ಗಂಗೊಳ್ಳಿ(ಮೇ ,22): ವೈಷ್ಣವಿ ಇವೆಂಟ್ಸ್ ಗಂಗೊಳ್ಳಿ, ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ಮತ್ತು ಬಿಲ್ಲವರ ಹಿತ ರಕ್ಷಣಾ ವೇದಿಕೆ ಗಂಗೊಳ್ಳಿಯ ವತಿಯಿಂದ 2025ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಎಸ್ ಗಾಣಿಗ ಅವರನ್ನು ಗಂಗೊಳ್ಳಿಯ ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಆವರಣದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವೈಷ್ಣವಿ ಇವೆಂಟ್ಸ್ […]
Tag: narendra gangolli
ಗಂಗೊಳ್ಳಿ : ಸಮಾಜ ಸೇವಕ ಈಶ್ವರ್ ಮಲ್ಪೆ ಅವರಿಗೆ ಸನ್ಮಾನ
ಗಂಗೊಳ್ಳಿ(ಮೇ, 12) : ಗಂಗೊಳ್ಳಿಯ ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲ ಇದರ 38ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಇವುಗಳ 32ನೇ ವಾರ್ಷಿಕೋತ್ಸವದ ಅಂಗವಾಗಿ ಖ್ಯಾತ ಸಮಾಜ ಸೇವಕ ಈಶ್ವರ್ ಮಲ್ಪೆ ಅವರನ್ನು ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಯುವಕ ಮಂಡಲದ ಗೌರವಾಧ್ಯಕ್ಷರಾದ ಭಾಸ್ಕರ್ ಎಚ್ ಜಿ, ಅಧ್ಯಕ್ಷ […]
ಗಂಗೊಳ್ಳಿ: ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ
ಗಂಗೊಳ್ಳಿ(ಮೇ ,12) : ಹಳೆಯ ಸೋಲುಗಳ ಬಗ್ಗೆ ಚಿಂತಿಸುತ್ತ ಕೂರುವುದರ ಬದಲು ಮುಂದಿನ ಗೆಲುವುಗಳ ಬಗ್ಗೆ ಯೋಜನೆಯನ್ನು ಹಾಕಿಕೊಳ್ಳಬೇಕು. ಛಲ ಬದ್ಧತೆ ಮತ್ತು ಪರಿಶ್ರಮದಿಂದ ಹೊಸ ಚರಿತ್ರೆ ಸೃಷ್ಟಿಸಲು ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ವತಿಯಿಂದ ಮೇಲ್ ಗಂಗೊಳ್ಳಿಯ ಅಂಬೇಡ್ಕರ್ ಭವನದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ […]
ನರೇಂದ್ರ ಎಸ್. ಗಂಗೊಳ್ಳಿಗೆ ಬಹುಮಾನ
ಕುಂದಾಪುರ ( ಮೇ ,09): ನಾನು ಮತ್ತು ನನ್ನ ಗೀಚು ಸಾಹಿತ್ಯ ಬಳಗವು ಹಮ್ಮಿ ಕೊಂಡಿದ್ದ ಯುಗಾದಿ – ವಿಷು ಹಬ್ಬ ವಿಶೇಷ ಗೀಚು ಕಥಾ ಸ್ಪರ್ಧೆ 2025ರಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮತ್ತು ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅವರ ಕಥೆ “ಯಾರು ಒಳ್ಳೆಯವರು?’ ಅತ್ಯುತ್ತಮ ಕಥಾ ಬಹುಮಾನಕ್ಕೆ ಪಾತ್ರವಾಗಿದೆ. ಒಂದು ಸಂಪಾದಿತ ಕೃತಿ ಸೇರಿದಂತೆ ಒಟ್ಟು ಐದು ಪುಸ್ತಕಗಳನ್ನು ಬರೆದಿರುವ ನರೇಂದ್ರ […]
