಳಿಯ ಚಂದ್ರ ನರ್ಸಿಂಗ್ ಹೋಮಿನ ನಿರ್ದೇಶಕರಾದ ಡಾ. ಮಹೇಶ್ ಜಿ ಹಾಗೂ ಡಾ ಸುಜಾತ ದಂಪತಿಯನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯ್ಷತೆಯನ್ನು ರೋಟರಿಯ ಅಧ್ಯಕ್ಷರಾದ ಸುಗುಣ ಆರ್. ಕೆ ವಹಿಸಿಕೊಂಡಿದ್ದರು. ರೊಟೇರಿಯನ್ ರಾಮನಾಥ್ ನಾಯಕ್ ಪ್ರಸ್ತಾವಿಕ ನುಡಿಗಳನ್ನಾಡಿದರು. ವೆಕೇಷನ್ ಸರ್ವಿಸ್ ಚೆರ್ಮನ್ ಗೋಪಾಲ್ ಅವರು ಸನ್ಮಾನವನ್ನು ನೆರವೇರಿಸಿದರು. ರೋಟೇರಿಯನ್ ಉಮೇಶ್ ಮೇಸ್ತ ವೈದ್ಯ ದಂಪತಿಗಳ ಸೇವೆಯನ್ನು ಶ್ಲಾಘಿಸಿದರು. ಕ್ಲಬ್ […]
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಯೋಗ ದಿನಾಚರಣೆ
ಗಂಗೊಳ್ಳಿ (ಜೂ,22): ಯೋಗವನ್ನು ನಾವು ಕಲಿಯುವುದರ ಜೊತೆಜೊತೆಗೆ ಮುಂದಿನ ಪೀಳಿಗೆಯವರಿಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಈ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳುವ ಪ್ರಯತ್ನವನ್ನು ಮಾಡಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀನಿವಾಸ ಖಾರ್ವಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಇಲ್ಲಿನ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ […]










