ನಾಯಕವಾಡಿ (ಜ,22) : ಸಂಸ್ಕಾರ ಭರಿತ ಸೃಜನಶೀಲ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮಾಜಕ್ಕೆ ಉತ್ತಮವಾದ ಸಂದೇಶವನ್ನು ನೀಡಲು ಖಂಡಿತ ಸಾಧ್ಯವಿದೆ . ಅದಕ್ಕೆ ತಕ್ಕ ಇಚ್ಚಾ ಶಕ್ತಿಯನ್ನು ನಾವು ಅಳವಡಿಸಿಕೊಳ್ಳಬೇಕು ಎಂದು ಸಕಲೇಶಪುರದ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಅವರು ಅಭಿಪ್ರಾಯಪಟ್ಟರು. ಅವರು ನಾಯಕವಾಡಿ ಗುಜ್ಜಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಬೈಂದೂರು ವಿಧಾನಸಭಾ ಕ್ಷೇತ್ರದ […]
Tag: narendra gangolli
ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿ: ಗಾನ ಸಂಭ್ರಮ
ಗಂಗೊಳ್ಳಿ (ಜ,20): ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ನಾಯಕವಾಡಿ ಗುಜ್ಜಾಡಿಯ ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಅಂತರ್ ಜಿಲ್ಲಾ ಮಟ್ಟದ ಕರೋಕೆ ಟ್ರ್ಯಾಕ್ ಗೀತ ಗಾಯನ ಸ್ಪರ್ಧೆ ಗಾನ ಸಂಭ್ರಮ 2025 ರ ಫೈನಲ್ ಸ್ಪರ್ಧೆ ಇತ್ತೀಚೆಗೆ ಸುವರ್ಣ ಸಂಗಮ ವೇದಿಕೆಯಲ್ಲಿ ನಡೆಯಿತು. ಸರಿಗಮಪ ಖ್ಯಾತಿಯ ಗಾಯಕರಾದ ಕಂಬದ ರಂಗಯ್ಯ, ಮತ್ತು ಪ್ರಥ್ವಿ ಭಟ್ ಹಾಗು ಸ್ಟಾರ್ ಸಿಂಗರ್ ಖ್ಯಾತಿಯ ವಿನುಷ್ ಭಾರದ್ವಾಜ್ ತೀರ್ಪುಗಾರರಾಗಿ ಭಾಗವಹಿಸಿದ್ದರು. ಸರಿಗಮಪ ಖ್ಯಾತಿಯ ಗಾಯಕರಾದ […]
ಗಂಗೊಳ್ಳಿ : ಅಜಿತ್ ಕುಮಾರ ಅವರ ಪುಣ್ಯತಿಥಿ -‘ಸೇವಾ ದಿನಾಚರಣೆ’
ಗಂಗೊಳ್ಳಿ(ಜ.21): ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರೀತಿ, ಶಿಸ್ತು ಇರಬೇಕು. ರಾಮಾಯಣ, ಮಹಾಭಾರತ ಹಾಗೂ ಪುರಾಣ ಮತ್ತು ಗ್ರಂಥಗಳಲ್ಲಿ ಅಡಕವಾಗಿ ಅನೇಕ ವಿಷಯಗಳು ಇಂದಿನ ಮಕ್ಕಳಿಗೆ ತಿಳಿದಿಲ್ಲ. ಪಠ್ಯ ಪುಸ್ತಕದಲ್ಲಿ ಇರುವ ವಿಷಯಗಳನ್ನು ಮಾತ್ರ ಮಕ್ಕಳಿಗೆ ಹೇಳಲಾಗುತ್ತಿದೆ. ಇದರಿಂದ ನಮ್ಮ ಇತಿಹಾಸ ನಮ್ಮ ಮಕ್ಕಳಿಗೆ ತಿಳಿಯುತ್ತಿಲ್ಲ. ಹೀಗಾಗಿ ಪುರಾಣಗಳನ್ನು, ಧಾರ್ಮಿಕ ಗ್ರಂಥಗಳನ್ನು ಪಠಣ ಮಾಡಬೇಕು. ಮುಂದಿನ ಪೀಳಿಗೆಗೆ ದಾರಿದೀಪವಾಗಬೇಕು ಎಂದು ಮಹಾಬಲೇಶ್ವರ ಐತಾಳ್ ಉಪ್ಪುಂದ ಹೇಳಿದರು. ಸೇವಾ ಸಂಗಮ ನಿವೇದಿತಾ […]
ವಿಚಾರಗಳನ್ನು ಅರ್ಥೈಸಿಕೊಂಡು ಪ್ರಸ್ತುತಪಡಿಸಿ : ರವಿಕಿರಣ್ ಮುರುಡೇಶ್ವರ
