ಗಂಗೊಳ್ಳಿ(ಜ.5):ರೋಟರಿ ಕ್ಲಬ್ ಗಂಗೊಳ್ಳಿ ಮತ್ತು ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ವತಿಯಿಂದ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಾಲಪ್ರತಿಭೆ ಸಂಜಿತ್ ಎಂ ದೇವಾಡಿಗ ಇವರನ್ನು ಗಂಗೊಳ್ಳಿಯ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ರಾಜೇಶ್ ಎಂ. ಜಿ, ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ಅರ್ಚಕರಾದ ರಘುನಾಥ ಪೂಜಾರಿ ಕಳಿಹಿತ್ಲು, ರೋಟರಾಕ್ಟ್ ಕ್ಲಬ್ ಅಧ್ಯಕ್ಷೆ ಅಮೀಕ್ಷಾ ಡಿ ನಾಯ್ಕ್,ಸದಸ್ಯರಾದ ದೀಕ್ಷಾ, ಶ್ರೇಯಾ, ತ್ರಿಷಾ, ಪೂಜಾ, ಸುಷ್ಮಾ, […]
Tag: narendra gangolli
ಪಾರ್ವತಿ ಜಿ ಐತಾಳ್ ಸಾಹಿತ್ಯ ಸಾಧನೆ ತೆರೆದಿಡುವ ‘ಸುರಗಂಗೆ’
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಅದರಲ್ಲೂ ವಿಶೇಷವಾಗಿ ಅನುವಾದ ಕ್ಷೇತ್ರದಲ್ಲಿ ಅಮೂಲ್ಯ ಕೃತಿ ರಚನೆಗಳ ಮೂಲಕ ತಮ್ಮದೇ ಆದ ಛಾಪನ್ನು ಮೂಡಿಸಿರುವ ಕರಾವಳಿಯ ಸೃಜನಶೀಲ ಬಹುಭಾಷಾ ಲೇಖಕಿ ಪಾರ್ವತಿ ಜಿ. ಐತಾಳರು ಕನ್ನಡ ಸಾಹಿತ್ಯ ಲೋಕದ ಅಪರೂಪದ ಪ್ರತಿಭೆ. ಕನ್ನಡ, ಇಂಗ್ಲೀಷ್ ,ಹಿಂದಿ ,ಮಲಯಾಳಂ ಮತ್ತು ತುಳು ಹೀಗೆ ಐದು ಭಾಷೆಗಳಲ್ಲಿ ಪ್ರಭುತ್ವ ಸಾಧಿಸಿ ಆಯಾ ಭಾಷೆಗಳಲ್ಲಿ ಕೃತಿ ರಚನೆ ಮಾಡಿದ್ದು ಮಾತ್ರವಲ್ಲದೆ ಆಯಾ ಭಾಷೆಗಳ ನಡುವೆ ಅನುವಾದದ ಕೆಲಸವನ್ನೂ ಮಾಡುತ್ತ,ವಿವಿಧ […]
ತ್ರಾಸಿ: ಪುಟ್ಟ ಹುಡುಗಿ ಸೋನಿಯಾಳ ವೈದ್ಯಕೀಯ ಚಿಕಿತ್ಸೆಗೆ ಬೇಕಿದೆ ಆರ್ಥಿಕ ನೆರವು
ತ್ರಾಸಿ( ಡಿ.21) : ತ್ರಾಸಿ ಗ್ರಾಮದ ನಿವಾಸಿಯಾಗಿರುವ ಕೋದಂಡರಾಮರವರ ಮಗಳಾದ ಸೋನಿ ಶೆಟ್ಟಿಗಾರ್ (ಹತ್ತು ವರುಷ) ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿದ್ದು , ಮೆದುಳಿನ ಗಡ್ಡೆ (ಬ್ರೈನ್ ಟ್ಯೂಮರ್)ಯ ಖಾಯಿಲೆಗೆ ಒಳಗಾಗಿದ್ದು ಹಲವು ದಾನಿಗಳ ಸಹಕಾರದೊಂದಿಗೆ ಮಣಿಪಾಲ ಕೆ.ಎಮ್.ಸಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿತ್ತು. ಆ ಬಳಿಕ ಸತತವಾಗಿ ಆಕೆಗೆ ಔಷಧೋಪಚಾರ ನಡೆಯುತ್ತಿದೆ. ಇದೀಗ ಆಕೆಯ ದೇಹದಲ್ಲಿ ನರಗಳಿಗೆ ಸಂಬಂದಿಸಿದ ದ ಹಾರ್ಮೊನುಗಳ ಬೆಳವಣಿಗೆಯು ಸೂಕ್ತವಾಗಿ […]