ಅಂಬೇಡ್ಕರ್ ಬದುಕು ಮತ್ತು ಸಾಧನೆ ಎಲ್ಲರಿಗೂ ಪ್ರೇರಣೆ : ನರೇಂದ್ರ ಎಸ್ ಗಂಗೊಳ್ಳಿ
ಗಂಗೊಳ್ಳಿ(ಎ ,14): ಅಂಬೇಡ್ಕರ್ ಅವರ ಬದುಕು ಹೋರಾಟ ಮತ್ತು ಸಾಧನೆ ಜಗತ್ತಿನ ಪ್ರತಿಯೊಬ್ಬರಿಗೂ ಪ್ರೇರಣೆ ನೀಡುವಂತದ್ದು ಈ ನಿಟ್ಟಿನಲ್ಲಿ ಅವರ ಬದುಕನ್ನು ಪ್ರತಿಯೊಬ್ಬರು ಅಧ್ಯಯನ ಮಾಡುವ ಅಗತ್ಯವಿದೆ ಎಂದು ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯ ಪಟ್ಟರು. ಅವರು ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ನೆಹರು ಯುವ ಕೇಂದ್ರ ಉಡುಪಿ, ಡಾ. ಬಿ. ಆರ್ ಅಂಬೇಡ್ಕರ್ ಯುವಕ ಮಂಡಲ, ಅಮೃತ […]
ಗಂಗೊಳ್ಳಿ : ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣೆ
ಗಂಗೊಳ್ಳಿ(ಏ,07): ಇಲ್ಲಿನ ಬೈಲು ಮನೆಯಲ್ಲಿರುವ ಶಿರಸಿ ಶ್ರೀ ಅಮ್ಮನವರ ಮತ್ತು ಸಪರಿವಾರ ದೇವರುಗಳ ಸನ್ನಿಧಿಯಲ್ಲಿ ಇತ್ತೀಚೆಗೆ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣಾ ಕಾರ್ಯಕ್ರಮವು ನೆರವೇರಿತು. ಶ್ರೀ ವೀರೇಶ್ವರ ದೇವಸ್ಥಾನದಿಂದ ಸನ್ನಿಧಾನದವರಿಗೆ ಮೆರವಣಿಗೆಯಲ್ಲಿ ಪೂರ್ಣ ಕುಂಭ ಸ್ವಾಗತದೊಂದಿಗೆ ರಜದ ಕಿರೀಟ ಮತ್ತು ರಜದ ಪ್ರಭಾವಳಿಯನ್ನು ತರಲಾಯಿತು. ಅರ್ಚಕರಾದ ರವೀಶ ಮತ್ತು ಬಳಗ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಸನ್ನಿಧಾನದ ಅರ್ಚಕರಾದ ಆನಂದ ಬಿಲ್ಲವ ಅವರು […]
ಗಂಗೊಳ್ಳಿ: ಬೈಲುಮನೆ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣೆ
ಗಂಗೊಳ್ಳಿ(ಮಾ .25): ಬೈಲುಮನೆಯಲ್ಲಿರುವ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣೆಯ ಕಾರ್ಯಕ್ರಮವು ಮಾರ್ಚ್ 30 ರಂದು ನಡೆಯಲಿದೆ. ಆ ಪ್ರಯುಕ್ತ ಬೆಳಗ್ಗೆ ಗಂಟೆ ಒಂಬತ್ತರಿಂದ ಸಾಮೂಹಿಕ ಪ್ರಾರ್ಥನೆ,ಶ್ರೀ ಗುರು ಗಣಪತಿ ಪೂಜೆ, ಪುಣ್ಯಾಹವಾಚನ, ಕಲಾಭಿವೃದ್ಧಿ ಹೋಮ, ತತ್ವ ಹೋಮ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳ ಜೊತೆ ಅನ್ನಸಂತರ್ಪಣೆ ಕೂಡ ನಡೆಯಲಿರುವುದು. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.