ನಾಯಕವಾಡಿ(ಜ.15) : ಸಾಹಿತ್ಯ ಅಥವಾ ಇನ್ಯಾವುದೇ ವಿಚಾರಗಳಿರಲಿ ಅದನ್ನು ಸರಿಯಾಗಿ ಅರ್ಥ ಮಾಡಿಕೊಂಡು ಪ್ರಸ್ತುತ ಪಡಿಸಿದಾಗಲೇ ಅದು ಸೌಂಧರ್ಯವನ್ನು ಕಂಡುಕೊಳ್ಳುತ್ತದೆ. ನಿರಂತರ ಅಭ್ಯಾಸ ನಮ್ಮನ್ನು ಪರಿಪೂರ್ಣವಾಗಿಸುತ್ತದೆ ಎಂದು ನ್ಯಾಯವಾದಿ ರವಿಕಿರಣ್ ಮುರುಡೇಶ್ವರ ಅವರು ಅಭಿಪ್ರಾಯಪಟ್ಟರು. ಅವರು ಗುಜ್ಜಾಡಿ ನಾಯಕವಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಸಂಗಮದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿ ಮಾತನಾಡಿದರು. ಬೋಳಂಬಳ್ಳಿ ಶ್ರೀ ಪದ್ಮಾವತಿ ದೇವಸ್ಥಾನದ ಧರ್ಮದರ್ಶಿಗಳಾದ ಧರ್ಮರಾಜ್ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. […]
ರಾಷ್ಟ್ರಮಟ್ಟದ ಅಬಾಕಸ್ ನಲ್ಲಿ ವೃಷಭ ಶೆಣೈ ಪ್ರಥಮ ಸ್ಥಾನ
ಕುಂದಾಪುರ (ಜ .15): ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ ಕಾಂಪಿಟೇಶನ್ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿ ವೃಷಭ ಶೆಣೈ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಇವರು ಗಂಗೊಳ್ಳಿಯ ಉದ್ಯಮಿ ವಿಠ್ಠಲ್ ಶೆಣೈ ಮತ್ತು ವೈಷ್ಣವಿ ಶೆಣೈ ದಂಪತಿ ಪುತ್ರ
ಕುಮಾರವ್ಯಾಸ ಸ್ಮೃತಿ- ಗಂಗೊಳ್ಳಿಯಲ್ಲಿ ಗಮಕ ಪ್ರಾತ್ಯಕ್ಷಿಕೆ
ಗಂಗೊಳ್ಳಿ (ಜ,11): “ಕನ್ನಡ ನಾಡು ಕಂಡ ಅತ್ಯದ್ಭುತ ಕವಿ ಕುಮಾರವ್ಯಾಸ. ಕನ್ನಡ ನೆಲದ ಮನೆ ಮನಗಳಲ್ಲಿ ಭಾರತ ಕತೆಯನ್ನು ನೆಲೆಯಾಗುವಂತೆ, ಆಪ್ತವಾಗುವಂತೆ ಮಾಡಿದ ಧೀಮಂತ ಕವಿ. ಮಹಾ ಭಾರತ ಕಥಾ ವಸ್ತುವನ್ನು ಭಾಮಿನಿ ಷಟ್ಪದಿಯಲ್ಲಿ ರಚಿಸಿ, ಅದನ್ನು ಕೃಷ್ಣ ಕತೆಯೆಂದು ಸಾರಿದವನು. ಕುವೆಂಪು ಅವರು ಹೇಳುವಂತೆ ಕಲಿಯುಗದಲ್ಲೂ ದ್ವಾಪರವನ್ನು ಕಟ್ಟಿಕೊಟ್ಟವನು. ವ್ಯಾಸ ರಚಿತ ಭಾರತದ ಮುಂದೆ ತಾನು ಕುಮಾರವ್ಯಾಸನೆಂದು ಹೇಳಿಕೊಳ್ಳುವಲ್ಲಿ ನಾರಣಪ್ಪನ ವಿನಯ ಸಂಪನ್ನತೆ ಎದ್ದು ಕಾಣುತ್ತದೆ. ನಾಡಿನ ಮೂಲೆ […]
ಜಿಲ್ಲಾ ಮಟ್ಟದ ಚಿತ್ರಕಲೆ ಸ್ಪರ್ಧೆ : ಸಂಜಿತ್ ಎಂ ದೇವಾಡಿಗ ದ್ವಿತೀಯ ಸ್ಥಾನ
ಕುಂದಾಪುರ(ಜ.08): ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೈದೆ ಬೆಟ್ಟು ಕೊಕ್ಕರ್ಣೆ, ದುರ್ಗಾ ಆಂಗ್ಲ ಮಾಧ್ಯಮ ಶಾಲೆ ಕೊಕ್ಕರ್ಣೆ ಇಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲೆಯಲ್ಲಿ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ದ್ವಿತೀಯ ಸ್ಥಾನ ಪಡೆದಿರುತ್ತಾನೆ. ಈತ ಚಿತ್ರಕಲಾ ಶಿಕ್ಷಕ, ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಹಾಗೂ ಗಣಿತ ಉಪನ್ಯಾಸಕಿ ಸಾವಿತ್ರಿ ಎಸ್ […]
ಸರಕಾರಿ ಪಿ. ಯು ಕಾಲೇಜು ನಾವುಂದ : ಸಾವಿತ್ರಿ ಬಾ ಪುಲೆ ಜನ್ಮ ದಿನಾಚರಣೆ
ನಾವುಂದ(ಜ,9): ಸರಕಾರಿ ಪದವಿಪೂರ್ವ ಕಾಲೇಜು ನಾವುಂದ ಇಲ್ಲಿನ ರೇಂಜರ್ಸ್ ಮತ್ತು ರೋವರ್ಸ್ ಘಟಕದ ವತಿಯಿಂದ ಭಾರತದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿ ಬಾ ಪುಲೆ ಇವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಂ, ಉಪನ್ಯಾಸಕರಾದ ಶ್ರೀ ಲಕ್ಷ್ಮಿ ಕೆ.ಎಸ್., ಸುಶೀಲಾ, ಸುಮತಿ ಉಡುಪ, ರೇಂಜರ್ ಲೀಡರ್ ಸಾವಿತ್ರಿ ಎಸ್ ಇವರು ಉಪಸ್ಥಿತರಿದ್ದರು.
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ
ಗಂಗೊಳ್ಳಿ(ಡಿ.31): ಮಾನವೀಯತೆಗಿಂತ ಮಿಗಿಲಾದ ಧರ್ಮ ಯಾವುದೂ ಇಲ್ಲ. ನಾವು ಬೆಳೆದು ಉಳಿದವರನ್ನು ಕೂಡ ಬೆಳೆಸುತ್ತಾ ಸಾಗುವಲ್ಲಿ ಜೀವನದ ನಿಜವಾದ ಸಾರ್ಥಕತೆ ಅಡಗಿದೆ ಎಂದು ಉದ್ಯಮಿ ಮೌಲಾನ ಇಬ್ರಾಹಿಂ ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿ.ಎಸ್.ವಿ.ಎಸ್ ಅಸೋಸಿಯೇಷನ್ ವತಿಯಿಂದ ನಡೆದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿ ಸ್ಥಾನದಿಂದ ಮಾತನಾಡಿದರು. ಬದುಕಿನಲ್ಲಿ ಏರಿಳಿತಗಳು ಸಾಮಾನ್ಯ.. ಆದರೆ ಯಾವುದೇ ಪರಿಸ್ಥಿತಿಯಲ್ಲಿಯೂ ಧೃತಿ ಗೆಡದೆ ನಮ್ಮ […]
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಎಸ್. ವಿ. ಪಿ. ಎಲ್ ಕ್ರಿಕೆಟ್ ಪಂದ್ಯಾಟ
ಗಂಗೊಳ್ಳಿ (ಡಿ .19) : ಗ್ರಾಮೀಣ ಮಟ್ಟದಲ್ಲಿ ಹಮ್ಮಿಕೊಳ್ಳುವ ಪಂದ್ಯಾಟಗಳು ವಿದ್ಯಾರ್ಥಿಗಳನ್ನು ಉನ್ನತ ಸಾಧನೆಗಳನ್ನು ಮಾಡುವಲ್ಲಿ ಬಹಳ ದೊಡ್ಡ ಪ್ರೇರಣೆಯನ್ನು ನೀಡುತ್ತವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಗಂಗೊಳ್ಳಿಯ ಉದ್ಯಮಿ ವಿಠಲ ಶೆಣೈ ಅವರು ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆದ ಎಸ್ ವಿ ಪಿ ಎಲ್ ಕ್ರಿಕೆಟ್ ಟೂರ್ನಿಯ ಉದ್ಘಾಟನ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ […]










