ಕುಂದಾಪುರ (ಜೂ, 06): ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಆರೋಗ್ಯ ಭಾಗ್ಯ ಯೋಜನೆಯಡಿ ವಿವಿಧ ಫಲಾನುಭವಿಗಳಿಗೆ ಆರ್ಥಿಕ ನೆರವು ವಿತರಣಾ ಕಾರ್ಯಕ್ರಮ ಜೂನ್ 6 ರಂದು ಸಂಘದ ಆಡಳಿತ ಕಛೇರಿ ಆರ್ ಎನ್ ಶೆಟ್ಟಿ ಯಲ್ಲಿ ನಡೆಯಿತು. ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಿ ಮಾತನಾಡಿದ ಸಂಘದ ದಶಮ ಸಂಭ್ರಮದ ಪೋಷಕರು, ಕುಂದಾಪುರದ ಉದ್ಯಮಿಗಳು ಆದ ಶ್ರೀ ಸಟ್ವಾಡಿ ವಿಜಯ ಶೆಟ್ಟಿ ಯುವ ಬಂಟರ ಸಂಘ ಆರೋಗ್ಯ ಭಾಗ್ಯ […]
Tag: nithyananada ampar
ಕನ್ನಡ ನಾಟ್ಯ ರಂಗ (ರಿ.) ಹೈದರಾಬಾದ್ ವತಿಯಿಂದ ಡಾ.ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ಸನ್ಮಾನ
ಕುಂದಾಪುರ(ಮಾ,15): ಕನ್ನಡ ನಾಟ್ಯ ರಂಗ (ರಿ.) ಹೈದರಾಬಾದ್ ಇದರ ವತಿಯಿಂದ ಮಾರ್ಚ್ 9ರಂದು ಹೈದರಾಬಾದ್ ನ ಸುಂದರಯ್ಯ ಕಲಾಭವನದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಯುವ ಸಂಘಟಕ ಕುಂದಾಪುರ ತಾಲೂಕು ಯುವ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಯವರನ್ನು ಕನ್ನಡ ನಾಟ್ಯ ರಂಗ(ರಿ.) ಇದರ ಅಧ್ಯಕ್ಷರಾದ ಶ್ರೀ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಸನ್ಮಾನಿಸಿ ಗೌರವಿಸಿದರು. ವೇದಿಕೆಯಲ್ಲಿ ಹೈದರಾಬಾದ್ ಬಂಟರ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ […]
ಔದ್ಯಮಿಕ ಕ್ಷೇತ್ರದ ಸಾಧಕ ಶ್ರೀ ಎಸ್.ಎಸ್. ಹೆಗ್ಡೆಯವರಿಗೆ ಸನ್ಮಾನ
ಕುಂದಾಪುರ (ಫೆ.24) : ಬೆಂಗಳೂರಿನ ಪ್ರತಿಷ್ಟಿತ ಸೌತ್ ಫೀಲ್ಡ್ ಕೋಟಿಂಗ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತನ್ನ ಅತ್ಯುತ್ತಮ ಔದ್ಯಮಿಕ ನಿರ್ವಹಣೆಗಾಗಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿಗೆ ಭಾಜನರಾದ ನೆಲೆಯಲ್ಲಿ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕ ಸರ್ಕಾರದ ಗೌರವಾನ್ವಿತ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕರಿಸಿ ತವರೂರು ಕುಂದಾಪುರಕ್ಕೆ ಆಗಮಿಸಿದ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಮಹಾ ನಿರ್ದೇಶಕರು ಬಂಟ ಸಮುದಾಯದ ಮಹಾ ದಾನಿಗಳು ಆದ ಶ್ರೀ ಎಸ್.ಎಸ್. ಹೆಗ್ಡೆಯವರನ್ನು […]
ಯುವ ಬಂಟರ ಸಂಘ :ಸ್ವಾವಲಂಬಿ ಬದುಕು ಕಟ್ಟಿಕೊಂಡ ಹಿರಿಯ ಮಹಿಳಾ ಸಾಧಕಿಗೆ ಸನ್ಮಾನ
