ಕುಂದಾಪುರ ( ಆ,05): ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಉದ್ಘಾಟಕರಾಗಿ ಆಗಮಿಸಿದ ಉಡುಪಿ ಜಿಲ್ಲಾ ಎನ್ಎಸ್ಎಸ್ ಘಟಕದ ನೋಡಲ್ ಆಫೀಸರ್ ಡಾ. ಜಯಶಂಕರ ಕಂಗನಾರು ಮಾತನಾಡಿ ನಿಸ್ವಾರ್ಥ ಬದುಕು ಪ್ರತಿಯೊಬ್ಬರ ವ್ಯಕ್ತಿತ್ವಕ್ಕೂ ಮೆರುಗನ್ನು ನೀಡಿ ಹೆಚ್ಚಿನ ಸಂತೋಷವನ್ನು ನೀಡುತ್ತದೆ. ಹಾಗಾಗಿ ನಿಸ್ವಾರ್ಥಿಗಳಾಗಿ ಬದುಕಲು ಕಲಿಯಬೇಕು ಎಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಕಳೆದ […]
Tag: narendra gangolli
ಹಿಂದಿ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ನಾರಾಯಣ ಈ ನಾಯ್ಕ್ ಆಯ್ಕೆ
ಉಡುಪಿ ( ಆ,26): ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಹಿಂದಿ ಉಪನ್ಯಾಸಕರ ಸಂಘದ 2024 -25 ನೇ ಶೈಕ್ಷಣಿಕ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ .ಇ . ನಾಯ್ಕ್ ಆಯ್ಕೆ ಆಗಿರುತ್ತಾರೆ. ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಭೋದಕ ಮತ್ತು ಬೋಧಕೇತರ ವರ್ಗ ಅವರನ್ನು ಅಭಿನಂದಿಸಿದೆ.
ಗಂಗೊಳ್ಳಿ : ಟೇಬಲ್ ಟೆನ್ನಿಸ್ ಆರ್ಯನ್ ವಿ ಕೆ ರಾಜ್ಯಮಟ್ಟಕ್ಕೆ ಆಯ್ಕೆ
ಉಡುಪಿ (ಆ,17): ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪೇರ್ವಾಜೆ ಕಾರ್ಕಳದಲ್ಲಿ ಇತ್ತೀಚೆಗೆ ನಡೆದ ಅಂಡರ್ 14 ವಯೋಮಾನದ ಪ್ರಾಥಮಿಕ ಶಾಲಾ ಬಾಲಕರ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರ್ಯನ್ ವಿ ಕೆ ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಬೀದರ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಉಪನ್ಯಾಸಕಿ ಸುಗುಣ ಆರ್ ಕೆ ಮತ್ತು ಪಶು […]
ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ: ರೋವರ್ಸ್ & ರೇಂಜರ್ಸ್ ಘಟಕ ಉದ್ಘಾಟನೆ
ನಾವುಂದ (ಆ,19): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 15 ರಂದು ರೇಂಜರ್ಸ್ ರೋವರ್ಸ್ ಘಟಕವನ್ನು ಸ್ಕೌಟ್ ಗೈಡ್ಸ್ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿಯಾಗಿರುವ ಆನಂದ್ ಅಡಿಗ ಉದ್ಘಾಟಿಸಿದರು. ಸ್ಕೌಟ್ ಗೈಡ್ಸ್ ಬೈಂದೂರು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ನರಸಿಂಹ ದೇವಾಡಿಗ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರಾದ ಪ್ರವೀಣ್ ಪೂಜಾರಿ ಇವರು ಮುಖ್ಯ ಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಎಂ ಮತ್ತು ಉಪ ಪ್ರಾಂಶುಪಾಲೆ ಶಶಿಕಲಾ […]
ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ:ಅಗ್ರಸ್ಥಾನಿಗೆ ನಗದು ಬಹುಮಾನ
ನಾವುಂದ(ಆ,13): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಕ್ಷಮಿತಾ ಜಿ ದೇವಾಡಿಗ ಅವರಿಗೆ 1995 -96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಪರವಾಗಿ ಮಣಿಪಾಲದ ನವಿತಾಸ್ ಲೈಫ್ ಸೈನ್ಸ್ ನಲ್ಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಹಳೆ ವಿದ್ಯಾರ್ಥಿ […]
ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ
ಗಂಗೊಳ್ಳಿ (ಜು,27): ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲಿಕೆಯ ಜೊತೆ ಜೊತೆಗೆ ಮಕ್ಕಳನ್ನು ಸಂಸ್ಕಾರದ ಮೌಲ್ಯಗಳೊಂದಿಗೆ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೆತ್ತವರು ಮತ್ತು ಶಿಕ್ಷಕರ ಜವಾಬ್ದಾರಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ .ಕೆ. ಉಮೇಶ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಮೂರನೇ ವಾರ್ಷಿಕ […]
ಗಂಗೊಳ್ಳಿ: ಹೆಬ್ಬಾಗಿಲು ಮನೆ ಕಾವೇರಿ ದೇವಾಡಿಗ ನಿಧನ
ಗಂಗೊಳ್ಳಿ(ಜು,19): ಇಲ್ಲಿನ ಹೆಬ್ಬಾಗಿಲು ಮನೆ, ಕಾಯ ದೇವಾಡಿಗ ಯಾನೆ ಕಾವೇರಿ ದೇವಾಡಿಗ ಅಲ್ಪ ಕಾಲದ ಅಸೌಖ್ಯದ ಬಳಿಕ ಜುಲೈ 18 ರ ರಾತ್ರಿ ಸ್ವ ಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಮೃತರು ಮೂರು ಪುತ್ರರು ಹಾಗೂ ಮೂರು ಪುತ್ರಿಯರನ್ನು ಅಗಲಿದ್ದಾರೆ.
ಜಿ.ಎಸ್.ವಿ.ಎಸ್ ಅಸೋಷಿಯೇಷನ್ ಗಂಗೊಳ್ಳಿ: ಶೈಕ್ಷಣಿಕ ಸಾಧಕರ ಅಭಿನಂದನಾ ಸಮಾರಂಭ
ಗಂಗೊಳ್ಳಿ(ಜು,16): ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೇಷನ್ ವತಿಯಿಂದ ಕಳೆದ 2023-24ರ ಶೈಕ್ಷಣಿಕ ವರುಷದಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 85ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಮತ್ತು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳು ಮತ್ತು ಭೋಧಕರನ್ನು ಗೌರವಿಸುವ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿ ಸ್ಥಾನದಿಂದ ಸುಮುಖ ಗ್ರೂಪ್ ಆಫ್ […]
ಜುಲೈ 14 ರಂದು ಗಂಗೊಳ್ಳಿಯಲ್ಲಿ ‘ಮೃಡ’ ನಾಟಕ ಪ್ರದರ್ಶನ
ಗಂಗೊಳ್ಳಿ(ಜು,13) : ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಮೂರನೇ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದ ಅಂಗವಾಗಿ ಜುಲೈ 14 ಭಾನುವಾರ ಸಂಜೆ 4:00 ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ‘ಮೃಡ’ ನಾಟಕ ಪ್ರದರ್ಶನ ನಡೆಯಲಿದೆ. ಶಿವನ ನೈಜ ದರ್ಶನವನ್ನು ಅಪೇಕ್ಷಿಸಿ ಹೊರಡುವ ಭಕ್ತನೊಬ್ಬನಿಗೆ ಜೀವನದ ಸತ್ಯ ದರ್ಶನವಾಗುವ ಕಥೆಯನ್ನು ನಾಟಕ ಹೊಂದಿದ್ದು , […]
ಜು.14 ರಂದು ಬಿಲ್ಲವರ ಹಿತ ರಕ್ಷಣಾ ವೇದಿಕೆಯ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಗಂಗೊಳ್ಳಿ(ಜು,06) : ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಇದರ ಮೂರನೇ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಮತ್ತು ದಿ.ಜಿ.ಕೆ ರಾಮದಾಸ ಕೊಡೇರಿ ಮನೆ ಇವರ ಸ್ಮರಣಾರ್ಥ ಶ್ರೀಮತಿ ರಾಧಾ ರಾಮದಾಸ ಪೂಜಾರಿ ಮತ್ತು ಮಕ್ಕಳ ಪ್ರಾಯೋಜಕತ್ವದಲ್ಲಿ ನೀಡುತ್ತಿರುವ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ಜುಲೈ 14 ಭಾನುವಾರದಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಜರಗಲಿರುವುದು. ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಜಿ.ಗೋಪಾಲ […]










