ಗಂಗೊಳ್ಳಿ(ನ ,21): ಶೋರಿನ್ ರಿಯೂ ಕರಾಟೆ ಎಂಡ್ ಕೊಬುಡೊ ಅಸೋಸಿಯೇಷನ್ ವತಿಯಿಂದ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಇತ್ತೀಚಿಗೆ ನಡೆದ 18ನೇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆಯ ಕಟಾ ಮತ್ತು ಕುಮಿಟೊ ಭಾಗದಲ್ಲಿ ವಿಜೇತರಾದ ಗಂಗೊಳ್ಳಿಯ ಕೆ.ಡಿ.ಎಫ್ ಕರಾಟೆ ಎಂಡ್ ಫಿಟ್ನೆಸ್ ಅಕಾಡೆಮಿಯ ವಿದ್ಯಾರ್ಥಿಗಳು ಕಟಾ ಮತ್ತು ಕುಮಿಟಿ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ತರಬೇತುದಾರರಾದ ಟಿ ಶಶಾಂಕ್ ಶೆಣೈ ಇವರಿಗೆ ತರಬೇತಿ ನೀಡಿದ್ದರು.ನಿಂತವರು : ಶ್ಯಾಮ್ […]
Tag: narendra gangolli
ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಸಮವಸ್ತ್ರ ವಿತರಣೆ
ಗಂಗೊಳ್ಳಿ(ನ ,20): ಇಲ್ಲಿನ ಸರಸ್ವತಿ ವಿದ್ಯಾಲಯ ಪ್ರೌಢಶಾಲಾ ಕನ್ನಡ ಮಾಧ್ಯಮ ವಿಭಾಗದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಇಲ್ಲಿನ ಅಧ್ಯಾಪಕರ ಆರ್ಥಿಕ ಸಹಾಯದೊಂದಿಗೆ ಪ್ರತಿವರ್ಷದಂತೆ ಈ ಬಾರಿ ಕೂಡ ಉಚಿತವಾಗಿ ಸಮವಸ್ತ್ರಗಳನ್ನು ನೀಡಲಾಯಿತು. ಜಿ. ಎಸ್. ವಿ ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಹೆಚ್. ಗಣೇಶ್ ಕಾಮತ್ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಪ್ರೌಢಶಾಲಾ ಉಪಪ್ರಾಂಶುಪಾಲರಾದ ಉಮೇಶ್ ಕರ್ಣಿಕ್ ಮತ್ತು ಅಧ್ಯಾಪಕರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಶಾಲಾ ಆರಂಭದ ದಿನಗಳಲ್ಲಿ ಇಲ್ಲಿನ […]
ಜಿಲ್ಲಾಮಟ್ಟದ ಸಾಂಸ್ಕೃತಿಕ ಉತ್ಸವ ಕಲಾ ಸಂಗಮ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ರೋಟರಾಕ್ಟ್ ಕ್ಲಬ್ ಚಾಂಪಿಯನ್
ಬ್ರಹ್ಮಾವರ(ನ ,17):ರೋಟರಿ ಕ್ಲಬ್ ಬ್ರಹ್ಮಾವರದ ಆಶ್ರಯದಲ್ಲಿ ಅಲ್ಲಿನ ರೋಟರಾಕ್ಟ್ ಕ್ಲಬ್ ಸಹಯೋಗದೊಂದಿಗೆ ಬ್ರಹ್ಮಾವರದ ರೋಟರಿ ಹಾಲ್ ನಲ್ಲಿ ಕಳೆದ ಶನಿವಾರ ರೋಟರಾಕ್ಟ್ ಕ್ಲಬ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಜಿಲ್ಲಾಮಟ್ಟದ ಸಾಂಸ್ಕೃತಿಕ ಉತ್ಸವ ಕಲಾ ಸಂಗಮದಲ್ಲಿ ಅತ್ಯುತ್ತಮವಾದ ನಿರ್ವಹಣೆಯನ್ನು ನೀಡುವ ಮೂಲಕ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರೋಟರಾಕ್ಟ್ ಕ್ಲಬ್ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಎಂಟು ತಂಡಗಳು ಭಾಗವಹಿಸಿದ್ದ ಈ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸರಸ್ವತಿ ವಿದ್ಯಾಲಯದ ರೋಟರಾಕ್ಟ್ ವಿದ್ಯಾರ್ಥಿಗಳು ನಿರೂಪಣೆಯಲ್ಲಿ ಪ್ರಥಮ […]
ಸಂಜಿತ್ ಎಂ ದೇವಾಡಿಗ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ
ಕಾರ್ಕಳ( ನ ,17): ಕಾರ್ಕಳದ ಅಜೆಕಾರುವಿನ ಶ್ರೀ ರಾಮಮಂದಿರದಲ್ಲಿ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿ , ಉಡುಪಿ ಜಿಲ್ಲಾ ಪತ್ರಕರ್ತರ ವೇದಿಕೆ ಹಾಗೂ ಇತರ ಸಂಸ್ಥೆಗಳ ಸಹಯೋಗದಲ್ಲಿ ನಡೆದ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021ರ ಸಮಾರಂಭದಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಬಾಲ ಕಲಾವಿದ ಸಂಜಿತ್ ಎಂ ದೇವಾಡಿಗ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮವನ್ನು ನೀಡಿದರು. ತವಿಲ್ ನಲ್ಲಿ ಗೋಪಾಲ ದೇವಾಡಿಗ, ಮತ್ತು ಹರ್ಷವರ್ಧನ್ ಖಾರ್ವಿ, ತಾಳದಲ್ಲಿ ಮಾಧವ […]
ಸರಸ್ವತಿ ವಿದ್ಯಾಲಯದಲ್ಲಿ ಕಾನೂನು ಅರಿವು ಕಾರ್ಯಕ್ರಮ
ಗಂಗೊಳ್ಳಿ(ನ,12): ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ನಿರ್ದೇಶನದಂತೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನ್ಯಾಯವಾದಿ ಶರತ್ ಕುಮಾರ್ ಶೆಟ್ಟಿ ಮಾತನಾಡಿ ನಮ್ಮ ದೇಶದಲ್ಲಿ ಚಾಲ್ತಿಯಲ್ಲಿರುವ ಕಾನೂನಿನ ಬಗೆಗಿನ ವಿವಿಧ ವಿಚಾರಗಳ ಪ್ರಾಥಮಿಕ ಅರಿವು ಪ್ರತಿಯೊಬ್ಬ ನಾಗರಿಕನಲ್ಲಿಯೂ ಇರಬೇಕು. ಇಂತಹ ಅರಿವಿನ ಜೊತೆಗೆ ಉತ್ತಮ ವ್ಯಕ್ತಿತ್ವವನ್ನು ಕೂಡ ನಮ್ಮದಾಗಿಸಿಕೊಳ್ಳುವ ಮೂಲಕ ಅಪರಾಧ […]
ಸಂಜಿತ್ ಎಮ್ ದೇವಾಡಿಗನಿಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ ಪ್ರಶಸ್ತಿ
ಗಂಗೊಳ್ಳಿ(ನ,7): ಕಾರ್ಕಳ ತಾಲೂಕು ಅಜೆಕಾರುವಿನ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊಡಮಾಡುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021 ಪ್ರಶಸ್ತಿಗೆ ಕುಂದಾಪುರದ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಾಲಪ್ರತಿಭೆ ಸಂಜಿತ್ ಎಮ್ ದೇವಾಡಿಗ ಇವರು ಆಯ್ಕೆಯಾಗಿರುತ್ತಾರೆ. ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಕಲಿಯುತ್ತಿರುವ ಸಂಜಿತ್ ಎಮ್ ದೇವಾಡಿಗ ಗಂಗೊಳ್ಳಿಯ ಖ್ಯಾತ ಸ್ಯಾಕ್ಸೋಫೋನ್ ವಾದಕ ಮತ್ತು ಚಿತ್ರಕಲಾ ಶಿಕ್ಷಕ […]
ಸರಸ್ವತಿ ವಿದ್ಯಾಲಯದಲ್ಲಿ ಸವಿ ಪ್ರತಿಭಾ ಶೋಧ
ಗಂಗೊಳ್ಳಿ( ಅ,30): ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವನೆಯನ್ನು ಮತ್ತು ಸೃಜನಶೀಲತೆಯನ್ನು ಬೆಳೆಸುವ ಉದ್ದೇಶದಿಂದ ಆಸುಪಾಸಿನ ಆಯ್ದ ಪ್ರೌಢಶಾಲೆಯ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಸವಿ ಪ್ರತಿಭಾ ಶೋಧ ಎನ್ನುವ ಶೈಕ್ಷಣಿಕ ಸ್ಪರ್ಧೆಯನ್ನು ಆಯೋಸಲಾಯಿತು. ಗಂಗೊಳ್ಳಿಯ ಜಿ.ಎಸ್. ವಿ.ಎಸ್ ಅಸೋಸಿಯೇಷನ್ (ರಿ )ಕಾರ್ಯದರ್ಶಿ ಎಚ್ ಗಣೇಶ್ ಕಾಮತ್ […]
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು: ವಿದ್ಯಾರ್ಥಿಗಳಿಗಾಗಿ ಜೀವನ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ
ಗಂಗೊಳ್ಳಿ(ಅ,26):ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕ, ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಜೀವನ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಗುಜ್ಜಾಡಿ ಗೋಪಾಲ ನಾಯಕ ರೋಟರಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಜೀವನ ಎಂಬುದು ಒಂದು ಕ್ರಿಕೆಟ್ ಸ್ಟೇಡಿಯಂ ಇದ್ದ ಹಾಗೆ .ಇಲ್ಲಿ ಬಾಲ್ ಎನ್ನುವ ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಬೇಕು.ವಿವಿಧ ಚಟುವಟಿಕೆಗಳನ್ನು ನಡೆಸುವ ಮೂಲಕ ಜೀವನದಲ್ಲಿ ಮಾತನಾಡುವ ಕಲೆ, ನಾಯಕತ್ವದ ಗುಣ,ಸಕಾರಾತ್ಮಕ […]
ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ರೋಟರಾಕ್ಟ್ ಕ್ಲಬ್ ಉದ್ಘಾಟನೆ
ಗಂಗೊಳ್ಳಿ( ಅ,22): ವ್ಯಕ್ತಿತ್ವದ ಬೆಳವಣಿಗೆ, ನಾಯಕತ್ವ ಗುಣ ಕಲಿಕೆ, ಸಮಾಜದ ಆಗುಹೋಗುಗಳ ಬಗ್ಗೆ ಸ್ಪಂದಿಸುವ ಗುಣ, ಪರಿಸರ ಸಂರಕ್ಷಣೆ ಮುಂತಾದ ಸೃಜನಾತ್ಮಕ ಹವ್ಯಾಸಗಳನ್ನು ವಿದ್ಯಾರ್ಥಿದೆಸೆಯಲ್ಲಿಯೇ ಬೆಳೆಸುವ ಉದ್ದೇಶವನ್ನು ರೋಟರಾಕ್ಟ್ ಕ್ಲಬ್ ಹೊಂದಿದೆ ಎಂದು R I district 3182 ಜಿಲ್ಲಾ ಗವರ್ನರ್ ಎಂ ರಾಮಚಂದ್ರಮೂರ್ತಿ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಆಶ್ರಯದಲ್ಲಿ ಆರಂಭಗೊಂಡ ರೋಟರ್ಯಾಕ್ಟ್ ಕ್ಲಬ್ ನ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ರೋಟರಾಕ್ಟ್ ಕ್ಲಬ್ […]
ಗಂಗೊಳ್ಳಿ ಶಾರದೋತ್ಸವದಲ್ಲಿ ಸಂಜಿತ್ ಸ್ಯಾಕ್ಸೋಫೋನ್ ವಾದನ ಸೇವೆ
ಗಂಗೊಳ್ಳಿ(ಅ,12): ಸೇವಾ ಸಂಘ(ರಿ.) ಗಂಗೊಳ್ಳಿಯ 47 ನೇ ವರುಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಎರಡನೇ ದಿನವಾದ ಮಂಗಳವಾರದಂದು ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಹುಮುಖ ಬಾಲ ಪ್ರತಿಭೆ ಸಂಜಿತ್ ಎಮ್ ದೇವಾಡಿಗ ತಮ್ಮ ತಂಡದೊಂದಿಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ಸಲ್ಲಿಸಿದರು. ಗಣನಾಯಕಾಯ, ನಮ್ಮಮ್ಮ ಶಾರದೆ, ಎಂತ ಅಂದ ಎಂತ ಚೆಂದ, ಶಾರದೆ ದಯೆ ತೋರಿದೆ, ಬ್ರಹ್ಮ ಮುಕುಟೆ, ಭಾಗ್ಯದ ಲಕ್ಷ್ಮಿ ಬಾರಮ್ಮ, ತಂಬೂರಿ ಮೀಟಿದವ ಮೊದಲಾದ ಗೀತೆಗಳನ್ನು ಸಾಕ್ಸೋಫೋನ್ ವಾದನದ ಮೂಲಕ […]