ಕಾಯಿದೆಗಳ ಅರಿವು ಅಗತ್ಯ -ನರೇಂದ್ರ ಎಸ್ ಗಂಗೊಳ್ಳಿ
ಗಂಗೊಳ್ಳಿ(ಡಿ,21): ದೇಶದ ನಾಗರಿಕರಾಗಿ ನಮಗೆ ಲಭ್ಯವಿರುವ ಹಕ್ಕುಗಳ ಅರಿವನ್ನು ಹೊಂದಿರಬೇಕಾದದ್ದು ನಮ್ಮ ಜವಾಬ್ದಾರಿಯಾಗಿದೆ. ಮಾಹಿತಿ ಹಕ್ಕು ಕಾಯಿದೆ ಮತ್ತು ಕೇಂದ್ರ ವಿಚಕ್ಷಣಾ ಆಯೋಗವನ್ನು ಸಮರ್ಥವಾಗಿ ಬಳಸಿಕೊಂಡಲ್ಲಿ, ಖಂಡಿತ ಭ್ರಷ್ಟಚಾರ ನಿರ್ಮೂಲನೆ ಸಾಧ್ಯ ಎಂದು ಯುವ ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಹಮ್ಮಿಕೊಂಡ ಆರ್. ಟಿ. ಐ ಮತ್ತು ಸಿವಿಸಿ ಕುರಿತಾಗಿನ ಅರಿವು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಮಾಹಿತಿ […]
ಗಂಗೊಳ್ಳಿ: ಡಾ. ಬಿ.ಆರ್ ಅಂಬೇಡ್ಕರ್ ರ ವರ ಪರಿನಿರ್ವಾಣ ದಿನಾಚರಣೆ
ಗಂಗೊಳ್ಳಿ(ಡಿ.13) : ಡಾ. ಅಂಬೇಡ್ಕರ್ ಯುವಕ ಮಂಡಲ (ರಿ) ಅಮೃತ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಳಿ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಮೇಲ್ ಗಂಗೊಳ್ಳಿಯ ಅಂಬೇಡ್ಕರ್ ಭವನದಲ್ಲಿ ಬಿ.ಆರ್ ಅಂಬೇಡ್ಕರ್ ರ ವರ 65ನೇ ವರುಷದ ಪರಿನಿರ್ವಾಣ ದಿನಾಚರಣೆ ನಡೆಯಿತು. ಯುವಕ ಮಂಡಲದ ಉಪಾಧ್ಯಕ್ಷ ಕಿರಣ್ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಸಂಸ್ಥೆಯ ಗೌರವ ಅಧ್ಯಕ್ಷರಾದ ಭಾಸ್ಕರ್ ಹೆಚ್. ಜಿ ಮಾತನಾಡಿ ಅಂಬೇಡ್ಕರ್ ಅವರ ಜೀವನ ಶೈಲಿ […]
ಆಶಾ ಕಾರ್ಯಕರ್ತೆ ಕಲ್ಪನಾ ಜಿ. ಯವರಿಗೆ ಸನ್ಮಾನ
ಗಂಗೊಳ್ಳಿ (ಡಿ.6): ಕಳೆದ 12 ವರ್ಷಗಳಿಂದ ಆಶಾ ಕಾರ್ಯಕರ್ತೆಯಾಗಿ ಮತ್ತು ಕೋವಿಡ್ ಸಮಯದಲ್ಲಿ ನಿರಂತರವಾಗಿ ಸೇವಾ ಮನೋಭಾವನೆಯೊಂದಿಗೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿ ಉತ್ತಮವಾದ ನಿರ್ವಹಣೆಯನ್ನು ತೋರಿದ ಗಂಗೊಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಸುಗಮಕಾರರಾದ ಕಲ್ಪನಾ ಜಿ ಆರ್. ಪ್ರಭಾಕರ್ ಅವರನ್ನು ಇತ್ತೀಚೆಗೆ ಕುಂದಾಪುರದಲ್ಲಿ ನಡೆದ ಕಾರ್ಟೂನು ಹಬ್ಬದಲ್ಲಿ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ, ಮನೋವೈದ್ಯ ಡಾ. ಪಿ ವಿ […]
ಭಾವಗೀತೆ ಸ್ಪರ್ಧೆ:ಅಕ್ಷತಾ ವಿನಯ್ ಪ್ರಥಮ ಸ್ಥಾನ
ಗಂಗೊಳ್ಳಿ (ಡಿ,2): ಇತ್ತೀಚೆಗೆ ಬಾಳೆಹೊನ್ನೂರಿನಲ್ಲಿ ನಡೆದ ರೋಟರಿ 3182ನ ಜಿಲ್ಲಾ ರೋಟರಿ ಸಾಂಸ್ಕೃತಿಕ ಸ್ಪರ್ಧೆ 2021-22ರ ಏಕವ್ಯಕ್ತಿ ಭಾವಗೀತೆ ಸ್ಪರ್ಧೆಯಲ್ಲಿ ಗಂಗೊಳ್ಳಿ ರೋಟರಿ ಕ್ಲಬ್ ನ ಸದಸ್ಯೆ ಅಕ್ಷತಾ ವಿನಯ್ ಪ್ರಥಮ ಸ್ಥಾನ ಗಳಿಸಿದ್ದಾರೆ.
ಶ್ರೇಷ್ಠ ಆರ್ ಶೇಟ್ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ(ನ ,30) : ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ನಡೆಸಲ್ಪಡುವ ಶ್ರೀ ಭಗವದ್ಗೀತಾ ಅಭಿಯಾನದ ಅಂಗವಾಗಿ ಇತ್ತೀಚೆಗೆ ಬೈಂದೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿನ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಷ್ಠ ಆರ್ ಶೇಟ್ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಸರಸ್ವತಿ ವಿದ್ಯಾಲಯದಲ್ಲಿ ಸಂವಿಧಾನ ದಿವಸ್ ಆಚರಣೆ
ಗಂಗೊಳ್ಳಿ (ನ,29): ನಮ್ಮ ಭಾರತದ ಸಂವಿಧಾನದ ಬಗೆಗೆ ಅರಿವನ್ನು ಮೂಡಿಸುವಲ್ಲಿ ಪ್ರಾಥಮಿಕ ಹಂತದಿಂದಲೇ ಪಠ್ಯಪುಸ್ತಕಗಳಲ್ಲಿ ಅದರ ಬಗೆಗಿನ ಹೆಚ್ಚಿನ ವಿವರಗಳನ್ನು ನೀಡಬೇಕಿದೆ. ದೇಶದ ಜವಾಬ್ದಾರಿಯುತ ನಾಗರಿಕನಾಗಿ ಸಂವಿಧಾನದ ಅರಿವನ್ನು ಹೊಂದಿರಬೇಕಾದುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಆಂಗ್ಲಭಾಷಾ ಉಪನ್ಯಾಸಕರಾದ ಥಾಮಸ್ ಪಿ. ಎ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ಸಂವಿಧಾನ ದಿವಸದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲೆ ಕವಿತಾ […]
ಗಂಗೊಳ್ಳಿ: ಸವಿ ಪ್ರತಿಭಾ ಶೋಧ ಬಹುಮಾನ ವಿತರಣೆ
ಗಂಗೊಳ್ಳಿ(ನ,24); ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಮತ್ತು ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಆಸುಪಾಸಿನ ಆಯ್ದ ಪ್ರೌಢಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸವಿ ಪ್ರತಿಭಾ ಶೋಧ ಶೈಕ್ಷಣಿಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭವು ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಗಂಗೊಳ್ಳಿಯ ಜಿ.ಎಸ್. ವಿ.ಎಸ್ […]