ಕುಂದಾಪುರ(ಫೆ,13): ಇಲ್ಲಿನ ಯುವ ಬಂಟರ ಸಂಘದ ಆಶ್ರಯದಲ್ಲಿ ಭಾರತದ ಪ್ರಥಮ ಮಹಿಳಾ ರಾಜ್ಯಪಾಲೆ, ಶ್ರೇಷ್ಠ ಕವಯತ್ರಿ, ಭಾರತದ ಕೋಗಿಲೆ ಸರೋಜಿನಿ ನಾಯ್ಡು ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಸ್ವಾವಲಂಬಿ ಬದುಕು ಕಟ್ಟಿಕೊಂಡ ಉಪ್ಪಿನಕಾಯಿ ಅಜ್ಜಿ ಎಂದೇ ಖ್ಯಾತರಾದ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಐರಬೈಲು ನಿವಾಸಿ ಶ್ರೀಮತಿ ಗುಲಾಬಿ ಶೆಟ್ಟಿ ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ […]
ಕುಂದಾಪುರ ಯುವ ಬಂಟರ ಸಂಘದಿಂದ ಕೊಡುಗೆ
ಕುಂದಾಪುರ (ಫೆ, 05):ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಉಡುಪಿಯ ಕೊಳಲಗಿರಿಯ ಸಮೀಪ ಇರುವ ಹೋಂ ಡಾಕ್ಟರ್ ಫೌಂಡೇಶನ್ ನ ಆಡಳಿತಕ್ಕೂಳಪಟ್ಟ ಸ್ವರ್ಗ ಅಸಹಾಯಕರ ಅರಮನೆ ಅನಾಥಾಶ್ರಮಕ್ಕೆ 35000 ರೂಪಾಯಿ ಮೌಲ್ಯದ ಶುದ್ಧ ಕುಡಿಯುವ ನೀರಿನ ವಾಟರ್ ಫಿಲ್ಟರ್ ಹಾಗೂ ಆಶ್ರಮಕ್ಕೆ ಬೇಕಾದ 10000 ರೂಪಾಯಿ ಮೌಲ್ಯದ ದಿನಚರಿ ವಸ್ತುಗಳನ್ನು ಕೊಡುಗೆಯಾಗಿ ನೀಡಿದರು. ಸಂಘದ ಗೌರವಾಧ್ಯಕ್ಷರಾದ ಶ್ರೀಮತಿ ವತ್ಸಲಾ ದಯಾನಂದ ಶೆಟ್ಟಿ ಹೋಮ್ ಡಾಕ್ಟರ್ ಫೌಂಡೇಶನ್ ನ ಆಡಳಿತ […]
ಪ್ರಾದೇಶಿಕ ಭಿನ್ನತೆಯನ್ನು ಮೀರಿ ಸಮುದಾಯದ ಸಾಮರಸ್ಯ ಗಟ್ಟಿಗೊಳ್ಳಲಿ:- ಶ್ರೀ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ
ಮಡಗಾವ್ (ಜ.19): ತುಳು, ಕನ್ನಡ ಎನ್ನುವ ಭಾಷಿಕವಾದ ಒಳ ಬಿನ್ನತೆ ಸಂಘಟನೆಯಲ್ಲಿ ಬರಬಾರದು. ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಪ್ರಾದೇಶಿಕ ಭಿನ್ನತೆಯನ್ನು ಮೀರಿ ಬಂಟ ಸಮುದಾಯದ ಹಾಗೂ ಸಮಾಜದ ಶ್ರೇಯೋಭಿವೃದ್ಧಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಶ್ರೀ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಗೋವಾದ ಲಕ್ಷ್ಮಿ ಎಂಪೈರ್ ಹೋಟೆಲ್ ನಲ್ಲಿ ಜನವರಿ 19 ರಂದು ಆಯೋಜಿಸಿದ ಗೋವಾ ಬಂಟರ ಸಂಘದ ರಜತ ಸಂಭ್ರಮ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿ ಮಾತನಾಡಿದರು. […]
ಡಾ. ಅಂಪಾರು ನಿತ್ಯಾನಂದ ಶೆಟ್ಟಿಯವರಿಗೆ ನಮ್ಮೂರ ಕೀರ್ತಿ ಕಳಶ ಪ್ರಶಸ್ತಿ ಪ್ರದಾನ
ಕುಂದಾಪುರ (ಜ,11): ಸೇವಾ ಚೇತನ ಟ್ರಸ್ಟ್ (ರಿ) ಮೂಡುಬಗೆ ಅಂಪಾರು ಇದರ ನಾಲ್ಕನೇ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 11ರಂದು ಅಂಪಾರು ಮೂಡುಬಗೆ ಶಾನ್ಕಟ್ಟು ಮೈದಾನದಲ್ಲಿ ನಡೆದ ನಮ್ಮೂರ ಸಂಭ್ರಮ ಕಾರ್ಯಕ್ರಮದಲ್ಲಿ ಸಂಘಟಕ, ಪ್ರಾಧ್ಯಾಪಕ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಅವರಿಗೆ 2024ರ ನಮ್ಮೂರ ಕೀರ್ತಿ ಕಳಶ ಪ್ರಶಸ್ತಿ ಪ್ರಧಾನವನ್ನು ಬೆಂಗಳೂರು ಗ್ರಾಮಾಂತರ ಲೋಕಸಭಾ ಸದಸ್ಯರು, ಜಯದೇವ ಹೃದ್ರೋಗ ಆಸ್ಪತ್ರೆಯ ಆಡಳಿತ ನಿರ್ದೇಶಕರೂ ಅದ ಡಾ. ಸಿ.ಎನ್. ಮಂಜುನಾಥ್ ಪ್ರಶಸ್ತಿ ಪ್ರದಾನ […]