ಸಣ್ಣ ಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು : ನರೇಂದ್ರ ಎಸ್ ಗಂಗೊಳ್ಳಿ
ವಕ್ವಾಡಿ(ಮಾ,15): ನಾವು ಸಣ್ಣ ಪುಟ್ಟ ಯಶಸ್ಸುಗಳನ್ನೇ ಸಾಧನೆ ಎಂದುಕೊಳ್ಳಬಾರದು. ಭೂತಕಾಲದಲ್ಲಿ ಏನು ಮಾಡಿದೆ ಎನ್ನುವುದಕ್ಕಿಂತ ವರ್ತಮಾನದಲ್ಲಿ ಮತ್ತು ಭವಿಷ್ಯದಲ್ಲಿ ಏನು ಮಾಡುತ್ತಿರುವೆ ಮತ್ತು ಮಾಡ ಹೊರಟಿದ್ದೇವೆ ಎನ್ನುವುದು ಮುಖ್ಯ ಎಂದು ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ವಕ್ವಾಡಿಯ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಅಭಿಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ನಮ್ಮ ಸಾಮರ್ಥ್ಯಗಳ ಜೊತೆ ನಾವೇ ಸ್ಪರ್ಧಿಸುತ್ತ ಸತತವಾಗಿ ನಮ್ಮ ಕೌಶಲ್ಯವನ್ನು ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸಿಕೊಳ್ಳುವುದು ಈ ಸ್ಪರ್ಧಾತ್ಮಕ […]
ಗಂಗೊಳ್ಳಿ: ಯುವ ಪ್ರತಿಭೆ ಮಾಸ್ಟರ್ ಶ್ಯಾಮ್ ಇದೀಗ “ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್” ನ ಸಾಧಕ
ಕುಂದಾಪುರ(ಫೆ,27): ಕೊಳಲು ನುಡಿಸುವುದರ ಮೂಲಕ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆದು ಅದ್ವಿತೀಯ ಸಾಧನೆಗೈದ ಗಂಗೊಳ್ಳಿಯ ಮಾಸ್ಟರ್ ಶ್ಯಾಮ್ ತನ್ನ 14 ನೆ ವಯಸ್ಸಿನಲ್ಲಿಯೇ ವಿಭಿನ್ನ ರಾಗಗಳನ್ನು ಕೊಳಲಿನಲ್ಲಿ ಒಂದು ನಿಮಿಷದಲ್ಲಿ ನುಡಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ನಿರ್ಮಿಸಿದ್ದಾನೆ. 2024ನೇ ಸಾಲಿನ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರ ಸ್ವೀಕರಿಸಿ ಈಗ ಇಂಡಿಯನ್ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡಿರುವ ಈತ ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು […]
ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ: 80 ನೇ ಶಿವರಾತ್ರಿ ಮಹೋತ್ಸವ ಹಾಗೂ ಕುಣಿತ ಭಜನಾ ಸ್ಪರ್ಧೆ
ಗಂಗೊಳ್ಳಿ ( ಫೆ .216): ಇಲ್ಲಿನ ಶ್ರೀ ಇಂದುಧರ ದೇವಸ್ಥಾನ ಇದರ 80ನೇ ಮಹಾಶಿವರಾತ್ರಿ ಮಹೋತ್ಸವದ ಪ್ರಯುಕ್ತ ಫೆಬ್ರವರಿ 25ರಂದು ಸಂಜೆ, 7:00ರಿಂದ ಅಂತರ್ ಜಿಲ್ಲಾ ಮಟ್ಟದ ಕುಣಿತ ಸ್ಪರ್ಧೆಯನ್ನು ಆಯೋಜಿಸಲಾಯಿತು. ಧಾರ್ಮಿಕ ಮುಖಂಡರಾದ ಬಿ. ಸದಾನಂದ ಶೆಣೈಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಗಂಗೊಳ್ಳಿ ಪರ್ಶಿನ್ ಬೋಟ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಶ್ರೀ ಲಕ್ಷ್ಮಿನಾರಾಯಣ ಮಡಿವಾಳರವರು ಕುಣಿತ ಭಜನೆ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ […]










