ಗಂಗೊಳ್ಳಿ (ಏ .11): ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ ಮೇಲ್ ಗಂಗೊಳ್ಳಿ ಇದರ 35 ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿಯ 29 ನೇ ವಾರ್ಷಿಕೋತ್ಸವ ಹಾಗೂ ಡಾ. ಬಿ ಆರ್. ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆಯ ಕಾರ್ಯಕ್ರಮವು ಮೇಲ್ ಗಂಗೊಳ್ಳಿಯ ಪೋರ್ಟ್ ಬಂಗ್ಲೆ ಮೈದಾನದಲ್ಲಿ ಏ.20 ರ ಬುಧವಾರದಂದು ಜರಗಲಿರುವುದು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀನಿವಾಸ […]
Tag: narendra gangolli
ಯುವ ಲೇಖಕ -ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಗೆ ಸನ್ಮಾನ
ಗಂಗೊಳ್ಳಿ( ಮಾ.29) : ನಾಯಕವಾಡಿ ಗುಜ್ಜಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನ, ಶ್ರೀ ಚೆನ್ನಬಸವೇಶ್ವರ ಭಜನಾ ಮಂಡಳಿ ಮತ್ತು ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ಇವರ ವತಿಯಿಂದ ಕಳೆದ ಸೋಮವಾರ ಯುವ ಬರಹಗಾರ ವಾಗ್ಮಿ ನರೇಂದ್ರ ಎಸ್ ಗಂಗೊಳ್ಳಿ ಇವರನ್ನು ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜು ಎನ್ ಮಾಸ್ತರ್, ಪ್ರಧಾನ ಕಾರ್ಯದರ್ಶಿ ಜಿ.ಸುಬ್ಬ, ಉಪಾಧ್ಯಕ್ಷರಾದ ಜಿ ಕೆ ಸುರೇಶ್, ಕೋಶಾಧಿಕಾರಿ […]
ರಾಷ್ಟ್ರಮಟ್ಟದ ದೇಹದಾಢ್ಯ ಸ್ಪರ್ಧೆ: ಶರತ್ ಶೇರುಗಾರ್ ಗಂಗೊಳ್ಳಿಗೆ ಚಿನ್ನದ ಪದಕ
ಕುಂದಾಪುರ (ಮಾ.16): ಪಂಜಾಬಿನ ಮೊಹಾಲಿಯಾ ಚಂಡೀಗಢ ಯುನಿವರ್ಸಿಟಿಯಲ್ಲಿ ಇತ್ತೀಚೆಗೆ ನಡೆದ ವಿಶ್ವವಿದ್ಯಾನಿಲಯಗಳ ಅಖಿಲ ಭಾರತ ಮಟ್ಟದ 65 ಕೆ.ಜಿ ವಿಭಾಗದ ದೇಹದಾಢ್ಯ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಶರತ್ ಶೇರುಗಾರ್ ಚಿನ್ನದ ಪದಕವನ್ನು ಗಳಸಿ ವಿಶೇಷ ಸಾಧನೆಗೈದಿದ್ದಾರೆ. ಇಷ್ಟೇ ಅಲ್ಲದೇ ಮಾ. 5 ರಂದು ಉಡುಪಿಯ ಮೌಂಟ್ ರೋಜರಿ ಚರ್ಚೆ ಗ್ರೌಂಡ್ ನಲ್ಲಿ ನಡೆದ ಜಿಲ್ಲಾ ಮಟ್ಟದ 70 ಕೆ.ಜಿ ವಿಭಾಗದ ದೇಹದಾಢ್ಯ ಸ್ಪರ್ಧೆಯಲ್ಲಿ ಮಿಸ್ಟರ್ ಉಡುಪಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಮಾ.6ರಂದು ಸಂತೆಕಟ್ಟೆಯಲ್ಲಿ ನಡೆದ ರಾಜ್ಯ ಮಟ್ಟದ ಮಿಸ್ಟರ್ […]
ನಾಯಕವಾಡಿ : ಸಂಗಮೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ
ನಾಯಕವಾಡಿ (ಮಾ.8 ): ಭಜನೆ ಎನ್ನುವುದು ಧಾರ್ಮಿಕ ಮನ ಶುದ್ಧಿಯನ್ನು ತರುವುದು ಮಾತ್ರವಲ್ಲದೆ ಸಂಘಟನೆಯನ್ನು ಮತ್ತಷ್ಟು ಬಲಿಷ್ಠವಾಗಿಸಲು ಸಹಾಯಮಾಡುತ್ತವೆ. ಆ ಮೂಲಕ ಜನರಲ್ಲಿ ಪರಸ್ಪರ ಸಹಕಾರವನ್ನು ಮೂಡಿಸಿ ಸಮಾಜದಲ್ಲಿ ಶಾಂತಿ ನೆಲೆಸಲು ಅನುಕೂಲವಾಗುತ್ತದೆ ಎಂದು ಕೊಂಕಣ ಕೊಪ್ಪದ ಸನ್ಯಾಸಿನಿ ಪ್ರವಚನ ಕೇಸರಿ ಪದ್ಮಾದೇವಿ ಅವರು ಅಭಿಪ್ರಾಯಪಟ್ಟರು. ಅವರು ನಾಯಕವಾಡಿ ಗುಜ್ಜಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನ ಮತ್ತು ಶ್ರೀ ಚೆನ್ನಬಸವೇಶ್ವರ ಭಜನಾ ಮಂಡಳಿಯ 67ನೇ ವಾರ್ಷಿಕೋತ್ಸವ ಮತ್ತು ಶ್ರೀ ಚೆನ್ನಬಸವೇಶ್ವರ ಯುವಕ […]
ಕವನ ಸ್ಪರ್ಧೆ – ನರೇಂದ್ರ ಎಸ್. ಗಂಗೊಳ್ಳಿ ದ್ವಿತೀಯ ಸ್ಥಾನ
ಗಂಗೊಳ್ಳಿ (ಫೆ. 13) : ಕುಂದ ಸಿರಿ ಬಳಗ ತನ್ನ ಜಾಲತಾಣಗಳ ಮೂಲಕ ಆಯೋಜಿಸಿದ್ದ ಕನ್ನಡದಲ್ಲಿ ಕವನ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಇವರು ರಚಿಸಿದ “ಮೃತ್ಯು” ಕವನವು ಬಹುಮಾನಕ್ಕೆ ಭಾಜನವಾಗಿದ್ದು 1000 ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಗಂಗೊಳ್ಳಿ: ಶವ ಸ್ನಾನದ ಟೇಬಲ್ ಕೊಡುಗೆ
ಗಂಗೊಳ್ಳಿ(ಫೆ.10): ಇಲ್ಲಿನ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಗಂಗೊಳ್ಳಿಯ ಸಾರ್ವಜನಿಕರ ಉಪಯೋಗಕ್ಕಾಗಿ ಶವ ಸ್ನಾನಕ್ಕಾಗಿ ಬಳಸುವ ಟೇಬಲನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಜಿ. ಗೋಪಾಲ ಪೂಜಾರಿ, ಗೌರವಾಧ್ಯಕ್ಷರಾದ ಲಕ್ಷ್ಮಣ ಬಿಲ್ಲವ ಮತ್ತು ಶ್ರೀನಿವಾಸ ಜತ್ತನ್, ಉಪಾಧ್ಯಕ್ಷ ಜಿ. ಕೆ.ವೆಂಕಟೇಶ ಕೊಡೇರಿ ಮನೆ, ಕಾರ್ಯದರ್ಶಿ ಜಿ. ಆರ್ .ಲಕ್ಷ್ಮಣ ಬಿಲ್ಲವ, ಕೋಶಾಧಿಕಾರಿ ಮಂಜುರಾಜ್ ಗಂಗೊಳ್ಳಿ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ನೆರವು
ಗಂಗೊಳ್ಳಿ(ಫೆ.9) : ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಇತ್ತೀಚೆಗೆ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಗಂಗೊಳ್ಳಿಯ ಹುಣಸೆ ಹಿತ್ತಲುವಿನ ನಿವಾಸಿಯೊಬ್ಬರಿಗೆ ಮತ್ತು ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ವೀರೇಶ್ವರ ದೇವಸ್ಥಾನದ ಬಳಿಯಲ್ಲಿನ ಮಹಿಳೆಯೊಬ್ಬರಿಗೆ ಆರ್ಥಿಕ ನೆರವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಗಂಗೊಳ್ಳಿ ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷರಾದ ಜಿ. ಗೋಪಾಲ ಪೂಜಾರಿ, ಉಪಾಧ್ಯಕ್ಷ ಜಿ. ಕೆ.ವೆಂಕಟೇಶ ಕೊಡೇರಿ ಮನೆ, ಕಾರ್ಯದರ್ಶಿ ಜಿ. ಆರ್ .ಲಕ್ಷ್ಮಣ ಬಿಲ್ಲವ, ಕೋಶಾಧಿಕಾರಿ ಮಂಜುರಾಜ್ ಗಂಗೊಳ್ಳಿ ಉಪಸ್ಥಿತರಿದ್ದರು ವರದಿ : […]
ಸಂವಿಧಾನದ ಅರಿವು ಅಗತ್ಯ : ನರೇಂದ್ರ ಎಸ್ ಗಂಗೊಳ್ಳಿ
ಗಂಗೊಳ್ಳಿ (ಜ.30): ನಮ್ಮ ಸಂವಿಧಾನದ ಉನ್ನತ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕಾದರೆ ಅದನ್ನು ಅಧ್ಯಯನ ಮಾಡುವಂತಹ ಕೌಶಲ್ಯವನ್ನು ನಾವು ಬೆಳೆಸಿಕೊಳ್ಳಬೇಕಿದೆ. ಪೂರ್ವಾಪರಗಳನ್ನು ಅರಿಯದೆ ಎಲ್ಲ ವಿಚಾರಗಳಿಗೂ ಅನಗತ್ಯವಾಗಿ ಸಂವಿಧಾನವನ್ನು ತಳುಕು ಹಾಕುವ ಕೆಟ್ಟ ಪ್ರವೃತ್ತಿ ನಮ್ಮಲ್ಲಿ ಕೊನೆಗಾಣಬೇಕಿದೆ ಎಂದು ಯುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಗುಜ್ಜಾಡಿ ಗೋಪಾಲನಾಯಕ ಇಂಡೋರ್ ಸ್ಟೇಡಿಯಂನಲ್ಲಿ ಗಂಗೊಳ್ಳಿ ರೋಟರಾಕ್ಟ್ ಕ್ಲಬ್ ಮತ್ತು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ […]
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ
ಗಂಗೊಳ್ಳಿ(ಜ.20): ವಿವೇಕಾನಂದರ ಚಿಂತನೆಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಹೊಂದಿರುವಂಥವು. ಅವರ ಜೀವನವನ್ನು ಅಭ್ಯಸಿಸುವುದರ ಜೊತೆಗೆ ಅಂತಹ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರತಿಯೊಬ್ಬರೂ ಪ್ರಯತ್ನಿಸಿದಾಗ ಜೀವನವು ಸಾರ್ಥಕವಾಗಲು ಸಾಧ್ಯ ಎಂದು ಜೆ.ಸಿ ರಾಷ್ಟ್ರೀಯ ತರಬೇತುದಾರರಾದ ಕೆ.ಕೆ ಶಿವರಾಮ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿವಿದ್ಯಾಲಯ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. […]
ನರೇಂದ್ರ ಎಸ್ ಗಂಗೊಳ್ಳಿಗೆ ಸನ್ಮಾನ
ಗಂಗೊಳ್ಳಿ(ಜ.15 ): ಯುವ ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅವರ ಬಹುಮುಖ ಪ್ರತಿಭೆಯನ್ನು ಗುರುತಿಸಿ ತಲ್ಲೂರಿನ ಸಪ್ತಸ್ವರ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ದೇವಾಡಿಗ ಉಪ್ಪಿನಕುದ್ರು ಇವರು ವೈಯಕ್ತಿಕ ನೆಲೆಯಲ್ಲಿ ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಸನ್ಮಾನಿಸಿದರು. ಸನ್ಮಾನಿಸಿ ಮಾತನಾಡಿದ ಅವರು ನಮ್ಮ ನಡುವಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಗೌರವಿಸುವ ಕಾರ್ಯ ನಿರಂತರವಾಗಿ ಆಗಬೇಕಿದೆ. ಆ ಮೂಲಕ ಇಂತಹ ಕಾರ್ಯಗಳು ಮತ್ತಷ್ಟು ಪ್ರತಿಭೆಗಳ ಬೆಳವಣಿಗೆಗೆ […]