ಗೋವಾ ಬಂಟರ ಸಂಘ ರಜತ ಸಂಭ್ರಮದ ಲಾಂಛನ ಬಿಡುಗಡೆ
ಪಣಜಿ(ಡಿ, 05): ಗೋವಾ ಬಂಟರ ಸಂಘದ ವತಿಯಿಂದ 2025 ರ ಜನವರಿ 19ರಂದು ನಡೆಯಲಿರುವ ರಜತ ಸಂಭ್ರಮ ಕಾರ್ಯಕ್ರಮದ ಲಾಂಛನ ಬಿಡುಗಡೆ ಡಿಸೆಂಬರ್ 01 ರಂದು ನಡೆದ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಕಾವಡಿ ಸದಾಶಿವ ಶೆಟ್ಟಿ ಅನಾವರಣ ಮಾಡಿದರು. ಗೋವಾ ಬಂಟರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀ ಸುನಿಲ್ ಶೆಟ್ಟಿ ಬೆಳ್ಳಂಪಳ್ಳಿ, ಕೋಶಾಧಿಕಾರಿ ಶ್ರೀ ಪ್ರಶಾಂತ್ ಶೆಟ್ಟಿ, ಸಂಘದ ಉಪಾಧ್ಯಕ್ಷರಾದ ಶ್ರೀ ವಿಜಯೇಂದ್ರ ಶೆಟ್ಟಿ ಕಬ್ಯಾಡಿ, […]
ಯುವ ಬಂಟರ ಸಂಘದ ವತಿಯಿಂದ ಯುವ ಸಾಧಕನಿಗೆ ಸನ್ಮಾನ
ಕುಂದಾಪುರ(ಅ,10 ): ಕುಂದಾಪುರ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ 2024 ನೇ ಸಾಲಿನ ತೆಲಂಗಾಣ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ನೆಡೆಸಿದ 10 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ 10 ಕ್ಕೆ 10 ಸಿಜಿಪಿಎ ಗಳಿಸುವ ಮೂಲಕ ತೆಲಂಗಾಣ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಂದಾಪುರ ತಾಲೂಕಿನ ತೆಕ್ಕೆಟ್ಟೆಯ ಮಲ್ಯಾಡಿ ಗ್ರಾಮದ ಯುವ ಸಾಧಕ ಶ್ರೀ ಮುಗ್ಧ ಶೆಟ್ಟಿ ಅವರನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕ […]
ಕುಂದಾಪುರ ಯುವ ಬಂಟರ ಸಂಘ : ಇಂಜಿನಿಯರ್ ಗೆ ಸನ್ಮಾನ
ಕುಂದಾಪುರ( ಸೆ,15): ಇಲ್ಲಿನ ತಾಲೂಕು ಯುವ ಬಂಟರ ಸಂಘದ ಆಶ್ರಯದಲ್ಲಿ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನದ ಅಂಗವಾಗಿ ಇಂಜಿನಿಯರ್ ನ್ನು ಸನ್ಮಾನಿಸುವ ಮೂಲಕ ಇಂಜಿನಿಯರ್ ದಿನಾಚರಣೆಯನ್ನು ಆಚರಿಸಲಾಯಿತು. ಇಂಜಿನಿಯರ್ ಪ್ರವೀಣ್ ಕುಮಾರ್ ಶೆಟ್ಟಿ ನಿರಕೋಡ್ಲು ಅವರನ್ನು ಕೋಟೇಶ್ವರದ ಅವರ ಸ್ವಗ್ರಹದಲ್ಲಿ ತಾಲೂಕು ಯುವ ಬಂಟರ ಸಂಘದ ಸ್ಥಾಪಕ ಅಧ್ಯಕ್ಷ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಹಾಗೂ ಜೆ.ಪಿ ಪ್ಯಾಶನ್ ರತ್ನಾಕರ್ ಶೆಟ್ಟಿ ,ಗುತ್ತಿಗೆದಾರರಾದ ಪ್ರಭಾಕರ್ ಶೆಟ್ಟಿ ಸನ್ಮಾನಿಸಿದರು.ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ […]