ಗಂಗೊಳ್ಳಿ ( ಜೂ, 13): ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ, ಯುವ ಸಾಹಿತಿ ಹಾಗೂ ಅಂಕಣಕಾರರೂ ಆಗಿರುವ ಶ್ರೀ ನರೇಂದ್ರ ಎಸ್ ಗಂಗೊಳ್ಳಿ ಅವರ ವಿವಿಧ ಕ್ಷೇತ್ರಗಳಲ್ಲಿನ ಬಹುಮುಖ ಪ್ರತಿಭೆಯನ್ನು ಪರಿಗಣಿಸಿ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಮಂಗಳೂರು ವಿಭಾಗದ ವತಿಯಿಂದ ಶಿಕ್ಷಕ ರತ್ನ ಗೌರವವನ್ನು ನೀಡಿ ಪುರಸ್ಕರಿಸಲಾಗಿದೆ.
Tag: narendra gangolli
ಶ್ರೀ ನರೇಂದ್ರ ಎಸ್. ಗಂಗೊಳ್ಳಿ ಯವರಿಗೆ ಪ್ರತಿಭಾ ಚೂಡಾಮಣಿ ರತ್ನ ಪ್ರಶಸ್ತಿ ಪ್ರಧಾನ
ಬೈಂದೂರು (ಏ, 21): ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೀದರ್ ಹಾಗೂ ಮಂದಾರ ಕಲಾವಿದರ ವೇದಿಕೆ ಬೀದರ್ ವತಿಯಿಂದ ಸಾಹಿತ್ಯ ಮತ್ತು ಇತರ ಕ್ಷೇತ್ರಗಳ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಉಪ್ಪುಂದ- ಕಂಬದ ಕೋಣೆಯ ‘ರೈತಸಿರಿ’ ಸಭಾಭವನ, ಕೆ.ಆರ್.ಎಸ್.ಎಸ್. ಎಸ್. ನಿ.,ನಲ್ಲಿ ಎಪ್ರಿಲ್ 18 ರಂದು ನಡೆಯಿತು. ಈ ಸಂದರ್ಭದಲ್ಲಿ ಯುವ ಲೇಖಕ ಹಾಗೂ ಉಪನ್ಯಾಸಕರಾದ ಶ್ರೀ ನರೇಂದ್ರ ಎಸ್ ಗಂಗೊಳ್ಳಿ ಇವರಿಗೆ ಪ್ರತಿಭಾ […]
ಕಥಾಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ
ಉಡುಪಿ (ಮಾ. 26) ಅಬ್ಬಾಸ್ ಮೇಲಿನಮನಿ ಸ್ಮರಣಾರ್ಥ ಗ್ರಾಮೀಣ ಸಾಹಿತ್ಯ ವೇದಿಕೆ ಬಾಗಲಕೋಟೆ ಹಮ್ಮಿಕೊಂಡಿದ್ದ ಕಥಾ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಯುವ ಬರಹಗಾರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರು ರಚಿಸಿರುವ ‘ಯಾವುದೀ ಪ್ರವಾಹವು..?’ ಕಥೆಗೆ ಮೊದಲ ಸ್ಥಾನ ಬಂದಿದ್ದು ಮೂರು ಸಾವಿರ ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿದೆ.
ನರೇಂದ್ರ ಎಸ್ ಗಂಗೊಳ್ಳಿಗೆ ರಾಜ್ಯಮಟ್ಟದ ಪ್ರಶಸ್ತಿ
ಕುಂದಾಪುರ (ಫೆ – 15): ಬೀದರ್ ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ(ರಿ). ಬೀದರ್ ಮತ್ತು ಮಂದಾರ ಕಲಾವಿದರ ವೇದಿಕೆ ಬೀದರ್ ಜಿಲ್ಲೆ ಇವರು ಕೊಡಮಾಡುವ ರಾಜ್ಯ ಮಟ್ಟದ ಕರ್ನಾಟಕ ಪ್ರತಿಭಾ ಚೂಡಾಮಣಿ ರತ್ನ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಬಹುಮುಖ ಪ್ರತಿಭಾನ್ವಿತ ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಆಯ್ಕೆಯಾಗಿದ್ದಾರೆ. ಈ ವರೆಗೆ ರಾಜ್ಯ ಮಟ್ಟದ ವಿವಿಧ ದಿನಪತ್ರಿಕೆಗಳಲ್ಲಿ ಸುಮಾರು ಒಂದು ಸಾವಿರದ ಐನೂರಕ್ಕೂ ಹೆಚ್ಚಿನ ಲೇಖನಗಳು ಕಥೆ-ಕವನಗಳನ್ನು ಬರೆದಿರುವ, […]










